ಚಾಮರಾಜನಗರ | ನಗರಸಭೆ ಪೌರಾಯುಕ್ತ ರಾಮದಾಸ್ ಕರ್ತವ್ಯದಿಂದ ಬಿಡುಗಡೆ

Date:

ಚಾಮರಾಜನಗರ ನಗರಸಭೆ ಪೌರಾಯುಕ್ತ ಎಸ್. ವಿ. ರಾಮದಾಸ್ ಅವರನ್ನು ಕರ್ತವ್ಯಲೋಪ ಹಾಗೂ ಪೌರಾಯುಕ್ತ ಹುದ್ದೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸದೆ ಇರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಕರ್ತವ್ಯದಿಂದ ಬಿಡುಗಡೆಗೊಳಿಸಿ ಮೂಲ ಹುದ್ದೆಯಾದ ತೋಟಗಾರಿಕೆ ಇಲಾಖೆಯ ಸಕ್ಷಮ ಪ್ರಾಧಿಕಾರದಲ್ಲಿ ವರದಿ ಮಾಡಿಕೊಳ್ಳುವಂತೆ ಆದೇಶ ಹೊರಡಿಸಿದ್ದಾರೆ.

ರಾಮದಾಸ್ ಅವರ ವಿರುದ್ಧ ಹಲವಾರು ಆರೋಪಗಳಿವೆ. ಪ್ರಮುಖವಾಗಿ ನಗರಸಭೆ ಕೌನ್ಸಿಲ್ ಸಭೆಯಲ್ಲಿ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿದ್ದ ಕಾಮಗಾರಿಗಳ ಬದಲಾಗಿ, ತಮಗೆ ಅನುಕೂಲವಾದ ಕಾಮಗಾರಿಗಳನ್ನು ಕೌನ್ಸಿಲ್ ಗಮನಕ್ಕೆ ತರದೆಯೇ ಬದಲಾಯಿಸಿಕೊಂಡು, ನಖಲಿ ನಡಾವಳಿಗಳನ್ನು ಸಲ್ಲಿಸಿ ಅಧಿಕಾರ ದುರುಪಯೋಗ ಮಾಡಿರುವ ಬಗ್ಗೆ ನಗರಸಭೆ ಅಧ್ಯಕ್ಷರು ಜಿಲ್ಲಾಧಿಕಾರಿಯವರಿಗೆ ದಾಖಲೆ ಸಮೇತ ದೂರು ನೀಡಿದ್ದರು.

ಇದಲ್ಲದೇ, ಚಾಮರಾಜನಗರ ಪಟ್ಟಣದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜು ಮಾಡುವ ಲೈನ್ ಪದೇ ಪದೇ ದುರಸ್ಥಿಯಾಗುತ್ತಿದ್ದರು ಯಾವುದೇ ಕ್ರಮ ಕೈಗೊಳ್ಳದೆ ವಿಫಲರಾಗಿದ್ದರು. ಪ್ರಾದೇಶಿಕ ಆಯುಕ್ತರ ನ್ಯಾಯಾಲಯಕ್ಕೆ ದಾಖಲಾತಿ ಸಲ್ಲಿಸದೇ ನ್ಯಾಯಾಲಯಕ್ಕೆ ಅಗೌರವ ತೋರಿದ್ದಾರೆ ಎನ್ನಲಾಗಿದೆ. 15 ನೇ ಹಣಕಾಸು ಆಯೋಗದ ಅನುದಾನವನ್ನು ಸಂಪೂರ್ಣವಾಗಿ ವೆಚ್ಚ ಮಾಡದೆ ನಿರ್ಲಕ್ಷ್ಯ ವಹಿಸಿರುವುದು ಸೇರಿದಂತೆ ಅನೇಕ ಕರ್ತವ್ಯಲೋಪ ಎಸಗಿರುವುದನ್ನು ಜಿಲ್ಲಾಧಿಕಾರಿಯವರು ಆದೇಶ ಪ್ರತಿಯಲ್ಲಿ ಉಲ್ಲೇಖ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಫಾಯಿ ಕರ್ಮಚಾರಿಗಳಿಗೆ ಮನೆ ನಿರ್ಮಿಸಲು ಸೂಕ್ತ ನಿವೇಶನ ಗುರುತಿಸದೇ ಇರುವುದು, ಪೌರ ಕಾರ್ಮಿಕರಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸದೆ ಇರುವುದು, ನ್ಯಾಯಾಲಯ ರಸ್ತೆ ಪೂರ್ಣಗೊಳಿಸುವಂತೆ ಆದೇಶ ಪಾಲನೆ ಮಾಡದಿರುವುದು, ಜೊತೆಗೆ ನ್ಯಾಯಾಲಯ ರಸ್ತೆ ಅಭಿವೃದ್ಧಿ ಪಡಿಸಲು ಭೂ ಸ್ವಾಧೀನ ಕೈಗೊಳ್ಳಬೇಕಿದ್ದ ಕಟ್ಟಡ, ಮನೆ ಮಾಲೀಕರಿಂದ ಅನುಮತಿ, ಪಾರದರ್ಶಕತೆ ಕಾಯ್ದುಕೊಂಡು ಸೂಕ್ತ ಪರಿಹಾರ ನಿಗದಿಗೊಳಿಸುವ ಹೊಣೆಗಾರಿಕೆ ನಿಭಾಯಿಸದೆ ನಿರ್ಲಕ್ಷ್ಯ ವಹಿಸಿದ್ದು ಸಾಬೀತಾಗಿದೆ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಇ ಖಾತಾ ಅಭಿಯಾನವನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಆಸ್ತಿ, ಇ ಖಾತೆ ನೀಡುವಂತೆ ನಿರ್ದೇಶನವಿದ್ದರೂ ಒಟ್ಟು 4787 ಅನಧಿಕೃತ ಆಸ್ತಿಗಳಿಗೆ ಈವರೆಗೆ ಕೇವಲ 860 ಬಿ ಖಾತಾ ನೀಡಿ ಶೇ. 17% ರಷ್ಟು ಸಾಧನೆ ಮಾಡುವ ಮೂಲಕ ಸಾರ್ವಜನಿಕರಿಗೆ ಅನಾನುಕೂಲ ಮಾಡಿರುವುದು ಸೇರಿದಂತೆ ಹಲವಾರು ವಿಷಯಗಳಲ್ಲಿ ಕರ್ತವ್ಯಲೋಪ ಹಾಗೂ ಜವಾಬ್ದಾರಿಯುತವಾಗಿ ಹುದ್ದೆ ನಿರ್ವಹಣೆ ಮಾಡದ ಕಾರಣಗಳಿಗಾಗಿ ಜಿಲ್ಲಾಧಿಕಾರಿ ಕರ್ತವ್ಯದಿಂದ ಬಿಡುಗಡೆಗೊಳಿಸಿ ಆದೇಶ ಮಾಡಿದ್ದಾರೆ.

ತೆರವಾದ ಸ್ಥಾನಕ್ಕೆ ನಗರಸಭೆ ಕಾರ್ಯಪಾಲಕ ಎಂಜಿನಿಯರ್ ರೂಪ ಅವರನ್ನು ಪ್ರಭಾರ ಪೌರಾಯುಕ್ತರಾಗಿ ನೇಮಕ ಮಾಡಲಾಗಿದ್ದು, ಅಧಿಕಾರ ವಹಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಜೆಎಸ್ಎಸ್ ವತಿಯಿಂದ ‘ಮೆಡೈಕ್ ಇನ್ನೊವೇಶನ್-ಪ್ರತಿಭಾ ಅಭಿವೃದ್ದಿ’ ಕಾರ್ಯಕ್ರಮ

ಕೊಡಗಿನಲ್ಲೂ ಲೋಪ ಸಾಬೀತು :

ಇದೇ ಎಸ್. ವಿ. ರಾಮದಾಸ್ ಅವರು ಕೊಡಗು ಜಿಲ್ಲೆ ಮಡಿಕೇರಿ ನಗರಸಭೆ ಪೌರಾಯುಕ್ತರಾಗಿದ್ದ ಸಂದರ್ಭದಲ್ಲಿ ಒಂದೇ ಕಾಮಗಾರಿಗೆ ಎರಡು ಬಿಲ್ ಮಾಡಿಕೊಟ್ಟಿರುವ ಆರೋಪ ಸಾಬೀತಾಗಿದೆ. ಈ ಕುರಿತಾಗಿ ನಗರಸಭೆ ಸದಸ್ಯ ಅಮೀನ್ ಮೋಹಿಸಿನ್ ಅವರು ಗಂಭೀರ ಆರೋಪ ಮಾಡಿದ್ದರು. ಈ ಬಗ್ಗೆ ದೂರು ನೀಡಿದ್ದರಿಂದ ತನಿಖೆ ನಡೆದು ಸಾಬೀತಾಗಿತ್ತು. ಈ ಕುರಿತಾಗಿ ಕ್ರಮ ಕೈಗೊಳ್ಳುವಂತೆ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...