ಚಾಮರಾಜನಗರ | ಪೂರ್ವ ಮುಂಗಾರು ಮಳೆಗೆ ಮನೆ ಕುಸಿತ; ತಂದೆ ಮಕ್ಕಳು ಅಪಾಯದಿಂದ ಪಾರು

Date:

  • ಮನೆ ಗೋಡೆ ಕುಸಿದ ಪರಿಣಾಮ ಎರಡು ಬೈಕ್‌ಗಳು ಜಖಂ
  • ಮಳೆ ಸುರಿದಿದ್ದರಿಂದ ರೈತರಲ್ಲಿ ಸಂತಸ ಮೂಡಿದೆ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಮತ್ತು ಯಳಂದೂರು ತಾಲೂಕು ವ್ಯಾಪ್ತಿಯಲ್ಲಿ ಮುಂಗಾರು ಪೂರ್ವ ಮಳೆ ಧಾರಾಕಾರವಾಗಿ ಸುರಿದಿದೆ. ಯಳಂದೂರು ತಾಲೂಕಿನ ಕೋಮಾರನಪುರದಲ್ಲಿ ಮನೆಯೊಂದು ಕುಸಿದು‌ ಬಿದ್ದಿದ್ದು, ತಂದೆ, ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

“ಸೋಮವಾರ ತಡರಾತ್ರಿ ಬಿರುಸಿನ ಮಳೆ ಸುರಿದಿದೆ. ಮನೆಯ ಒಳಗಡೆ ನೀರು ಸೋರಲು ಆರಂಭವಾಯಿತು. ಮಗ ಪ್ರಜ್ವಲ್‌ನನ್ನು ಕರೆದುಕೊಂಡು ಮನೆಯಿಂದ ಹೊರ ಬರುತ್ತಿದ್ದಂತೆ ಮನೆ ಸಂಪೂರ್ಣವಾಗಿ ಕುಸಿದು ಬಿದ್ದಿತು” ಎಂದು ಕುಮಾರನಪುರದ ಲಿಂಗಾಯತರ ಬಡಾವಣೆಯ ಪುಟ್ಟಸ್ವಾಮಿ ಹೇಳಿದ್ದಾರೆ.

ಕೊಳ್ಳೇಗಾಲದ ಮುಡಿಗುಂಡ ಬಡಾವಣೆಯ ಮಹದೇವಮ್ಮ ಎಂಬುವರ ಮನೆ ಗೋಡೆ ಕುಸಿದಿದ್ದು, ಎರಡು ಬೈಕ್‌ಗಳು ಜಖಂ ಆಗಿವೆ. ಮಹದೇವಮ್ಮನ ಮನೆಯಲ್ಲಿದ್ದ ಒಂಬತ್ತು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯಳಂದೂರು‌ ತಾಲೂಕು ವ್ಯಾಪ್ತಿಯಲ್ಲಿ ರಾತ್ರಿ 11 ಗಂಟೆಯ ‌ನಂತರ ಧಾರಾಕಾರ ಮಳೆ ಸುರಿದಿದ್ದು, 7.15 ಸೆಂ.ಮೀ ಮಳೆಯಾಗಿದೆ. ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿಯಲ್ಲಿ 6.45 ಸೆಂ.ಮೀ ಮಳೆ ಬಿದ್ದಿದೆ.

ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ, ಜಕ್ಕಳ್ಳಿ, ಜಾಗೇರಿ, ಧನಗೆರೆ, ಸರಗೂರು, ನರಿಪುರ, ಗುಂಡೇಗಾಲ, ಪಾಳ್ಯ, ಕುಣಗಳ್ಳಿ, ಕುಂತೂರು, ಕೆಂಪನಪಾಳ್ಯ, ತಿಮ್ಮರಾಜಿಪುರ, ಮಧುವನಹಳ್ಳಿ,‌ ದೊಡ್ಡಿಂದುವಾಡಿ ಸೇರಿದಂತೆ ಅನೇಕ ಕಡೆ ಉತ್ತಮ ಮಳೆಯಾಗಿದೆ.

ಬಿಳಿಗಿರಿರಂಗನ ಬೆಟ್ಟದ ಸುತ್ತಮುತ್ತ ಮೂರು ತಾಸು ಮಳೆ ಸುರಿದಿದೆ. ಇದರಿಂದ ಕಾಫಿ ಬೆಳಗಾರರಲ್ಲಿ ಹರ್ಷ ಮೂಡಿಸಿದೆ.

ವಾರದಿಂದ ಅಲ್ಲಲ್ಲಿ ತುಂತುರು ಮಳೆಯಾಗುತ್ತಿತ್ತು. ಬಿತ್ತನೆ ಮಾಡಲು ರೈತರು ಸಿದ್ಧತೆಯಲ್ಲಿ ತೊಡಗಿದ್ದರು. ರಾತ್ರಿ ಸುರಿದ ಮಳೆಯಿಂದ ರೈತರಲ್ಲಿ ಸಂತಸ ಮೂಡಿದೆ. ದ್ವಿದಳ ದಾನ್ಯಗಳ ಬಿತ್ತನೆಗೆ ರೈತರು ಮುಂದಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ | ಚನ್ನಕೇಶವಸ್ವಾಮಿ ರಥೋತ್ಸವ: ವಿರೋಧದ ನಡುವೆಯೂ ಸೌಹಾರ್ದತೆ ಮೆರೆದ ಬೇಲೂರು

“ರಾತ್ರಿ 11ರಿಂದ ಬೆಳಗಿನ ಜಾವ ಎರಡು ಗಂಟೆಯ ತನಕ ಭರ್ಜರಿ ಮಳೆಯಾಯಿತು. ಕಾಡಂಚಿನ ಗ್ರಾಮಗಳ ರಸ್ತೆ ಸುತ್ತಮುತ್ತ ನೀರು ಹರಿದಿದ್ದು, ವಾತಾವರಣದಲ್ಲಿ ತಂಪು ತುಂಬಿದೆ” ಎಂದು ರೈತ ಶಿವರಾಜು ಸಂತಸ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...