ಚಾಮರಾಜನಗರ | ಮನಿ ಡಬ್ಲಿಂಗ್ ಪ್ರಕರಣ; ಪಿಎಸ್ಐ ಪರಾರಿ

Date:

ಚಾಮರಾಜನಗರ ಕ್ರೈಮ್ ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ನಾಲ್ಕು ಮಂದಿ ಮನಿ ಡಬ್ಲಿಂಗ್ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದಾರೆ. ಈ ನಾಲ್ವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ಬಿ. ಟಿ. ಕವಿತಾ ಅಮಾನತು ಮಾಡಿದ್ದಾರೆ.

ಸೈಬರ್ ಕ್ರೈಮ್ ನ ಪಿಎಸ್ಐ ಅಯ್ಯನಗೌಡ, ಕಾನ್ಸ್ಟೇಬಲ್ ಮೋಹನ್, ಮಹೇಶ್ ಹಾಗೂ ಟೌನ್ ಸ್ಟೇಷನ್ ಕಾನ್ಸ್ಟೇಬಲ್ ಬಸವಣ್ಣ ತಲೆ ಮರೆಸಿಕೊಂಡಿರುವ ಸಿಬ್ಬಂದಿಗಳಾಗಿದ್ದಾರೆ. ತಮಿಳುನಾಡು ಮೂಲದ ಉದ್ಯಮಿಯೊಬ್ಬರಿಗೆ ₹3.70 ಲಕ್ಷ ರೂಪಾಯಿ ಹಣವನ್ನು ಡಬಲ್ ಮಾಡುವುದಾಗಿ ನಂಬಿಸಿ, ವಂಚಿಸಿದ್ದರು ಎನ್ನಲಾಗಿದೆ.

ತಮಿಳುನಾಡು ಮೂಲದ ಉದ್ಯಮಿ ಸಚ್ಚಿದಾನಂದ ಮೂರ್ತಿಗೆ ಜುಲೈ. 26 ರಂದು ಸಯ್ಯದ್ ಅನ್ಸಾರಿ ಹಾಗೂ ಇಮ್ರಾನ್ ಕರೆ ಮಾಡಿ ₹3 ಲಕ್ಷ ರೂಪಾಯಿ ನೀಡುವಂತೆ ತಿಳಿಸಿ ತಿಂಗಳೊಳಗಾಗಿ ಡಬಲ್ ಮಾಡಿ ಕೊಡುವುದಾಗಿ ನಂಬಿಸಿ ಹೋಟೆಲ್ ಗೆ ಕರೆಸಿರುತ್ತಾರೆ. ಮೊದಲೇ ಪೂರ್ವ ಸಿದ್ಧತೆಯಲ್ಲಿದ್ದ ತಂಡ ಪಿಎಸ್ಐ ಅಯ್ಯನಗೌಡ ಅವರಿಗೆ ತಿಳಿಸಿದಾಗ, ತಕ್ಷಣವೇ ಸಿಬ್ಬಂದಿಗಳೊಡನೆ ಹೋಟೆಲ್ ಮೇಲೆ ದಾಳಿ ಮಾಡಿದಂತೆ ನಾಟಕವಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ದಾಖಲು ಮಾಡಬಾರದು ಎಂದರೆ ₹4 ಲಕ್ಷ ರೂಪಾಯಿ ನೀಡುವಂತೆ ಬಲವಂತವಾಗಿ ಧಮ್ಕಿ ಹಾಕಿದ ಹಿನ್ನಲೆಯಲ್ಲಿ ಉದ್ಯಮಿ ತನ್ನ ಬಳಿಯಿದ್ದ ₹3 ಲಕ್ಷ ರೂಪಾಯಿ ನೀಡಿದ್ದಾರೆ. ಬಳಿಕ ಫೋನ್ ಪೇ ಮೂಲಕ ಅನ್ಸಾರಿ ಎಂಬಾತನ ಖಾತೆಗೆ 70 ಸಾವಿರ ಆನ್ಲೈನ್ ವರ್ಗಾವಣೆ ಮಾಡಿಸಿಕೊಂಡಿರುತ್ತಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಕರ್ತವ್ಯಲೋಪ; ಇನ್ಸ್ಪೆಕ್ಟರ್ ಲಕ್ಷ್ಮಿಕಾಂತ್ ತಳವಾರ್ ಅಮಾನತ್ತು

ಉದ್ಯಮಿ ಸಚ್ಚಿದಾನಂದ ಮೂರ್ತಿ ಪ್ರಕರಣದ ಸಂಭಂದ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಸಂಪೂರ್ಣ ಮಾಹಿತಿ ಒದಗಿಸಿ ದೂರು ದಾಖಲಿಸಿದ ಹಿನ್ನಲೆಯಲ್ಲಿ ಆರೋಪಿಗಳಾದ ಅನ್ಸಾರಿ ಹಾಗೂ ಸಯ್ಯದ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆದರೇ, ನಾಲ್ವರು ಪೊಲೀಸ್ ಸಿಬ್ಬಂದಿಗಳು ಪರಾರಿಯಾಗಿದ್ದು, ಇವರುಗಳ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...