ಚಾಮರಾಜನಗರ | ಹುಲಿ ದಾಳಿ; ಇಬ್ಬರು ಕುರಿಗಾಹಿಗಳಿಗೆ ಗಂಭೀರ ಗಾಯ

Date:

ಗಡಿ ನಾಡು ಚಾಮರಾಜನಗರದಲ್ಲಿ ಮಾನವ ಹಾಗೂ ಕಾಡು ಪ್ರಾಣಿ ಸಂಘರ್ಷ ಮುಂದುವರೆದಿದ್ದು, ಹುಲಿ ದಾಳಿ ಇಬ್ಬರು ಕುರಿಗಾಹಿಗಳಿಗೆ ಗಾಯವಾಗಿರುವಂತಹ ಘಟನೆ ನಡೆದಿದೆ.

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಮೀಸಲು ಅರಣ್ಯ ಪ್ರದೇಶದ ಅಂಚಿನಲ್ಲಿರುವ ಶಿವಪುರ ಹೊರವಲಯದಲ್ಲಿ ಕುರಿಗಾಹಿಗಳ ಮೇಲೆ ಹುಲಿ ದಾಳಿ ನಡೆಸಿದ್ದು, ಶಿವಶೆಟ್ಟಿ(55), ಜವರಯ್ಯ(65) ಎಂಬುವವರು ಗಾಯಗೊಂಡಿದ್ದಾರೆ.

ಮೊದಲಿಗೆ ಹುಲಿಯು ಕುರಿಗಳ ಮೇಲೆ ಹುಲಿ ದಾಳಿ ನಡೆಸಿದ್ದು, ಕುರಿಯನ್ನು ರಕ್ಷಿಸಲು ಕುರಿಗಾಹಿಗಳು ಮುಂದಾದಾಗ ಕುರಿಗಾಹಿಗಳ ಮೇಲೆ ದಾಳಿ ಮಾಡಿದೆ. ಗಾಯಾಳುಗಳಿಗೆ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ವಾರಕ್ಕೊಮ್ಮೆ ಬರುತ್ತಿರುವ ಕಸ ಸಂಗ್ರಹ ವಾಹನ; ರಸ್ತೆ ಬದಿಗಳಲ್ಲಿ ತುಂಬಿದ ಕಸದ ರಾಶಿ

ತಾಲೂಕಿನ ಕಲ್ಲಹಳ್ಳಿಯಲ್ಲಿ ಇತ್ತೀಚೆಗೆ ಹಸುವಿನ ಮೇಲೆ ಹುಲಿ ದಾಳಿ ಮಾಡಿತ್ತು. ಕಲ್ಲಹಳ್ಳಿ-ಸಂಪಿಗೆಪುರ ಮಾರ್ಗದಲ್ಲಿ ಹುಲಿ ಸಂಚರಿಸುವ ದೃಶ್ಯ ಮೊಬೈಲ್​ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಪದೇ ಪದೆ ಹುಲಿ ಕಾಣಿಸಿರುವ ಕಾರಣ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದರು. ಇದೀಗ ವ್ಯಕ್ತಿಗಳ ಮೇಲೆಯೇ ಹುಲಿ ಎರಗಿರುವ ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...