ಚಾಮರಾಜನಗರ | ರಕ್ತಚಂದನ ಅಕ್ರಮ ಸಾಗಾಟ; ಐವರ ಬಂಧನ

Date:

ತರಕಾರಿ ವಾಹನದಲ್ಲಿ ರಕ್ತಚಂದನ ಮರದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ವಿಶೇಷ ಹುಲಿ ಸಂರಕ್ಷಣಾ ದಳದ ವಲಯ ಅಧಿಕಾರಿಗಳು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯಲ್ಲಿ ನಡೆದಿದೆ.

ಬೆಂಗಳೂರಿನ ಅಮೃತಹಳ್ಳಿಯ ಮನುಗುರಪ್ಪ ಬಡಾವಣೆಯ ನಿವಾಸಿ ಆರ್ ಎಲ್ ರವಿ(47) ಚಾಮರಾಜನಗರ ತಾಲೂಕಿನ ಸರಗೂರು ಮೋಳೆಯ ಎನ್ ಎಂ ಗೋವಿಂದರಾಜ್‌(43), ಆನಂದ್ ಎಸ್ ಡಿ (40) ಚಾಮರಾಜನಗರದ ಭ್ರಮರಾಂಬ ಬಡಾವಣೆಯ ಆಸ್ಕರ್ ಪಾಷ(63) ಹಾಗೂ ಚಾಮರಾಜನಗರ ತಾಲೂಕಿನ ಹಾಗೂ ನಾಗವಳಿ ಗ್ರಾಮದ ಮಹೇಂದ್ರ(32) ಬಂಧಿತ ಆರೋಪಿಗಳು. ಇವರಿಂದ ಸುಮಾರು ಐವತ್ತು ಕೆಜಿ ತೂಕದ ರಕ್ತಚಂದನ ತುಂಡುಗಳನ್ನು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳವಾರ ಸಂಜೆ ಸುಮಾರು 6-30ರಲ್ಲಿ ತುಂಬಿದ ಬೊಲೆರೋ ವಾಹನದಲ್ಲಿ ರಕ್ತಚಂದನ ಮರಗಳ ತುಂಡುಗಳನ್ನು ಸಾಗಿಸುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಬಂಡೀಪುರ ಹುಲಿ ಸಂರಕ್ಷಣಾಧಿಕಾರಿ ರಮೇಶ್ ಕುಮಾರ್ ನಿರ್ದೇಶನದಂತೆ ಗುಂಡ್ಲುಪೇಟೆ ಬಫರ್ ಝೋನ್ ವಲಯ ಮತ್ತು ವಿಶೇಷ ಹುಲಿ ಸಂರಕ್ಷಣಾ ದಳದ ಸಿಬ್ಬಂದಿಗಳು ಹಾಗೂ ಅರಣ್ಯ ಸಂರಕ್ಷಣಾಧಿಕಾರಿಗಳಾದ ಜಿ ರವೀಂದ್ರ ಮತ್ತು ಪರಮೇಶ್ವರ್ ಹಾಗೂ ನವೀನ್ ಕುಮಾರ್ ಮೂರು ತಂಡಗಳಾಗಿ ಬೇರೆ ಬೇರೆ ಸ್ಥಳಗಳಲ್ಲಿ ನಿಯೋಜನೆ ಮಾಡಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲೂಕಿನ ಲಕ್ಕೂರು ಗ್ರಾಮದ ಬಳಿ ಕೆ ಎ 45 5301 ಸಂಖ್ಯೆಯ ಬೊಲೆರೋ ವಾಹನ ತಡೆದು ಪರಿಶೀಲನೆ ಮಾಡಿದಾಗ ಮೇಲ್ಭಾಗದಲ್ಲಿ ಹೂಕೋಸು ಜೊತೆ ಕೆಳಭಾಗದಲ್ಲಿ ರಕ್ತಚಂದನ ತುಂಡುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದು ಕಂಡುಬಂದಿದ್ದು, ಇವರನ್ನು ವಶಪಡಿಸಿಕೊಂಡ ಅರಣ್ಯ ಇಲಾಖೆಯ ಅಧಿಕಾರಿಗಳು ಗುಂಡ್ಲುಪೇಟೆ ಬಫರ್ ಝೋನ್ ವಲಯದಲ್ಲಿ ಮೊಕದ್ದಮೆ ದಾಖಲಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ‘ಬಾರುಕೋಲು’ ರಾಸುಗಳಿಗಷ್ಟೇ ಅಲ್ಲಾ, ಸರ್ಕಾರ ದಾರಿ ತಪ್ಪಿದಾಗಲು ದಂಡನಾಸ್ತ್ರವೇ: ರಾಕೇಶ್ ಟಿಕಾಯತ್

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ...

ʼಅಮೃತಭೂಮಿ’ ಸೊಬಗು ಕಂಡಿರಾ?

ದಕ್ಷಿಣ ಕರ್ನಾಟಕದ ತಳಭಾಗದಲ್ಲಿರುವ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ತಪ್ಪಲಿನ ಹೊಂಡರಬಾಳು...

ಗುಂಡ್ಲುಪೇಟೆ | ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ: ರೈತ ಮುಖಂಡರ ಬಂಧನ

ಬಂಡೀಪುರದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ ವಿರೋಧಿಸಿ ಸಾಮೂಹಿಕ...