ಚಾಮರಾಜನಗರ | ಗ್ಯಾರಂಟಿ ಯೋಜನೆಗಳಿಗೆ ಆಧಾರ್‌ ಜೋಡಣೆ; ಮಳೆಯಲ್ಲೂ ಸಾಲುಗಟ್ಟಿ ನಿಂತ ಜನ

Date:

ಅನ್ನಭಾಗ್ಯ ಯೋಜನೆಯ ಹೆಚ್ಚುವರಿ ಐದು ಕೆಜಿ ಅಕ್ಕಿಯ ಹಣ ಖಾತೆಗೆ ಜಮೆಯಾಗದ ಫಲಾನುಭವಿಗಳಿಗಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಚಾಮರಾಜನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಆಧಾರ್‌ ಜೋಡಣೆ, ಎನ್‌ಪಿಸಿಐ ಮ್ಯಾಪಿಂಗ್‌ ಶಿಬಿರದಲ್ಲಿ ಸಾವಿರಕ್ಕೂ ಅಧಿಕ ಮಂದಿ ಸಾಲುಗಟ್ಟಿ ನಿಂತಿದ್ದರು.

ಅನ್ನಭಾಗ್ಯ ಯೋಜನೆ ಫಲಾನುಭವಿಗಳಲ್ಲದೆ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳೂ ಕೂಡ ಮಳೆಯನ್ನೂ ಲೆಕ್ಕಿಸಿದೆ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು, ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಂಡರು.

ಜಿಲ್ಲೆಯಲ್ಲಿ 2,65,794 ಪಡಿತರ ಚೀಟಿದಾರರು ಈ ಯೋಜನೆಗೆ ಅರ್ಹರಾಗಿದ್ದು, ನವೆಂಬರ್ ತಿಂಗಳಲ್ಲಿ 2,53,705 ಪಡಿತರ ಚೀಟಿದಾರರ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ. ತಾಂತ್ರಿಕ ಕಾರಣಗಳ ಕಾರಣಕ್ಕೆ ಇನ್ನೂ 10,500 ಪಡಿತರ ಚೀಟಿದಾರರ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣ ಜಮೆಯಾಗಿಲ್ಲ. ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಣೆ, ಇ–ಕೆವೈಸಿ, ಎನ್‌ಪಿಸಿಐ ಮ್ಯಾಪಿಂಗ್‌ ಸೇರಿದಂತೆ ಹಲವು ಕಾರಣಗಳಿಂದ ಹಣ ವರ್ಗಾವಣೆಯಾಗುತ್ತಿಲ್ಲ. ಸ್ಥಳದಲ್ಲೇ ಸಮಸ್ಯೆಗಳನ್ನು ಪರಿಹರಿಸುವುದಕ್ಕಾಗಿ ಆಹಾರ ಇಲಾಖೆ ಎಲ್ಲ ತಾಲೂಕು ಕೇಂದ್ರಗಳಲ್ಲಿ ವಿಶೇಷ ಶಿಬಿರ ಆಯೋಜಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಳ್ಳೇಗಾಲದಲ್ಲಿ ಸೋಮವಾರ ಶಿಬಿರ ನಡೆದಿದ್ದು, 542 ಮಂದಿ ಭಾಗವಹಿಸಿದ್ದರು. ಚಾಮರಾಜನಗರದಲ್ಲಿ ಮಂಗಳವಾರ ನಡೆದಿದೆ.

ಜೆ ಎಚ್‌ ಪಟೇಲ್‌ ಸಭಾಂಗಣದಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ ಭಾಗವಹಿಸಲು ಬೆಳಿಗ್ಗೆ 8 ಗಂಟೆಗೆ ಹೊತ್ತಿಗೆ ನೂರಾರು ಫಲಾನುಭವಿಗಳು ಬಂದಿದ್ದರು. ಸಾಲಿನಲ್ಲಿ ನಿಂತು ಸರತಿಯಲ್ಲಿ ಕಾಯುತ್ತಿದ್ದಾಗ ಮಳೆ ಉದುರಿದ್ದು, ಫಲಾನುಭವಿಗಳಿಗೆ ಕಿರಿಕಿರಿ ಉಂಟು ಮಾಡಿತು. ಕೆಲವರು ಛತ್ರಿ ಹಿಡಿದು ರಕ್ಷಣೆ ಪಡೆದರೆ, ಇನ್ನೂ ಕೆಲವರು ಜಿಟಿಜಿಟಿ ಮಳೆಯಲ್ಲಿ ನೆನೆದುಕೊಂಡೇ ನಿಂತರು.

ಒಂದೇ ಕಡೆ ಸೇವೆ: ಆಧಾರ್‌ ತಿದ್ದುಪಡಿ, ಬ್ಯಾಂಕಿಂಗ್‌ ಸೇವೆ, ಪೋಸ್ಟಲ್‌ ಪೇಮೆಂಟ್ಸ್‌ ಬ್ಯಾಂಕ್‌ ಸೇವೆ, ನ್ಯಾಯಬೆಲೆ ಅಂಗಡಿಯ ಸೇವೆ ಶಿಬಿರದಲ್ಲಿ ಲಭ್ಯವಿತ್ತು. ಅರ್ಜಿದಾರರ ಸಮಸ್ಯೆಯನ್ನು ಪರಿಶೀಲಿಸಿ ಆಯಾ ಕೌಂಟರ್‌ಗಳಲ್ಲಿ ಅವರ ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಮತ್ತು ಸಿಬ್ಬಂದಿ ಯತ್ನಿಸಿದರು.

ಅನ್ನಭಾಗ್ಯ ಯೋಜನೆಯ ಫಲಾನುಭವಿಗಳು 944 ಮಂದಿ ಶಿಬಿರದಲ್ಲಿ ಭಾಗವಹಿಸಿದ್ದು, ಈ ಪೈಕಿ 340 ಮಂದಿ ಇ–ಕೆವೈಸಿ ಮಾಡಿಸಿಕೊಂಡಿದ್ದಾರೆ. ಇಂಡಿಯನ್‌ ಪೋಸ್ಟಲ್‌ ಪೇಮೆಂಟ್ಸ್‌ ಬ್ಯಾಂಕ್‌ನಲ್ಲಿ 190 ಮಂದಿ ಖಾತೆ ತೆರೆದಿದ್ದಾರೆ ಎಂಬುದಾಗಿ ಆಹಾರ ಇಲಾಖೆ ಮಾಹಿತಿ ನೀಡಿದೆ.

“ನಿಷ್ಕ್ರಿಯಗೊಂಡಿದ್ದ 105 ಫಲಾನುಭವಿಗಳ ಖಾತೆಯನ್ನು ಪುನರ್‌ಸ್ಥಾಪಿಸಲಾಯಿತು. 34 ಮಂದಿಯ ಆಧಾರ್‌ ತಿದ್ದುಪಡಿ ಮಾಡಲಾಗಿದೆ. ವಿವಿಧ ಬ್ಯಾಂಕ್‌ಗಳಲ್ಲಿ 211 ಮಂದಿಯ ಖಾತೆಯನ್ನು ಎನ್‌ಪಿಸಿಐ ಮ್ಯಾಪಿಂಗ್‌ ಮಾಡಲಾಯಿತು” ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕ ಯೋಗಾನಂದ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರಿನಲ್ಲಿ ಅನೈತಿಕ ಪೊಲೀಸ್‌ಗಿರಿ | ಯುವತಿಗೆ ಚಾಕ್ಲೆಟ್ ಕೊಟ್ಟದ್ದಕ್ಕೆ ಯುವಕನ ಮೇಲೆ ಹಲ್ಲೆ: ನಾಲ್ವರ ಬಂಧನ

“ಚಾಮರಾಜನಗರ ತಾಲೂಕಿನಲ್ಲಿ 3,060 ಫಲಾನುಭವಿಗಳಿಗೆ ಹಣ ಬರುತ್ತಿರಲಿಲ್ಲ. ಜನರ ಅನುಕೂಲಕ್ಕಾಗಿ ಬ್ಯಾಂಕ್‌ಗಳು, ಅಂಚೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಮನ್ವಯ ಸಾಧಿಸಿ ಈ ಶಿಬಿರ ಹಮ್ಮಿಕೊಂಡಿದ್ದೆವು. ತಾಲೂಕಿನ ಹಲವು ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಬಂದಿದ್ದು, ಸಮಸ್ಯೆ ಬಗೆಹರಿಸಿಕೊಂಡಿದ್ದಾರೆ” ಎಂದರು.

“ನಾಲ್ಕು ತಿಂಗಳಿಂದ ಅನ್ನಭಾಗ್ಯ ಹಣ ಮತ್ತು ಗೃಹಲಕ್ಷ್ಮಿ ಯೋಜನೆಯ ಹಣ ಬಂದಿರಲಿಲ್ಲ. ಆಧಾರ್‌, ಬ್ಯಾಂಕ್‌ ಖಾತೆಯಲ್ಲಿ ಸಮಸ್ಯೆಯಿರುವುದಾಗಿ ಹೇಳುತ್ತಿದ್ದರು. ಅದನ್ನು ಸರಿ ಮಾಡಿಸಿಕೊಳ್ಳಲು ಬಂದಿದ್ದೇವೆ” ಎಂದು ದ್ಥಳೀಯರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...