ಚಾಮರಾಜನಗರ‌ | ಮಕ್ಕಳ ಭವಿಷ್ಯ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ: ಸಚಿವ ಕೆ ವೆಂಕಟೇಶ್

Date:

ವೇಗವಾಗಿ ಬೆಳೆಯುತ್ತಿರುವ ತಾಂತ್ರಿಕತೆಗೆ ಅನುಗುಣವಾಗಿ ಶಿಕ್ಷಣ ನೀಡಿ ಮಕ್ಕಳ ಭವಿಷ್ಯ ರೂಪಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಹೇಳಿದರು.

ಚಾಮರಾಜನಗರದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮತ್ತು ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

“ಇಂದು ಪುಸ್ತಕಗಳಿಗಿಂತ ಕಂಪ್ಯೂಟರ್, ಮೊಬೈಲ್‍ಗಳಲ್ಲಿ ಶಿಕ್ಷಣದ ಹೆಚ್ಚಿನ ಜ್ಞಾನ ದೊರೆಯುತ್ತಿದೆ. ತಂತ್ರಜ್ಞಾನದ ಜತೆಗೆ ವೇಗವಾಗಿ ಬೆಳೆಯುತ್ತಿರುವ ಈಗಿನ ಶಿಕ್ಷಣ ಕ್ಷೇತ್ರದ ವ್ಯವಸ್ಥೆಗೆ ಹೊಂದಿಕೊಳ್ಳುವುದು ಶಿಕ್ಷಕರಿಗೆ ಅನಿವಾರ್ಯವಾಗಿದೆ” ಎಂದು ಸಚಿವರು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿಕ್ಷಕರು ವೇಗವಾಗಿ ಕಲಿಯದಿದ್ದರೆ ಮಕ್ಕಳಿಗೆ ಕಲಿಸಲು ಸಾಧ್ಯವಿಲ್ಲ. ಹಿಂದೆ ಜ್ಞಾನಕ್ಕಾಗಿ ಶಿಕ್ಷಣವಿತ್ತು. ಈಗ ಶಿಕ್ಷಣ ಕ್ಷೇತ್ರ ಸ್ಪರ್ಧಾತ್ಮಕವಾಗಿದ್ದು, ಕಲಿಕಾ ಪ್ರಕ್ರಿಯೆಯಲ್ಲಿ ಶಿಕ್ಷಕರಿಗೆ ಸಾಕಷ್ಟು ಸವಾಲುಗಳು ಎದುರಾಗಿವೆ. ಹಾಗಾಗಿ ಶಿಕ್ಷಕರಿಗೆ ಚಾಣಾಕ್ಷತೆಯಿಂದ ನಿಭಾಯಿಸುವ ಜವಾಬ್ದಾರಿ ಬೇಕು” ಎಂದರು.

“ಪ್ರತಿಯೊಬ್ಬರಿಗೂ ಶಿಕ್ಷಣ ನೀಡುವ ಉದ್ದೇಶದಿಂದ ಸರ್ಕಾರ ಕಡ್ಡಾಯ ಶಿಕ್ಷಣವನ್ನು ಜಾರಿಗೊಳಿಸಿದೆ. ಖಾಸಗಿ ಶಾಲೆಗಳ ಪೈಪೋಟಿಯಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಈ ಬಗ್ಗೆ ಚಿಂತನೆ ಅವಶ್ಯವಾಗಿದೆ. ವಿದ್ಯಾರ್ಥಿಗಳಿಗೆ ಶಿಕ್ಷಕರು ಅಗತ್ಯ ಮಾರ್ಗದರ್ಶನ ನೀಡಿ ಲಭ್ಯವಿರುವ ಸೌಲಭ್ಯ, ಸಂಪನ್ಮೂಲಗಳನ್ನು ಬಳಸಿಕೊಂಡು ಭಾರತದ ಸತ್ಪ್ರಜೆಗಳನ್ನಾಗಿ ರೂಪಿಸಬೇಕು. ಅಲ್ಲದೆ ಮುಂದಿನ ಪೀಳಿಗೆಗೆ ಸರ್ಕಾರಿ ಶಾಲೆಗಳನ್ನು ಉಳಿಸಿ, ಮುಂದುವರೆಸುವ ಮಹತ್ತರ ಹೊಣೆಗಾರಿಕೆ ಶಿಕ್ಷಕರ ಮೇಲಿದೆ” ಎಂದರು.

ನಿವೃತ್ತ ಪ್ರಾಂಶುಪಾಲ ಎಂ ಕೃಷ್ಣೇಗೌಡ ಮಾತನಾಡಿ, “ಇಡೀ ಸಮಾಜದಲ್ಲಿ ಹೆಚ್ಚು ಮಾತನಾಡುವ ಅವಕಾಶ ಶಿಕ್ಷಕರಿಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಬಹಳ ಕಾಲ ಉಳಿಯುವ ವ್ಯಕ್ತಿ ಎಂದರೆ ಅವರು ಶಿಕ್ಷಕರು ಮಾತ್ರ. ನಮ್ಮ ನಂತರದ ಪೀಳಿಗೆಗೆ ಮಾರ್ಗದರ್ಶನ ಮಾಡುವ ಹಂತದಲ್ಲಿ ಶಿಕ್ಷಕರು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ. ಶಿಕ್ಷಕರು ಶಿಕ್ಷಕ ವೃತ್ತಿಯನ್ನು ಪ್ರೀತಿಸಿ ಗೌರವಿಸಬೇಕು. ಈ ದೇಶದ ಭವಿಷ್ಯ ಅಡಗಿರುವುದು ಶಾಲೆಗಳಲ್ಲಿ, ತರಗತಿಗಳಲ್ಲಿ ಆಗಿರುವುದರಿಂದ ಶಿಕ್ಷಕರ ಜವಾಬ್ದಾರಿ ಅಧಿಕವಾಗಿದೆ. ಸಾತ್ವಿಕತೆಯಲ್ಲಿ ಶಕ್ತಿಯಿದೆ ಎಂಬುದನ್ನು ತೋರಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಶಿರೂರು ದುರಂತ | ಎರಡು ತಿಂಗಳ ಬಳಿಕ ಲಾರಿ ಸಹಿತ ಚಾಲಕ ಅರ್ಜುನ್ ಶವ ಪತ್ತೆ

ಅಧ್ಯಕ್ಷತೆ ಎಂಎಸ್ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ ಪುಟ್ಟರಂಗಶೆಟ್ಟಿ ಶಿಕ್ಷಕ ವೃತ್ತಿಯಲ್ಲಿ ಸಾಧನೆಗೈದ ಕಿರಿಯ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, ಸ್ಮರಣಿಕೆ, ಸೇವೆಯಿಂದ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಕಾವೇರಿ ಜಲಾನಯನ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪಿ ಮರಿಸ್ವಾಮಿ, ನಗರಸಭೆ ಅಧ್ಯಕ್ಷ ಎಸ್ ಸುರೇಶ್ ನಾಯಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್, ನಗರಸಭೆ ಉಪಾಧ್ಯಕ್ಷೆ ಮಮತ ಬಾಲಸುಬ್ರಹ್ಮಣ್ಯಂ, ಸದಸ್ಯ ಎಂ ಮಹೇಶ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್ ವಿ ಚಂದ್ರು, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿ ಟಿ ಕವಿತ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್, ಡಯಟ್ ಪ್ರಾಂಶುಪಾಲ ಕಾಶಿನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಶಿಕ್ಷಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...