ಚಾಮರಾಜನಗರ | ಸರ್ವರ್‌ ಸಮಸ್ಯೆಯಿಂದ ವಸತಿ ಯೋಜನೆ ದಾಖಲೆ ಸಲ್ಲಿಕೆ ವಿಳಂಬ; ಕಾಲಾವಧಿ ಮುಂದೂಡುವಂತೆ ಒತ್ತಾಯ

Date:

ವಸತಿ ಯೋಜನೆಗಳ ಅಡಿಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ದಾಖಲೆಗಳನ್ನು ಸಲ್ಲಿಸಲು ನವೆಂಬರ್‌ 30 ಕೊನೆಯ ದಿನವಾಗಿದೆ. ಆದರೆ ನಾಡ ಕಚೇರಿಗಳಲ್ಲಿ ಸರ್ವರ್‌ ಸಮಸ್ಯೆಯಿಂದಾಗಿ ಆನ್‌ಲೈನ್‌ ಸೇವೆಗಳು ವ್ಯತ್ಯಯವಾಗಿದ್ದು, ಮಂಜೂರಾಗಿರುವ ಮನೆಗಳು ರದ್ದಾಗುವ ಆತಂಕ ಫಲಾನುಭವಿಗಳಿಗೆ ಎದುರಾಗಿದೆ.

ರಾಜ್ಯದಾದ್ಯಂತ ವಿವಿಧ ವಸತಿ ಯೋಜನೆಯಡಿ 2021–22 ಮತ್ತು 2022–23ನೇ ಸಾಲಿಗೆ ಹೆಚ್ಚುವರಿಯಾಗಿ ಮಂಜೂರು ಮಾಡಿರುವ ಮನೆಗಳ ಪೈಕಿ, ಫಲಾನುಭವಿಗಳು ಆಯ್ಕೆಯಾಗಿ ಹಲವು ಲಾಗಿನ್‌ ಹಂತದಲ್ಲಿ ಅನುಮೋದನೆಗೆ ಬಾಕಿ ಇರುವ ಮತ್ತು ಫಲಾನುಭವಿಗಳು ಇನ್ನೂ ಆಯ್ಕೆಯಾಗದಿರುವ 1,35,976 ಮನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡಿ ಡಾಟಾ ಎಂಟ್ರಿ ಮಾಡಲು ಮತ್ತು ಅನುಮೋದನೆ ಪಡೆದುಕೊಳ್ಳಲು ರಾಜೀವ್‌ ಗಾಂಧಿ ವಸತಿ ನಿಗಮ ನವೆಂಬರ್‌ 30ರವರೆಗೆ ಅವಕಾಶ ನೀಡಿದೆ. ಆ ಬಳಿಕ ಬಾಕಿ ಉಳಿಯುವ ಎಲ್ಲ ಮನೆಗಳ ಗುರಿಯನ್ನು ಹಿಂಪಡೆಯಲಾಗುವುದೆಂದು ನಿಗಮ ಹೇಳಿದೆ.

ಈ ಸಂಬಂಧ ನಿಗಮವು ಈ ತಿಂಗಳ 6ರಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಪತ್ರ ಬರೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಾಮರಾಜನಗರ ಜಿಲ್ಲೆಯಲ್ಲಿ ಚಾಮರಾಜನಗರ ಮತ್ತು ಹನೂರು ತಾಲೂಕುಗಳಿಗೆ ಬಸವ ವಸತಿ ಯೋಜನೆಯಡಿಯಲ್ಲಿ 5,315 ಮತ್ತು ಡಾ.ಬಿ.ಆರ್‌. ಅಂಬೇಡ್ಕರ್‌ ಯೋಜನೆ ಅಡಿಯಲ್ಲಿ 3,349 ಸೇರಿದಂತೆ 8,664 ಮನೆಗಳ ಹಂಚಿಕೆಯ ಗುರಿ ಹೊಂದಿದೆ.

ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರು ಎರಡೂ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಇದೇ 15ರಂದು ಪತ್ರ ಬರೆದು, 25ರ ಒಳಗೆ ಗ್ರಾಮ ಸಭೆಗಳ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಿ ಆನ್‌ಲೈನ್‌ನಲ್ಲಿ ಅನುಮೋದನೆ ಪಡೆಯಲು ಸೂಚಿಸಿದ್ದರು. ಅದರಂತೆ ವಾರದಿಂದ ಗ್ರಾಮಗಳಲ್ಲಿ ವಾರ್ಡ್ ಸಭೆ ಹಾಗೂ ಗ್ರಾಮಪಂಚಾಯಿತಿ ಕೇಂದ್ರಗಳಲ್ಲಿ ಗ್ರಾಮ ಸಭೆಗಳನ್ನು ನಡೆಸಿ ಆಯಾ ಗ್ರಾಮಪಂಚಾಯಿತಿ ಸದಸ್ಯರ ಸಮ್ಮುಖದಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಿದ್ದು, ಆದೇಶ ಪತ್ರಗಳನ್ನೂ ವಿತರಿಸುತ್ತಿದ್ದಾರೆ.

“ಆಯ್ಕೆಯಾಗಿರುವ ಫಲಾನುಭವಿಗಳು ಜಾತಿ, ಆದಾಯ ಪ್ರಮಾಣಪತ್ರ ಸೇರಿದಂತೆ ಇನ್ನಿತರ ದಾಖಲೆಗಳನ್ನು ಗುರುವಾರದ ಒಳಗಾಗಿ ಗ್ರಾಮ ಪಂಚಾಯಿತಿಗೆ ಸಲ್ಲಿಸಬೇಕು. ಗ್ರಾಮ ಪಂಚಾಯಿತಿ ಅಧಿಕಾರಿಗಳು ಫಲಾನುಭವಿಗಳ ವಿವರಗಳು, ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಿ ಅನುಮೋದನೆ ಪಡೆದುಕೊಳ್ಳಬೇಕು. ಆದರೆ, ಸರ್ವರ್‌ ಸಮಸ್ಯೆಯಿಂದ ಫಲಾನುಭವಿಗಳು ದಾಖಲಾತಿ ಒದಗಿಲು ವಿಳಂಬವಾಗುತ್ತಿದೆ. ಈ ಬಗ್ಗೆ ರಾಜೀವ್‌ ಗಾಂಧಿ ವಸತಿ ನಿಗಮ ನಿರ್ಧಾರ ಕೈಗೊಳ್ಳಬೇಕು. ಜನರು ಎದುರಿಸುತ್ತಿರುವ ಸಮಸ್ಯೆ ಕುರಿತು ನಿಗಮದ ಗಮನಕ್ಕೆ ತರುತ್ತೇವೆ” ಎಂದು ಚಾಮರಾಜನಗರ ಜಿಲ್ಲಾ ಪಂಚಾಯತ್‌ ಸಿಇಒ ಆನಂದ್‌ ಪ್ರಕಾಶ್‌ ಮೀನಾ ತಿಳಿಸಿದ್ದಾರೆ.

“ಸರ್ವರ್‌ ಸಮಸ್ಯೆಯ ಕಾರಣದಿಂದ ಪ್ರಮಾಣಪತ್ರಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ನಾಲ್ಕೈದು ದಿನಗಳಿಂದ ಗ್ರಾಮ ಒನ್ ಕೇಂದ್ರಗಳು ಹಾಗೂ ನಾಡಕಚೇರಿಗೆ ಅಲೆದಾಡುವಂತಾಗಿದೆ. ನಾಲ್ಕೈದು ದಿನಗಳ ಹಿಂದೆ ಆದೇಶ ಪತ್ರ ವಿತರಿಸಲಾಗಿದೆ. ಗ್ರಾಮ ಒನ್ ಕೇಂದ್ರ ಹಾಗೂ ನಾಡಕಚೇರಿಯ ಕಂಪ್ಯೂಟರ್ ಕೇಂದ್ರಗಳಲ್ಲಿ ಸರ್ವರ್ ಸಮಸ್ಯೆಯಾಗಿದ್ದು ಸಕಾಲದಲ್ಲಿ ದಾಖಲೆಗಳು ಸಿಗುತ್ತಿಲ್ಲ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ” ಎಂದು ಫಲಾನುವಿಗಳು ಪರದಾಡುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ | ದಲಿತ ಕುಟುಂಬ ಬೆಳೆದಿದ್ದ ಕಾಫಿ, ಬಾಳೆ ಗಿಡ ನಾಶ – ಜಾತಿ ನಿಂದನೆ; ಸಂತ್ರಸ್ಥರ ಆರೋಪ

“ಮನೆ ನಿರ್ಮಿಸಿಕೊಳ್ಳಲು ಗ್ರಾಮ ಪಂಚಾಯಿತಿಯವರು ಆದೇಶ ಪತ್ರ ನೀಡಿದ್ದಾರೆ. ನಾಡಕಚೇರಿಯಲ್ಲಿ ದಾಖಲೆಗಳನ್ನು 2 ದಿನಗಳಲ್ಲಿ ಪಡೆದುಕೊಳ್ಳಲು ಆಗುವುದಿಲ್ಲ. ಹಾಗಾಗಿ ನಿಗದಿಪಡಿಸಿರುವ ಕಾಲಾವಕಾಶವನ್ನು ಮುಂದೂಡಬೇಕು” ಎಂದು ಫಲಾನುಭವಿಗಳು ಒತ್ತಾಯಿಸುತ್ತಿದ್ದಾರೆ.

“ಸರ್ವರ್ ಸಮಸ್ಯೆ ಉಂಟಾಗಿ ಸಾರ್ವಜನಿಕರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡಲು ವಿಳಂಬವಾಗುತ್ತಿದೆ. ಒಂದು ವೇಳೆ ಸರ್ವರ್ ಸಮಸ್ಯೆ ಇಲ್ಲದಿದ್ದರೂ ಎರಡು ದಿನಗಳಲ್ಲಿ ಪ್ರಮಾಣಪತ್ರ ನೀಡುವುದು ಸಾಧ್ಯವಿಲ್ಲ” ಎಂದು ನಾಡಕಚೇರಿ ಅಧಿಕಾರಿಗಳು ಹೇಳುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...