ಚಾಮರಾಜನಗರ | ಮಲೆ ಮಹದೇಶ್ವರ ಬೆಟ್ಟ ಜಾತ್ರಾ ಮಹೋತ್ಸವ; ಸಕಲ ಸಿದ್ಧತೆಗೆ ಡಿಸಿ ಸೂಚನೆ

Date:

ಚಾಮರಾಜನಗರ ಜಿಲ್ಲೆಯ ಪ್ರಸಿದ್ದ ಯಾತ್ರಾ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಮಹಾ ಶಿವರಾತ್ರಿ ಹಾಗೂ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳ ಸೌಲಭ್ಯಕ್ಕೆ ಅಗತ್ಯ ಸಿದ್ದತೆಯನ್ನು ಸಮರ್ಪಕವಾಗಿ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಮಹಾ ಶಿವರಾತ್ರಿ ಹಾಗೂ ಯುಗಾದಿ ಜಾತ್ರಾ ಮಹೋತ್ಸವ ಸಂಬಂಧ ನಡೆದ ಪೂರ್ವಸಿದ್ದತಾ ಸಭೆಯಲ್ಲಿ ಮಾತನಾಡಿದ ಅವರು, “ಮಲೆ ಮಹದೇಶ್ವರ ಕ್ಷೇತ್ರಕ್ಕೆ ನಾಡಿನ ನಾನಾ ಭಾಗಗಳಲ್ಲದೇ ಹೊರ ರಾಜ್ಯಗಳಿಂದಲೂ ಲಕ್ಷಾಂತರ ಮಂದಿ ಆಗಮಿಸಲಿದ್ದಾರೆ. ಭಕ್ತರಿಗೆ ಕುಡಿಯುವ ನೀರು, ನೆರಳಿನ ವ್ಯವಸ್ಥೆ, ವಾಸ್ತವ್ಯ, ದಾಸೋಹ, ದೇವರ ದರ್ಶನಕ್ಕೆ ಅಗತ್ಯ ಸೌಕರ್ಯಗಳನ್ನು ಯಾವುದೇ ತೊಂದರೆಯಿಲ್ಲದೆ ಕಲ್ಪಿಸಬೇಕು. ಕ್ಷೇತ್ರದಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳಿವೆ. ಹೆಚ್ಚು ಸಂಖ್ಯೆಯಲ್ಲಿ ಭಕ್ತಾಧಿಗಳು ಬರಲಿರುವುದರಿಂದ ಕುಡಿಯುವ ನೀರಿನ ಮಾದರಿಗಳನ್ನು ಪರೀಕ್ಷಿಸಬೇಕು. ಪಾದಯಾತ್ರೆಯಲ್ಲಿ ಸಹ ಸಾಕಷ್ಟು ಮಂದಿ ಕ್ಷೇತ್ರಕ್ಕೆ ಆಗಮಿಸುವುದರಿಂದ ಮಾರ್ಗ ಮಧ್ಯೆ ಕುಡಿಯುವ ನೀರಿನ ವ್ಯವಸ್ಥೆ ಇರಬೇಕು. ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ನಿಷೇಧ ಇದ್ದು, ಪ್ಲಾಸ್ಟಿಕ್ ಬಾಟಲ್, ಪ್ಲಾಸ್ಟಿಕ್ ವಸ್ತು ಇತರೆ ತ್ಯಾಜ್ಯಗಳನ್ನು ಕೊಂಡೊಯ್ಯದಂತೆ ಸಾರ್ವಜನಿಕರಿಗೆ ಮನವರಿಕೆ ಮಾಡಬೇಕು” ಎಂದು ನಿರ್ದೇಶಿಸಿದರು.

“ಕ್ಷೇತ್ರದಲ್ಲಿ ನೈರ್ಮಲ್ಯಕ್ಕೆ ಹೆಚ್ಚು ಒತ್ತು ನೀಡಿ ಸಮರ್ಪಕವಾಗಿ ಶೌಚಾಲಯ, ಸ್ನಾನದ ವ್ಯವಸ್ಥೆ ಕಲ್ಪಿಸಬೇಕು. ಆರೋಗ್ಯ ಇಲಾಖೆಯಿಂದ ಹೆಚ್ಚುವರಿ ವೈದ್ಯರು, ಸಿಬ್ಬಂದಿ ನಿಯೋಜಿಸಿ ಅಗತ್ಯ ಔಷಧಗಳನ್ನು ದಾಸ್ತಾನು ಮಾಡಿಕೊಳ್ಳಬೇಕು. ಪಾದಯಾತ್ರಿಗಳು ಬರುವ ಹಿನ್ನೆಲೆ ಕೌದಳ್ಳಿ ಆರೋಗ್ಯ ಕೇಂದ್ರದಲ್ಲಿಯೂ ಪೂರ್ಣ ಅವಧಿಯಲ್ಲಿ ವೈದ್ಯಕೀಯ ಸೇವೆ ಲಭ್ಯವಾಗಬೇಕು. ಪಾದಯಾತ್ರೆಯಲ್ಲಿ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ನೇರವಾಗಿ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಬೇಕು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ತಮಿಳುನಾಡು ರಾಜ್ಯದ ಭಾಗಗಳಿಂದಲೂ ಸರ್ಕಾರಿ ಬಸ್ಸುಗಳು ಹೆಚ್ಚು ನಿಯೋಜನೆಯಾಗಲಿವೆ. ನಿಗಮದ ಅಧಿಕಾರಿಗಳನ್ನು ಕ್ಷೇತ್ರಕ್ಕೆ ನಿಯೋಜಿಸಿ ಜನರ ಅಗತ್ಯಕ್ಕೆ ತಕ್ಕಂತೆ ಬಸ್ಸುಗಳನ್ನು ಮುಂಚಿತವಾಗಿಯೇ ವ್ಯವಸ್ಥೆ ಮಾಡಲಾಗುವುದು. ಎಲ್ಲಿಯೇ ಆಗಲಿ ಬಸ್ಸುಗಳಿಗೆ ಯಾವುದೇ ಕೊರತೆಯಾಗದಿರಲಿ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಎಂ ಆರ್ ಮಂಜುನಾಥ್‌ ಮಾತನಾಡಿ, “ಕ್ಷೇತ್ರದಲ್ಲಿ ಭಕ್ತರು, ಗಣ್ಯರು ಸೇರಿದಂತೆ ಪ್ರತಿಯೊಬ್ಬರಿಗೂ ಮಾಹಿತಿ ನೀಡುವ ಕಾರ್ಯ ಸಮರ್ಪಕವಾಗಿ ನಡೆಯಬೇಕು. ದೇವಾಲಯದಲ್ಲಿ ನಡೆಯುವ ವಿಶೇಷ ಪೂಜೆ ಇನ್ನಿತರ ಕೈಂಕರ್ಯಗಳ ಬಗ್ಗೆ ಎಲ್ಇಡಿ ಮೂಲಕ ವೀಕ್ಷಣೆಗೆ ಅವಕಾಶ ಕಲ್ಪಿಸಲು ಕ್ರಮವಹಿಸಬೇಕು. ನಿಗದಿಪಡಿಸಿದ ಸ್ಥಳಗಳಲ್ಲಿ ವಾಹನ ನಿಲುಗಡೆಯಾಗಬೇಕು. ಸುಸೂತ್ರವಾಗಿ ಜಾತ್ರೆ ನಡೆಯಲು ಪೂರಕವಾಗಿರುವ ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಬೇಕು” ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಮಾತನಾಡಿ, “ಕುಡಿಯುವ ನೀರಿನ ವ್ಯವಸ್ಥೆಗಳನ್ನು ಪರಿಶೀಲಿಸಲಾಗುವುದು. ಶುದ್ದ ಕುಡಿಯುವ ನೀರು ಸಂಗ್ರಹಣೆ ಪೂರೈಕೆ ಬಗ್ಗೆ ಖಾತರಿ ಪಡಿಸಿಕೊಳ್ಳಲಾಗುವುದು. ಗ್ರಾಮ ಪಂಚಾಯಿತಿ ವತಿಯಿಂದ ಜಾತ್ರಾ ದಿನಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗುವುದು” ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿ ಟಿ ಕವಿತಾ ಅವರು ಮಾತನಾಡಿ, “ಶಿವರಾತ್ರಿ ಜಾತ್ರೆಗೆ ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದೆ. ಇಬ್ಬರು ಡಿವೈಎಸ್‍ಪಿ, 9 ಇನ್ಸ್ಪೆಕ್ಟರ್, 32 ಸಬ್‍ ಇನ್ಸ್ಪೆಕ್ಟರ್, 67 ಸಹಾಯಕ ಸಬ್‍ ಇನ್ಸ್ಪೆಕ್ಟರ್, 421 ಕಾನ್ಸ್ಟೇಬಲ್, 98 ಮಹಿಳಾ ಪೊಲೀಸರು, 401 ಗೃಹ ರಕ್ಷಕ ದಳ ಸಿಬ್ಬಂದಿ, ಡಿ ಆರ್ 4 ತುಕಡಿ, ಕೆಎಸ್‍ಆರ್‌ಪಿ 1 ತುಕಡಿಯನ್ನು ನಿಯೋಜಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಎ ಇ ರಘು ಮಾತನಾಡಿ, “ಮಹಾ ಶಿವರಾತ್ರಿ ಜಾತ್ರೆ ಫೆಬ್ರವರಿ 25 ರಿಂದ ಆರಂಭವಾಗಲಿದ್ದು, ಮಾರ್ಚ್ 1 ರವರೆಗೆ ನಡೆಯಲಿದೆ. ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 27 ರಿಂದ 30 ರವರೆಗೆ ಜರುಗಲಿದೆ. ಜಾತ್ರಾ ಅವಧಿಯಲ್ಲಿ ಭಕ್ತಾಧಿಗಳಿಗೆ ವಿಶೇಷ ದಾಸೋಹ ಇರಲಿದ್ದು, ಬೆಳಿಗ್ಗೆ 7 ರಿಂದ ಮಧ್ಯರಾತ್ರಿ 12 ಗಂಟೆಯವರೆಗೂ ನಿರಂತರವಾಗಿ ನಡೆಯಲಿದೆ. ಭಕ್ತಾಧಿಗಳ ಮೂಲ ಸೌಕರ್ಯಕ್ಕಾಗಿ ಎಲ್ಲ ವ್ಯವಸ್ಥೆಳಿಗೆ ಕ್ರಮ ವಹಿಸಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಸರ್ಕಾರಗಳು ಬದಲಾದರೂ ಶೋಷಣೆ ನೀತಿಗಳು ಬದಲಾಗಿಲ್ಲ: ಚಂದ್ರಶೇಖರ ಮೇಟಿ

ಸಭೆಯಲ್ಲಿ ಸಾಲೂರು ಬೃಹನ್ಮಠದ ಡಾ ಶಾಂತ ಮಲ್ಲಿಕಾರ್ಜುನ ಸ್ವಾಮಿ, ಮಲೈ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ನಾಮ ನಿರ್ದೇಶಿತ ಸದಸ್ಯ ಗಂಗನ ತಿಮ್ಮಯ್ಯ, ಭಾಗ್ಯಮ್ಮ, ಮಹದೇವಪ್ಪ ಬಿ, ಮರಿಸ್ವಾಮಿ, ಆರ್ ಎಸ್ ಕುಮಾರ ವಿಜಯ, ದೇವಾಲಯದ ಅರ್ಚಕ ಕೆ ವಿ ಮಾದೇಶ್, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಅಧಿಕಾರಿ ಪರಮೇಶ್ವರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...