ಚಾಮರಾಜನಗರ | ವಿಕಲಚೇತನರಿಗೆ ಸಾಧನ ಸಲಕರಣೆ ಸೌಲಭ್ಯಕ್ಕಾಗಿ ತಪಾಸಣಾ ಶಿಬಿರ

Date:

ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆ ಸೌಲಭ್ಯ ವಿತರಿಸುವ ಸಂಬಂಧ ತಪಾಸಣಾ ಶಿಬಿರ ಏರ್ಪಡಿಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ವಹಿಸಿ ಮಾತನಾಡಿದರು.

ಭಾರತ ಸರ್ಕಾರ ಸಾಮ್ಯದ ಬೆಂಗಳೂರಿನ ಅಲಿಮ್ಕೊ ಸಂಸ್ಥೆಯ ನೇತೃತ್ವದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆ ಒದಗಿಸುವ ಉದ್ದೇಶದಿಂದ ತಪಾಸಣಾ ಶಿಬಿರಗಳನ್ನು ಆಯೋಜಿಸಲು ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಸಂಭಂದಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಕಲಚೇತನರ ತಪಾಸಣೆ ನಡೆಸಿ ಅಗತ್ಯವಿರುವ ಉಪಕರಣಗಳನ್ನು ನೀಡುವ ಸಂಬಂಧ ಜಿಲ್ಲಾ ಕೇಂದ್ರ ಸೇರಿದಂತೆ, ಎಲ್ಲಾ ತಾಲೂಕು ಕೇಂದ್ರಗಳಲ್ಲಿ ತಪಾಸಣಾ ಶಿಬಿರಗಳನ್ನು ಏರ್ಪಡಿಸಬೇಕಿದೆ. ಈ ಶಿಬಿರದಲ್ಲಿ ವೈದ್ಯ, ತಜ್ಞರು, ತಾಂತ್ರಿಕ ಸಿಬ್ಬಂದಿ ಭಾಗವಹಿಸಲಿದ್ದಾರೆ. ಇವರಿಗೆ ನೆರವಾಗಲು ನರ್ಸಿಂಗ್ ವಿದ್ಯಾರ್ಥಿಗಳು, ಆರೋಗ್ಯ ಕಾರ್ಯಕರ್ತರನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ನಿಯೋಜಿಸಬೇಕೆಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಪಾಸಣಾ ಶಿಬಿರ ನಡೆಸಿಕೊಡಲು ಆಗಮಿಸಲಿರುವ ತಜ್ಞರು, ತಾಂತ್ರಿಕ ಸಿಬ್ಬಂದಿಗೆ ಅಗತ್ಯವಿರುವ ಪೀಠೋಪಕರಣ, ಕೊಠಡಿಗಳು, ತಪಾಸಣೆಗಾಗಿ ಈ ಹಿಂದೆ ನಿಗದಿಪಡಿಸಲಾಗಿದ್ದ ವಿಶಾಲ ಸ್ಥಳಗಳಲ್ಲಿ ಅವಶ್ಯಕ ಸೌಕರ್ಯಗಳನ್ನು ಒದಗಿಸಬೇಕು. ವಿಕಲಚೇತನರು ಶಿಬಿರದ ಸ್ಥಳಕ್ಕೆ ಬರಲು ಹಾಗೂ ತಪಾಸಣೆಯ ನಂತರ ಮರಳಿ ಊರಿಗೆ ತೆರಳಲು ಅಗತ್ಯ ಸಾರಿಗೆ ವ್ಯವಸ್ಥೆಯನ್ನು ಮಾಡಬೇಕು ಎಂದರು.

ಶಿಬಿರಕ್ಕೆ ಬರುವ ವಿಶೇಷಚೇತನರಿಗೆ ಉಪಹಾರ, ಶುದ್ದ ಕುಡಿಯುವ ನೀರು ವ್ಯವಸ್ಥೆಯಾಗಬೇಕು. ಶಿಬಿರಗಳಿಗೆ ವಿಶೇಷಚೇತನರು ತಪ್ಪದೇ ಪಾಲ್ಗೊಳ್ಳಲು ಅನುವಾಗುವಂತೆ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರ ಸಭೆಯನ್ನು ಮುಂಚಿತವಾಗಿ ಕರೆದು ಫಲಾನುಭವಿಗಳ ಪಟ್ಟಿ ತಯಾರಿಸಬೇಕು. ವಿಕಲಚೇತನರು, ಹಿರಿಯ ನಾಗರಿಕರ ನೊಂದಣಿ ಕಾರ್ಯ ಕೈಗೊಂಡು ಸಂಬಂಧಪಟ್ಟವರಿಗೆ ಸೂಕ್ತ ಜವಾಬ್ದಾರಿ ನಿರ್ವಹಿಸಲು ತಿಳಿಸಬೇಕು ಎಂದು ನಿರ್ದೇಶನ ನೀಡಿದರು.

ವಿಕಲಚೇತನರು ಮಾತ್ರವಲ್ಲದೇ 60 ವರ್ಷ ಮೀರಿದ ಹಿರಿಯ ನಾಗರಿಕರಿಗೆ ಶ್ರವಣ ಸಾಧನ, ನಡಿಗೆ ಕೋಲು ಇತ್ಯಾದಿ ಸೌಲಭ್ಯಗಳಿಗೆ ಅವಕಾಶವಿದೆ. ಶ್ರವಣ, ಕಣ್ಣು, ದಂತ, ಇನ್ನಿತರ ತೊಂದರೆಗಳಿರುವ ಹಿರಿಯ ನಾಗರಿಕರು ಕೂಡ ಶಿಬಿರದ ಸೌಲಭ್ಯ ಪಡೆಯಲು ಅನುಕೂಲ ಕಲ್ಪಿಸಬೇಕು. ಶಿಬಿರದ ಸಂದರ್ಭದಲ್ಲಿ ಯುಡಿಐಡಿ ಕಾರ್ಡ್ ವಿತರಣೆ, ವಿಕಲಚೇತನರ ಪಿಂಚಣಿ, ಇನ್ನಿತರ ಸೌಲಭ್ಯಗಳನ್ನು ಒದಗಿಸಲು ಏರ್ಪಾಡು ಮಾಡಬೇಕು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ‘ಸಮ್ಮಿಲನ-2025’ ರ ಸಂವಾದ

ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶೃತಿ, ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆಯ ಉಪನಿರ್ದೇಶಕ ಸುರೇಶ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮೀನಾಕ್ಷಿ, ಅಲಿಮ್ಕೊ ಸಂಸ್ಥೆಯ ಶಿಲ್ಪಾ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಎಂ. ವಿ. ಸುಧಾ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...