ಚಾಮರಾಜನಗರ | ನಗರಸಭೆ ಬಜೆಟ್ ಮಂಡನೆ: ₹1.87 ಕೋಟಿ ಉಳಿತಾಯ

Date:

ಚಾಮರಾಜನಗರದ ನಗರಸಭೆ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ನಗರಸಭೆ ಆಡಳಿತಾಧಿಕಾರಿಯಾದ ಶ್ರೀರೂಪ 2026-27ನೇ ಸಾಲಿನಲ್ಲಿ ₹1.87 ಕೋಟಿ ಉಳಿತಾಯ ಬಜೆಟ್ ಮಂಡಿಸಿದ್ದಾರೆ.

₹77.11 ಕೋಟಿ ರೂಪಾಯಿ ಬಜೆಟ್ ನಲ್ಲಿ ಮೂಲಸೌಕರ್ಯಕ್ಕೆ ಒತ್ತು ನೀಡಲಾಗಿದೆ. ಕುಡಿಯುವ ನೀರು, ಒಳಚರಂಡಿ, ಸ್ವಚ್ಛತೆ, ಉದ್ಯಾನವನ ನಿರ್ವಹಣೆಗೆ ₹75.23 ಕೋಟಿ ರೂಪಾಯಿ ವ್ಯಯಿಸಲಾಗಿದೆ.

ಸದರಿ ಸಾಲಿನಲ್ಲಿ ಆಸ್ತಿ ತೆರಿಗೆ, ದಂಡ ಪಾವತಿ, ಘನತ್ಯಾಜ್ಯ ನಿರ್ವಹಣೆ ಕರ, ನೀರಿನ ಶುಲ್ಕ, ಶುದ್ಧ ಕುಡಿಯುವ ನೀರಿನ ಘಟಕ, ಅಂಗಡಿ-ಮಳಿಗೆ ಬಾಡಿಗೆ, ತರಕಾರಿ ಮಾರುಕಟ್ಟೆ ಶುಲ್ಕ, ಉದ್ದಿಮೆ ಪರವಾನಗಿ, ಅಭಿವೃದ್ಧಿ ಮೇಲ್ವಿಚಾರಣಾ ಶುಲ್ಕ, ರಸ್ತೆ ಅಗೆತ ಶುಲ್ಕ, ಕಟ್ಟಡ ಪರವಾನಗಿ, ಮಾರುಕಟ್ಟೆ ಶುಲ್ಕ, ಉದ್ದಿಮೆ ಪರವಾನಗಿ ಶುಲ್ಕ, ಸಾರ್ವಜನಿಕ ಶೌಚಾಲಯ ಬಾಡಿಗೆ, ಒಳಚರಂಡಿ ಸಂಪರ್ಕ ಶುಲ್ಕ, ಮುದ್ರಾಂಕ ಶುಲ್ಕ, ಬ್ಯಾಂಕ್ ಬಡ್ಡಿ, ಠೇವಣಿ ಮೇಲಿನ ಬಡ್ಡಿ, ಅಕ್ರಮ ನೀರಿನ ಸಂಪರ್ಕ ದಂಡ ವಸೂಲಿ, ಖಾತೆ ಶುಲ್ಕ, ಖಾತೆ ಬದಲಾವಣೆ ಶುಲ್ಕ, ಜಾಹೀರಾತು ತೆರಿಗೆ, ಗುತ್ತಿಗೆದಾರರ ಭದ್ರತಾ ಠೇವಣಿ, ಶೌಚಾಲಯಗಳ ಹರಾಜು, ಅಂಗಡಿ ಮುಂಗಡ ಠೇವಣಿ ಹಣ ಸೇರಿದಂತೆ ಇನ್ನಿತರೇ ಮೂಲಗಳಿಂದ ₹21.17 ಕೋಟಿ ಆದಾಯ ನಿರೀಕ್ಷಿಸಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

16ನೇ ಹಣಕಾಸು ಆಯೋಗದ ಅನುದಾನ, ವೇತನ ಅನುದಾನ, ಮುಕ್ತನಿಧಿ, ಎಸ್ ಎಫ್ ಸಿ ವಿಶೇಷ ಅನುದಾನ, ಎಸ್ಸಿಎಸ್ಪಿ-ಟಿಎಸ್ಪಿ, ಬೀದಿ ದೀಪ, ನೀರು ಸರಬರಾಜು, ವಿದ್ಯುತ್ ಅನುದಾನ, ಕುಡಿಯುವ ನೀರು, ಗೃಹ ಭಾಗ್ಯ ಯೋಜನೆ ಅನುದಾನ, ಸ್ವಚ್ಛ ಕಲಿಕಾ ಕೇಂದ್ರ, ಸ್ವಚ್ಛ ಭಾರತ್ ಅಭಿಯಾನ ಅನುದಾನ, ಇಂದಿರಾ ಕ್ಯಾಂಟೀನ್ ನಿರ್ವಹಣೆ, ವಿದ್ಯುತ್ ಚಿತಗಾರ ನಿರ್ಮಾಣ, ಡೇ ನಲ್ಮ್ ಅನುದಾನ, ಜನಗಣತಿ ಅನುದಾನ ಸೇರಿ ₹37.78 ಕೋಟಿ ಅನುದಾನ ನಿರೀಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದರು.

ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, “ಚಾಮರಾಜನಗರಕ್ಕೆ ಕುಡಿಯುವ ನೀರಿನ ಪೂರೈಕೆಗಾಗಿ ಮಾಲಂಗಿ ಯೋಜನೆ ಅನುಷ್ಠಾನವಾಗಲಿದ್ದು, ಜನರಿಗೆ ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆಯಾಗಬೇಕು. ಮಳೆಗಾಲಕ್ಕೂ ಮುನ್ನ ಕೆರೆಗಳ ಹೂಳು ತೆಗಿಸಬೇಕು. ನಗರಸಭೆಯಲ್ಲಿ ಪೌರಕಾರ್ಮಿಕರ ಕೊರತೆಯಿದ್ದು, ಭರ್ತಿ ಮಾಡಿಕೊಳ್ಳಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ನಗರದಲ್ಲಿ ಕಸ ಸಂಗ್ರಹಣೆ-ವಿಲೇವಾರಿ ಕುರಿತಾಗಿ ಸಾರ್ವಜನಿಕರಿಂದ ದೂರುಗಳಿದ್ದು, ಸರಿ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಮುಂದಾಗಬೇಕಿದೆ. ಕುಡಿಯುವ ನೀರಿಗೆ ಕೇವಲ ₹10 ಲಕ್ಷ ಇರಿಸಿರುವುದು ಯಾವುದಕ್ಕೂ ಸಾಲಲ್ಲ, ಇದನ್ನ ಹೆಚ್ಚಿಸಿ ಕುಡಿಯುವ ನೀರಿಗೆ ಹೆಚ್ಚಿನ ಆಧ್ಯತೆ ನೀಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಕೆ ಆರ್ ಪೇಟೆ | ಗವಿಮಠ ವಸತಿ ಶಾಲೆಗೆ ಸೇರಿದ ಆಹಾರ ದಾಸ್ತಾನು ರೈಸ್ ಮಿಲ್ ನಲ್ಲಿ ಪತ್ತೆ; ದೂರು ನೀಡಿದ ರೈತಸಂಘ

ಸಭೆಯಲ್ಲಿ ಯೋಜನಾ ನಿರ್ದೇಶಕ ವೆಂಕಟೇಶ್, ಪೌರಾಯುಕ್ತ ಪರಶುರಾಮ ಛಲವಾದಿ ಸೇರಿದಂತೆ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...