ಚಾಮರಾಜನಗರ | ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುಣಮಟ್ಟದ್ದಾಗಿರಬೇಕು: ಸಂಸದ ಸುನೀಲ್ ಬೋಸ್

Date:

ಚಾಮರಾಜನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜಿಲ್ಲಾ ಅಭಿವೃದ್ದಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದ ಸುನೀಲ್ ಬೋಸ್, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಗುಣಮಟ್ಟದಿಂದ ನಿರ್ವಹಿಸಬೇಕು. ಅಪಘಾತಗಳಿಗೆ ಅವಕಾಶವಾಗದಂತೆ ಸಮರ್ಪಕವಾಗಿ ಎಲ್ಲಾ ಮುಂಜಾಗ್ರತಾ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಕ್ಷೇತ್ರದ ವಿವಿಧ ಭಾಗಗಳಲ್ಲಿ ಕಾಮಗಾರಿ ನಿರ್ವಹಿಸಲಾಗುತ್ತಿದೆ. ಕಾಮಗಾರಿಗಳು ಕಳಪೆ ಎಂಬ ದೂರುಗಳು ಬರುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕಾಮಗಾರಿಗಳು ನಿರ್ವಹಣೆಯಾಗಬೇಕು. ರಸ್ತೆ ಸುರಕ್ಷತಾ ಕ್ರಮಗಳಿಗೆ ಆದ್ಯತೆ ನೀಡಬೇಕು. ಈ ಹಿಂದಿನ ಸಭೆಯಲ್ಲೂ ಹೆದ್ದಾರಿ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಕೈಗೊಂಡು ವಿದ್ಯುತ್ ದೀಪ ಅಳವಡಿಕೆ, ಗುಂಡಿ ಮುಚ್ಚುವುದು, ಎಲ್ಲಿ ಅಪಘಾತಕ್ಕೆ ಸಂಭವಿಸುತ್ತಿದ್ದೆಯೋ ಅಂತಹ ಸ್ಥಳಗಳಲ್ಲಿ ತುರ್ತಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕೆಲಸ ಕೈಗೊಳ್ಳಲು ಸೂಚಿಸಲಾಗಿತ್ತು. ನಾನೂ ಸಹ ಖುದ್ದಾಗಿ ಹಲವೆಡೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಆದರೆ, ಇನ್ನೂ ಸಹ ಜವಾಬ್ದಾರಿಯುತವಾಗಿ ಅಧಿಕಾರಿಗಳು ಕಾಮಗಾರಿ ನಿರ್ವಹಿಸಿಲ್ಲ. ಇನ್ನು ಮುಂದೆ ಇಂತಹ ಧೋರಣೆ ಸಹಿಸುವುದಿಲ್ಲ” ಎಂದು ಎಚ್ಚರಿಕೆ ನೀಡಿದರು.

“ಗುಂಡ್ಲುಪೇಟೆ-ನಂಜನಗೂಡು ಮಾರ್ಗದಲ್ಲಿ ವಾಹನ ದಟ್ಟಣೆ ಹೆಚ್ಚಾಗಿವೆ. ಪ್ರವಾಸಿ ತಾಣಗಳನ್ನು ಸಂಪರ್ಕಿಸುವ ಈ ರಸ್ತೆಯಲ್ಲಿ ಅಪಘಾತಗಳು ಹೆಚ್ಚುತ್ತಿವೆ. ಸೈನ್ ಬೋರ್ಡ್ ಮತ್ತು ಮಿರರ್ ನಂತಹ ಸುಗಮ ಸಂಚಾರಕ್ಕೆ ಮಾರ್ಗದರ್ಶನ ಮಾಡುವ ಫಲಕಗಳನ್ನು ಅಳವಡಿಸಬೇಕು. ಕಳೆದ ಎರಡು ಮೂರು ದಿನಗಳಿಂದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಹಾನಿ ಸಂಬಂಧ ಅಧಿಕಾರಿಗಳಿಂದ ವಿವರ ಪಡೆದು, ಕ್ಷೇತ್ರಗಳಿಗೆ ಭೇಟಿ ನೀಡಿ ಬೆಳೆ ನಷ್ಟ ಸಂಬಂಧ ವರದಿ ನೀಡಬೇಕು. ಅರಣ್ಯ ವಾಸಿಗಳಿಗೆ ಮನೆಗಳನ್ನು ಒದಗಿಸುವ ಪ್ರಕ್ರಿಯೆ ಜರೂರಾಗಿ ನಡೆಯಬೇಕು. ಎಲ್ಲ ವಿಧಾನಸಭಾ ಕ್ಷೇತ್ರಗಳಿಗು ಅಗತ್ಯಕ್ಕನುಗುಣವಾಗಿ ಸಮಾನವಾಗಿ ಮನೆಗಳ ಹಂಚಿಕೆಯಾಗಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, “ನಗರ ವ್ಯಾಪ್ತಿಯಲ್ಲಿ ಬರುವ ಹೆದ್ದಾರಿಯಲ್ಲಿ ಅಪಘಾತ ಸಂಭವಿಸುತ್ತಿವೆ. ಹೀಗಾಗಿ, ಬೈಪಾಸ್‍ಗಳನ್ನು ನಿರ್ಮಾಣ ಮಾಡುವಂತೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ತಿಳಿಸಲಾಗಿತ್ತು. ಆದರೂ ಸಹ ಇನ್ನೂ ಕ್ರಮ ಕೈಗೊಂಡಿಲ್ಲ. ಎಲ್ಲೆಲ್ಲಿ ಅಗತ್ಯವಿದೆಯೋ ಅಂತಹ ಕಡೆ ತುರ್ತಾಗಿ ಕಾಮಗಾರಿ ಕೈಗೊಂಡು, ಇನ್ನೂ ಸಂಭವಿಸಬಹುದಾದ ಅಪಘಾತಗಳನ್ನು ತಡೆಯಬೇಕು” ಎಂದು ಹೇಳಿದರು.

ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಮಾತನಾಡಿ, ಬಹುತೇಕವಾಗಿ ಸರ್ವೀಸ್ ರಸ್ತೆಗಳನ್ನು ನಿರ್ಮಾಣ ಮಾಡಲಾಗಿಲ್ಲ. ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಹೆದ್ದಾರಿಯಲ್ಲಿ ಬೀದಿ ದೀಪಗಳು ಇಲ್ಲ. ಚರಂಡಿ ವ್ಯವಸ್ಥೆಯನ್ನು ಮಾಡಲಾಗಿಲ್ಲ. ಅಗರೆ, ಮಾಂಬಳ್ಳಿ ಇನ್ನಿತರ ಕಡೆ ಗುಣಮಟ್ಟದ ಕಾಮಗಾರಿ ಆಗಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ವಿಶೇಷಚೇತನರಿಗೆ ಸಾಧನ-ಸಲಕರಣೆಗಳ ವಿತರಣೆ

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಸಭೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...