ಚಾಮರಾಜನಗರ | ವೇತನ ಪಾವತಿಸದ್ದಕ್ಕೆ ವಾಟರ್‌ಮೆನ್‌ ಆತ್ಮಹತ್ಯೆ; ಗ್ರಾಮ ಪಂ. PDO ಅಮಾನತು

Date:

27 ತಿಂಗಳಿನಿಂದ ವಾತನ ಪಾವತಿ ಮಾಡಿಲ್ಲವೆಂದು ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಪಿಡಿಒ ವಿರುದ್ಧ ಆರೋಪ ಮಾಡಿ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮ ಪಂಚಾಯತಿಯ ನೀರುಗಂಟಿ ಚಿಕ್ಕುಸ ನಾಯಕ ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಪ್ರಕರಣದಲ್ಲಿ ಪಂಚಾಯತಿಯ ಪಡಿಒ ರಾಮೇಗೌಡ ಕೆ.ಎನ್ ಅವರನ್ನು ಅಮಾನತು ಮಾಡಲಾಗಿದೆ. ಜಿಲ್ಲಾ ಪಂಚಾಯಿತಿ ಸಿಇಒಮೋನಾ ರೋತ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಹೊಂಗನೂರು ಗ್ರಾಮ ಪಂಚಾಯತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ಚಿಕ್ಕೂಸ ನಾಯಕ ಅವರು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಂಚಾಯತಿ ಕಟ್ಟಡದ ಕಿಟಕಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಡೆತ್‌ ನೋಟ್‌ನಲ್ಲಿ, “ನಾನು ಹಲವು ವರ್ಷಗಳಿಂದ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದೇನೆ. ಕೆಲಸಕ್ಕೆ ತಕ್ಕಂತೆ ವೇತನ ಕೊಡುತ್ತಿಲ್ಲ. ವೇತನ ಪಾವತಿಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಪಿಡಿಒ ವಿಳಂಬ ಮಾಡುತ್ತಲೇ ಬಂದಿದ್ದಾರೆ. ನನಗೆ 27 ತಿಂಗಳುಗಳಿಂದ ವೇತನ ನೀಡಲಾಗಿಲ್ಲ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಅನಾರೋಗ್ಯಕ್ಕೆ ತುತ್ತಾಗಿದ್ದರಿಂದ, ಕೆಲಸ ತೊರೆಯಲು ನಿರ್ಧರಿಸಿದ್ದೆ. ಆದ್ದರಿಂದ, ನನಗೆ ಪಾವತಿ ಮಾಡಬೇಕಿದ್ದ 27 ತಿಂಗಳ ವೇತನವನ್ನು ನೀಡುವಂತೆ ಪಿಡಿಒ ಅವರನ್ನು ಕೇಳಿಕೊಂಡಿದ್ದೆ. ಆದರೆ, ಅವರು ನನ್ನ ಮನವಿ ಸ್ಪಂದಿಸಲಿಲ್ಲ. ಈ ಬಗ್ಗೆ ಜಿಲ್ಲಾ ಪಂಚಾಯತಿ ಸಿಇಒಗೆ ಪತ್ರ ಬರೆದರೂ ಯಾವುದೇ ಉಪಯೋಗವಾಗಿಲಿಲ್ಲ” ಎಂದು ಡೆತ್‌ ನೋಟ್‌ನಲ್ಲಿ ಆರೋಪಿಸಿದ್ದಾರೆ.

ಚಿಕ್ಕುಸ ನಾಯಕ ಅವರು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಆರೋಪಿಗಳ ವಿರುದ್ಧ ಚಾಮರಾಜನಗರ ಪೂರ್ವ ಪೊಲೀಸ್‌ ಠಾಣೆಯಲ್ಲಿ ಬಿಎನ್‌ಎಸ್‌ ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ಡೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನು, ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ-1993 ರ ಸೆಕ್ಷನ್ 111ರ ಅಡಿಯಲ್ಲಿ ಕಡ್ಡಾಯವಾಗಿ ಕರ್ತವ್ಯ ನಿರ್ವಹಿಸುವಲ್ಲಿ ಪಿಡಿಒ ರಾಮೇಗೌಡ ಕೆ.ಎನ್ ವಿಫಲರಾಗಿದ್ದಾರೆ ಎಂದು ಕಂಡುಬಂದಿದ್ದು, ಅವರನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತಿ ಸಿಇಒ ಆದೇಶದಲ್ಲಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...