ಚಾಮರಾಜನಗರ | ಮಲೆ ಮಹದೇಶ್ವರ ಕಾವ್ಯವು ಕರ್ನಾಟಕಕ್ಕೆ ಉತ್ತಮ ಕೊಡುಗೆ: ಸಚಿವ ಕೆ ವೆಂಕಟೇಶ್

Date:

ಕನ್ನಡ ಭಾಷೆಯ ವಿಷಯದಲ್ಲಿ ಚಾಮರಾಜನಗರ ‘ಭಾಷೆಯ ತೊಟ್ಟಿಲು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಹೇಳಿದರು.

ಚಾಮರಾಜನಗರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾನತಾಡಿದರು. “ಪಶ್ಚಿಮದ ಮೂಲೆಹೊಳೆಯಿಂದ ಪೂರ್ವದ ಹೊಗೇನಕಲ್ ವರೆಗಿನ ಪ್ರದೇಶಗಳಲ್ಲಿ ಗಟ್ಟಿ ಕನ್ನಡ ಭಾಷೆ ಆಡುವ ಜನ ಸಮೂಹಗಳಿವೆ. ನೆರೆ ರಾಜ್ಯಗಳ ಆಳ್ವಿಕೆಯ ಒತ್ತಡಗಳಿಗೆ ಸಿಲುಕಿಕೊಂಡು ಆನಂತರ ಏಕೀಕರಣದ ಜೊತೆ ಕರ್ನಾಟಕಕ್ಕೆ ಸೇರಿದ ಪ್ರದೇಶಗಳು ಸೇರಿದಂತೆ ಜಿಲ್ಲೆಯ ಯಾವುದೇ ಭಾಗದ ಜನರು ಕನ್ನಡವನ್ನು ಬಿಡದೆ ಹಾಗೂ ನೆರೆ ಹೊರೆಯ ಅನ್ಯ ಭಾಷೆಗಳಿಗೆ ಪ್ರಭಾವಿತರಾಗದಿರುವುದು ಹೆಮ್ಮೆಯ ವಿಷಯ” ಎಂದರು.

“ಸಾಹಿತ್ಯದ ವಿಷಯದಲ್ಲಿ ಜಿಲ್ಲೆಯ ಜಾನಪದ ಸಾಹಿತ್ಯ ಸರಿಸಾಟಿ ಇಲ್ಲದ್ದು. ಜಗತ್ತಿನ ಜಾನಪದ ಕಾವ್ಯದಲ್ಲೇ ಉನ್ನತ ಸ್ಥಾನ ಗಳಿಸಿರುವ ಮಲೆ ಮಹದೇಶ್ವರ ಕಾವ್ಯ ಕರ್ನಾಟಕಕ್ಕೆ ನಮ್ಮ ಉತ್ತಮ ಕೊಡುಗೆಯಾಗಿದೆ. ಮಂಟೇಸ್ವಾಮಿ, ಬಿಳಿಗಿರಿರಂಗ, ಸಿದ್ದಪ್ಪಾಜಿ ಕಾವ್ಯಗಳು ನಮ್ಮ ಜಿಲ್ಲೆಯ ಕೊಡುಗೆ. ಕಂಸಾಳೆ, ಗೊರವರ ನೃತ್ಯ, ವೀರಭದ್ರ ನೃತ್ಯ ಮತ್ತು ತಂಬೂರಿ, ನೀಲಗಾರರು ಮುಂತಾದವರ ಸಾಂಸ್ಕೃತಿಕ ಪರಂಪರೆ ಜಿಲ್ಲೆಗೆ ಕೀರ್ತಿ ತಂದಿದೆ” ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಯ ಸಾಹಿತಿಗಳು ಕನ್ನಡ ಕಾವ್ಯ, ಕಾದಂಬರಿ, ನಾಟಕ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಅಮೂಲ್ಯವಾದುದು. ತ್ರಿಭಾಷಾ ಸೂತ್ರದಡಿ ಕನ್ನಡವನ್ನು ಮುಖ್ಯಭಾಷೆಯನ್ನಾಗಿಸಿದ ಗೋಕಾಕ ಚಳುವಳಿಯ ನೇತಾರ ಹಾಗೂ ಕನ್ನಡ ಚಲನಚಿತ್ರದ ಮೇರು ಪ್ರತಿಭೆ ಡಾ.ರಾಜ್ ಕುಮಾರ್, ಕನ್ನಡದ ಶ್ರೇಷ್ಠ ಲೇಖಕ, ಗೀತಕಾರ ಹಾಗೂ ಕವಿ ಜಿ ಪಿ ರಾಜರತ್ನಂ ಹಾಗೂ ಶ್ರೇಷ್ಠ ಕವಯತ್ರಿ ಸಂಚಿಯ ಹೊನ್ನಮ್ಮ ಅವರು ಈ ಜಿಲ್ಲೆಯ ಹೆಮ್ಮೆಯ ಕೊಡುಗೆ” ಎಂದು ವರ್ಣಿಸಿದರು.

ಈ ಸುದ್ದಿ ಓದಿದ್ದೀರಾ? ಕನ್ನಡದ ಮೊದಲ ಸಾಮ್ರಾಜ್ಯಕ್ಕೆ ಸೇನಾ ನೆಲೆ ಒದಗಿಸಿದ್ದು ಚಿತ್ರದುರ್ಗ: ಸಚಿವ ಡಿ ಸುಧಾಕರ್

ಶಾಸಕ ಸಿ ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಸಿ ಟಿ ಶಿಲ್ಪಾನಾಗ್, ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಸೇರಿದಂತೆ ಇತರರು ಇದ್ದರು.

ಜಿಲ್ಲಾದ್ಯಂತ 68ನೇ ಕರ್ನಾಟಕ ರಾಜ್ಯೋತ್ಸವದ ಸಂಭ್ರಮ ಕಳೆಗಟ್ಟಿದ್ದು, ಜಿಲ್ಲಾಡಳಿತ, ಕನ್ನಡ ಪರ ಸಂಘಟನೆಗಳು, ಶಾಲಾ ಕಾಲೇಜುಗಳಲ್ಲಿ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನಡೆಯಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...