ಚಾಮರಾಜನರ | ಬಿರುಗಾಳಿ ಸಹಿತ ಮಳೆ; ಬಾಳೆ, ಟೊಮೆಟೊ ಬೆಳೆಗಳಿಗೆ ಹಾನಿ

Date:

ಚಾಮರಾಜನಗರ ಜಿಲ್ಲೆಗೆ ಈ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಕೊಳ್ಳೇಗಾಲ, ಯಳಂದೂರು ತಾಲೂಕು ವ್ಯಾಪ್ತಿಯಲ್ಲಿ ಬಿಟ್ಟು ಉಳಿದ ತಾಲೂಕುಗಳಲ್ಲಿ ಅಲ್ಲಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗಿದೆ. ಗಾಳಿಯಿಂದಾಗಿ ಬಾಳೆ, ಟೊಮೆಟೊ ಬೆಳೆಗಳಿಗೆ ಹಾನಿಯೂ ಆಗಿದೆ.

ಚಾಮರಾಜನಗರ, ಗುಂಡ್ಲುಪೇಟೆ ತಾಲೂಕುಗಳಿಗೆ ಹೋಲಿಸಿದರೆ ಹನೂರು ತಾಲೂಕಿನಲ್ಲಿ ಚೆನ್ನಾಗಿ ಮಳೆಯಾಗಿದೆ. ಚಾಮರಾಜನಗರ ತಾಲೂಕು ವ್ಯಾಪ್ತಿಯಲ್ಲಿ ಸಾಧಾರಣ ಮಳೆ ಬಿದ್ದರೆ, ಗುಂಡ್ಲುಪೇಟೆಯ ಅರಣ್ಯದ ಅಂಚುಗಳಲ್ಲಿ ತುಂತುರು ಮಳೆಯಾಗಿದೆ.

ಮಳೆಯಾಗಿದ್ದರಿಂದ ಬಿಸಿಲಿನಿಂದ ತತ್ತರಿಸಿದ್ದ ಜನರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಇನ್ನೂ ಎರಡು ಮೂರು ದಿನಗಳ ಕಾಲ ಮಳೆಯಾಗುವ ನಿರೀಕ್ಷೆ ಇರುವುದಾಗಿ ಹವಾಮಾನ ಇಲಾಖೆ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹನೂರು ತಾಲೂಕಿನ ಕೌದಳ್ಳಿ, ನಾಗಣ್ಣನಗರ, ಜಿ ಆರ್ ನಗರ, ಕಾಮಗೆರೆ, ಮಂಗಲ, ಕಣ್ಣೂರು ಸೇರಿದಂತೆ ಹಲವೆಡೆ ಗುರುವಾರ ಮಧ್ಯಾಹ್ನ ಗುಡುಗು, ಗಾಳಿ ಸಹಿತ ಮಳೆಯಾಗಿದೆ. ಬರದ ಛಾಯೆಯಿಂದ ಬಾಡಿ ಬಸವಳಿದಿದ್ದ ಇಳೆಗೆ ಮಳೆ ತಂಪೆರೆದಿದೆ.

ಬೆಳಿಗ್ಗೆಯಿಂದ ಮಳೆ ಬರುವ ಕುರುಹುಗಳು ಇರಲಿಲ್ಲ. ಮಧ್ಯಾಹ್ನ ಮೋಡ ಕಪ್ಪಿಟ್ಟು, ಗಾಳಿ, ಗುಡುಗಿನ ಸಹಿತ ಮಳೆಯಾಗಿದೆ.

ಟೊಮೆಟೊ ಬೆಳೆ ಹಾನಿ

ಮಳೆಗೆ ತಾಲೂಕಿನ ನಾಗಣ್ಣ ನಗರ, ಅಜ್ಜೀಪುರ ಸಮೀಪದ ಜಿ ಆರ್‌ ನಗರದಲ್ಲಿ ಬಾಳೆ ಮತ್ತು ಟೊಮೆಟೊ ಬೆಲೆ ನೆಲಕ್ಕಚಿವೆ. ನಾಗಣ್ಣ ನಗರದ ರೈತ ಮುರುಗೇಶ್ ಅವರ 800 ಬಾಳೆ ಮರಗಳ ಪೈಕಿ 650 ಮರಗಳು ಮುರಿದು ಬಿದ್ದಿವೆ. ಅಜ್ಜೀಪುರ ಸಮೀಪದ ಜಿ ಆರ್ ನಗರದ ರೈತ ಶ್ರೀರಂಗ ಅವರಿಗೆ ಸೇರಿದ ಟೊಮೊಟೊ ಬೆಳೆ ಉದುರಿವೆ.

‘ಬಿರು ಬೇಸಿಗೆಯ ನಡುವೆ ಸಾಲ ಮಾಡಿ ಬೆಳೆಯಲಾಗಿದ್ದ ಬಾಳೆ ಬೆಳೆ ಕಟಾವು ಹಂತಕ್ಕೆ ತಲುಪಿತ್ತು. ಇಂತಹ ಸಂದರ್ಭದಲ್ಲಿ ಬೆಳೆ ಮಳೆಗೆ ಸಿಲುಕಿರುವುದರಿಂದ  ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಜಿಲ್ಲಾಡಳಿತ ಪರಿಶೀಲನೆ ನಡೆಸಿ ಪರಿಹಾರ ನೀಡಬೇಕು’ ಎಂದು ರೈತರು ಒತ್ತಾಯಿಸಿದ್ದಾರೆ.

ಚಾಮರಾಜನಗರ ತಾಲ್ಲೂಕಿನ ಆಲೂರು, ಕೆಂಪನಪುರ, ಗೂಳಿಪುರ, ಕನ್ನೇಗಾಲ, ಮಂಗಲ ಗ್ರಾಮಗಳಲ್ಲೂ ಗಾಳಿ ಸಹಿತ ಮಳೆಯಾಗಿದೆ.

ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಗೆ ಬರುವ ಕೆಂಪನಪುರ ಸೇರಿದಂತೆ ಹಲವು ಊರುಗಳಲ್ಲಿ ಗಾಳಿಯ ಆರ್ಭಟಕ್ಕೆ ಸಿಲುಕಿ ಬಾಳೆ ತೋಟಗಳು ನೆಲಕ್ಕುರುಳಿವೆ. ಕೆಂಪನಪುರ ಗ್ರಾಮದ ಕೆ ಎಂ ಗುರುಸಿದ್ದಪ್ಪ ಸುಶೀಲಮ್ಮ ಹಾಗೂ ಸಿದ್ದಲಿಂಗಸ್ವಾಮಿ ಎಂಬುವವರಿಗೆ ಸೇರಿದ ತಲಾ ಎರಡು ಎಕರೆ ಬಾಳೆ ಫಸಲು ನಾಶವಾಗಿರುವುದಾಗಿ ವರದಿಯಾಗಿದೆ.

“ಕಟಾವು ಹಂತಕ್ಕೆ ಬಂದಿರುವ ಬಾಳೆ ತೋಟ ಗಾಳಿ ಮಳೆಗೆ ನೆಲ ಕಚ್ಚಿರುವುದರಿಂದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ನೀಡಲು ಮುಂದಾಗಬೇಕು” ಎಂದು ಕೆಂಪನಪುರ ಗ್ರಾಮದ ಮುಖಂಡರು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಭಾರೀ ಗಾಳಿ ಮಳೆ; ಸಿಡಿಲ ಹೊಡೆತಕ್ಕೆ 25 ಮೇಕೆಗಳು ಬಲಿ

ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟದ ತಪ್ಪಲು ಹಾಗೂ ಕಾಡಂಚಿನ ಗ್ರಾಮಗಳಲ್ಲಿ ನಾಲ್ಕೈದು ನಿಮಿಷಗಳ ಕಾಲ ತುಂತುರು ಮಳೆಯಾಗಿದೆ. ಬಂಡೀಪುರ, ಮೇಲುಕಾಮನಹಳ್ಳಿ, ಹಂಗಳ, ದೇವರಹಳ್ಳಿ, ಗೋಪಾಲಪುರ ಭಾಗದಲ್ಲೂ ತುಂತುರು ಹನಿ ಬಿದ್ದಿದೆ.

ಸಂಜೆ ಐದರ ಸಮಯದಲ್ಲಿ ಮೋಡ ಕವಿದ ವಾತಾವರಣವಿದ್ದು, ಬಳಿಕ ಜೋರು ಹನಿ ಬಿದ್ದು ನಿಂತಿತು. ಮಳೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...