ಚಾಮರಾಜನಗರ | ಸ್ನೇಹಜೀವಿ ಗೋಪಾಲ್ ಜನಸೇವಾ ಕೇಂದ್ರ ಉದ್ಘಾಟನೆ

Date:

ಜನರ ಸೇವೆಗೆ ಜನಸೇವಾ ಕೇಂದ್ರ ತೆರೆಯಲಾಗಿದೆ. ಜನಸೇವಾ ಕೇಂದ್ರ ಆರೋಗ್ಯ ಮತ್ತು ಶಿಕ್ಷಣ ಸಾರ್ವಜನಿಕ, ಆಸಕ್ತ ಸಮುದಾಯದ ಒಳಿತಿಗೆ ಬೇಕಿರುವ ಹಾಗೂ ಪ್ರತಿಯೊಬ್ಬರಿಗೂ ಸೇವೆ ದೊರಕಿಸುವ ನಿಟ್ಟಿನಲ್ಲಿ ಕೇಂದ್ರವನ್ನು ತೆರೆಯಲಾಗಿದೆ. ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಕೆಲಸ ಮಾಡಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್ ಸಿ ಮಹದೇವಪ್ಪ ಹೇಳಿದರು.

ಸಮಾಜ ಕಲ್ಯಾಣ ಸಚಿವ ಡಾ. ಎಚ್ ಸಿ ಮಹದೇವಪ್ಪ ಅವರ ಆಪ್ತ ಸಹಾಯಕ ಸ್ನೇಹಜೀವಿ ಗೋಪಾಲ್ ಹೂರೆಯಲ ಅವರ ಬಳಗದವರು ಜನಸೇವಾ ಕೇಂದ್ರ ತೆರೆದಿದ್ದು, ನೂತನ ಜನಸ್ನೇಹಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.

“ಆದಾರ್ ಕಾರ್ಡ್, ರೇಷನ್ ಕಾರ್ಡ್ ಸೇರಿದಂತೆ ಇತರೆ ಸಮಸ್ಯೆಗಳು ಮತ್ತು ಪ್ರಮಾಣ ಪತ್ರ ಪಡೆಯಲು ಅನೇಕ ಅವಿದ್ಯಾವಂತರು ದಿನಂಪ್ರತಿ ತಾಲೂಕು ಕಚೇರಿಯ ಬಳಿ ಅಲೆದಾಡುತ್ತಿರುವುದನ್ನು ಕಾಣಬಹುದು. ಹಾಗಾಗಿ ಇಂತಹ ಸಾರ್ವಜನಿಕರಿಗೆ ಜನಸೇವಾ ಕೇಂದ್ರ ಮುಖಾಂತರ ಅವರ ಸಮಸ್ಯೆಗಳನ್ನು ಬಗೆಹರಿಸಲು ಸ್ನೇಹಜೀವಿ ಗೋಪಾಲ್ ಅವರ ಗೆಳೆಯರ ಬಳಗ ಬದ್ಧವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಹಿತಿ ಕಾಳಿಂಗ ಸ್ವಾಮಿ ಸಿದ್ದಾರ್ಥ್ ಮಾತನಾಡಿ, “ಸಚಿವ ಮಹದೇವಪ್ಪ ಅವರ ಆಪ್ತ ಸಹಾಯಕ ಗೋಪಾಲ್ ಹೂರೆಯಲ ಗೆಳೆಯರ ಬಳಗದ ಸೇವೆ ಉತ್ತಮವಾಗಿದ್ದು, ತಾಲೂಕಿನ ಜನತೆ ಇದರ ಸದುಪಯೋಗಪಡಿಸಿಕೊಳ್ಳಬೇಕು” ಎಂದು ಸಲಹೆ ನೀಡಿ, ಬಸವರಾಜ್ ಹಾಗೂ ಸಿದ್ದು ಸ್ನೇಹಿತರ ಶ್ರಮವನ್ನು ಶ್ಲಾಘಿಸಿದರು.

ಮಾನವ ಬಂದುತ್ವ ವೇದಿಕೆ ಜಿಲ್ಲಾ ಸಂಚಾಲಕ ಸುಭಾಷ್ ಮಡ್ರಳ್ಳಿ ಮಾತನಾಡಿ, “ಗೋಪಾಲ್ ಗೆಳೆಯರ ಬಳಗ ಈ ಹಿಂದೆ ತೆರೆಮರೆಯಲ್ಲಿ ಸಾಮಾಜಿಕ ಕಾರ್ಯಗಳನ್ನು ಕೈಗೊಳ್ಳುತ್ತಿತ್ತು. ಕೊರೊನಾ ಸಂದರ್ಭದಲ್ಲಿ ಗೆಳೆಯರ ಬಳಗ ಹಲವಾರು ಜನರ ಉಪಯೋಗಿ ಕೆಲಸಗಳನ್ನು ಮಾಡಿದ್ದರು. ಹಾಗೆ ಜನಸೇವಾ ಕೇಂದ್ರಕ್ಕೆ ಜೊತೆಯಾಗಿರುವ ಚಿಂತಕ ಕಾಳಿಂಗ ಸ್ವಾಮಿ ಸಿದ್ದಾರ್ಥ್ ಅವರ ಕೆಲಸಗಳು ಬಹಳ ಸ್ಪೂರ್ತಿದಾಯಕ ಹಾಗೂ ಸಮಾಜಸೇವೆಗೆ ಬಹಳ ಶ್ರಮವಹಿಸಿ ಕೆಲಸ ಮಾಡುತ್ತಾರೆ” ಎಂದು ತಿಳಿಸಿದರು.

ಈ ಸಿದ್ದಿ ಓದಿದ್ದೀರಾ? ರಾಯಚೂರು | ಮಾವಿನಕೆರೆ ಸಂರಕ್ಷಣೆಗೆ ಆದೇಶ

ಕಾರ್ಯಕ್ರಮದಲ್ಲಿ ಡಾ. ಕೃಷ್ಣಮೂರ್ತಿ ಚಮರಂ, ಸಾಹಿತಿ ರಾಘವೇಂದ್ರ ಅಪುರ, ಜನಜಾಗೃತಿ ಅಧ್ಯಕ್ಷ ಮಹೇಶ್ ರಾಘವಾಪುರ, ನಾಗರಾಜ್, ಬಸವರಾಜ್, ಸುಬ್ರಹ್ಮಣ್ಯ ಸ್ವಾಮಿ, ಸಿದ್ದರಾಜ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...