ಚಾಮರಾಜನಗರ | ನ್ಯಾಯವಾದಿಗಳ ಸಂರಕ್ಷಣಾ ಕಾಯ್ದೆ ಜಾರಿಗಾಗಿ ವಕೀಲರ ಸಂಘ ಆಗ್ರಹ

Date:

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕರ್ನಾಟಕ ನ್ಯಾಯವಾದಿಗಳ ಸಂರಕ್ಷಣಾ-2023 ಪ್ರಸ್ತಾವನೆಯನ್ನು ಅನುಮೋದಿಸಬೇಕು. ನ್ಯಾಯವಾದಿಗಳ ಸಂರಕ್ಷಣಾ ಕಾನೂನನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿ ವಕೀಲರ ಸಂಘವು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಪ್ರತಿಭಟನೆ ನಡೆಸಿದೆ.

ಪ್ರತಿಭಟನೆಯಲ್ಲಿ ಮಾತನಾಡಿದ ವಕೀಲರ ಸಂಘದ ಕೆ ವೆಂಕಟೇಶ್, “ಗುರುವಾರ ಅಧಿವೇಶನದಲ್ಲಿ ಕರ್ನಾಟಕ ನ್ಯಾಯವಾದಿಗಳ ಸಂರಕ್ಷಣಾ-2023 ಪ್ರಸ್ತಾವನೆಯನ್ನು ಮಾಜಿ ಕಾನೂನು ಸಚಿವ ಸುರೇಶ್ ಕುಮಾರ್, ಶಾಸಕ ಎಎಸ್‌ ಪೊನ್ನಣ್ಣ, ಶಾಸಕ ಮಹಾಂತೇರ್ಶ ಕೌಜಲಗಿ ಅವರು ಪ್ರಸ್ತಾಪಿಸಿದ್ದಾರೆ. ಅದನ್ನು ಅನುಮೋದಿಸಿ ಜಾರಿಗೆ ತರಬೇಕು” ಎಂದು ಆಗ್ರಹಿಸಿದರು.

ಮತ್ತೊಬ್ಬ ವಕೀಲ ರವಿಕಾಂತ್ ಮಾತನಾಡಿ, “ಈ ಪ್ರಸ್ತಾವನೆಯು ವಿಶೇಷ ಕಾಯ್ದೆಯಾಗಿ ಜಾರಿಯಾಗಬೇಕು. ರೈತಾಪಿ, ಕಾರ್ಮಿಕ ವರ್ಗ ಮತ್ತು ದಮಣಿತರ ಪರ ಹಾಗೂ ಶೋಷಣೆಗೆ ಒಳಗಾದವರ ಪರ ಧ್ವನಿ ಎತ್ತಿದರೆ ನಮಗೆ ಬೆದರಿಕೆ ಬರುವಂತ ಸನ್ನಿವೇಶಗಳು ಹೆಚ್ಚಾಗಿವೆ. ವಕೀಲರ ಮೇಲಿನ ಹಲ್ಲೆಗೆ ಈಗಿರುವ ಆರು ತಿಂಗಳಿಂದ ಮೂರು ವರ್ಷಗಳ ಜೈಲು ಶಿಕ್ಷೆ ಸಾಲದು. ಶಿಕ್ಷೆಯ ಪ್ರಮಾಣವನ್ನು 7 ವರ್ಷಕ್ಕೆ ಹೆಚ್ಚಿಸಬೇಕು. ವಕೀಲರು ಯಾವುದೇ ಭಯವಿಲ್ಲದೆ ಕೆಲಸ ಮಾಡುವಂತಾಗಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಕೀಲರ ಹೋರಾಟಕ್ಕೆ ರೈತ ಸಂಘವು ಬೆಂಬಲ ನೀಡಿದೆ. ಪ್ರತಿಭಟನೆಯಲ್ಲಿ ತಾಲೂಕು ವಕೀಲ ಸಂಘದ ಕಾರ್ಯದರ್ಶಿ ಪುಟ್ಟಸ್ವಾಮಿ, ವಕೀಲ ಶಿವಣ್ಣ ಸತ್ಯನಾರಾಯಣ ಸಂಪತ್ ಎಂ ಎನ್ ರಾಜೇಶ್ ಕೆಂಪರಾಜ್ ಮಾದು ಶ್ರೀನಿವಾಸ್ ನಂದೀಶ್ ಕಿರಣ್ ಅನಿಲ್ ಪ್ರಭುಸ್ವಾಮಿ ಹಾಗೂ ಮನು ಶಾನ್ಬೋಗ್ ರೈತ ಸಂಘದ ಮಹದೇವಪ್ಪ ಕುಂದ್ಕೇರೆ ಸಂಪತ್ತು ಹಾಲಹಳ್ಳಿ ಮಲ್ಲೇಶ್ ಇನ್ನಿತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...