ಚಾಮರಾಜನಗರ | ಸಾಮೂಹಿಕ ವಿವಾಹ 2 ಬಾರಿ ಮುಂದೂಡಿಕೆ; ಸ್ವಂತ ಖರ್ಚಿನಲ್ಲಿ ವಿವಾಹವಾದ 7 ಜೋಡಿ

Date:

ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನಡೆಯಬೇಕಿದ್ದ ಉಚಿತ ಸಾಮೂಹಿಕ ವಿವಾಹ 2 ಬಾರಿ ಮುಂದೂಡಿಕೆಯಾದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಿದ್ದ 7 ಜೋಡಿ ಸೋಮವಾರ ಸಾಲೂರು ಬೃಹನ್ಮಠದಲ್ಲಿ ವಿವಾಹವಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಆಗಸ್ಟ್‌ 23 ರಂದು ಸಮೂಹಿಕ ವಿವಾಹ ನಿಗದಿಪಡಿಸಲಾಗಿತ್ತು. ಆದರೆ ಸಾಮೂಹಿಕ ವಿವಾಹವನ್ನು ಕಾರಣಾಂತರದಿಂದ 28ಕ್ಕೆ ಮುಂದೂಡಲಾಗಿತ್ತು. ಈ ವೇಳೆಗೆ ಸುಮಾರು 65 ಜೋಡಿಗಳಿಂದ ಅರ್ಜಿ ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಈಗಾಗಲೇ ಕೆಲವರು ಲಗ್ನ ಪತ್ರಿಕೆಯನ್ನೂ ಹಂಚಿದ್ದರು. ಇನ್ನು ಲಗ್ನಪತ್ರಿಕೆ ಮಾಡಿಸದ ಕೆಲವರು ವಿವಾಹಕ್ಕೆ ಆಗಮಿಸುವಂತೆ ಸಂಬಂಧಿಕರಿಗೆ 2 ಬಾರಿ ತಿಳಿಸಿದ್ದರು. ಆದರೆ ಪ್ರಾಧಿಕಾರ ಮುಂದೂಡಲಾದ ಮದುವೆಗೆ ಮುಂದಿನ ದಿನಾಂಕವನ್ನು ನಿಗದಿಪಡಿಸಿ ಖಚಿತಪಡಿಸಿಲ್ಲ. ಇದರಿಂದ ಗೊಂದಲಕ್ಕೆ ಸಿಲುಕಿದ್ದ 7 ಜೋಡಿ ವಧು-ವರರು ದೃಢ ನಿರ್ಧಾರ ಹೊಂದಿ ಸ್ವಂತ ಖರ್ಚಿನಲ್ಲಿಯೇ ಬೆಟ್ಟದಲ್ಲಿ ವಿವಾಹವಾದರು.

ದಾಂಪತ್ಯ ಜೀವನಕ್ಕೆ ಕಾಲಿಟ್ಟ 7 ಜೋಡಿಗಳು: ಬಹುತೇಕ ಬಡ ವರ್ಗದ ವಧು-ವರರು ಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರದಿಂದ ನಡೆಯುವ ಉಚಿತ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲು ಅರ್ಜಿ ಸಲ್ಲಿಸುವುದು ವಾಡಿಕೆ. ಆದರೆ 2 ಬಾರಿ ವಿವಾಹ ಮುಂದೂಡಿಕೆಯಾಗಿದ್ದ ಹಿನ್ನೆಲೆಯಲ್ಲಿ ಚಾಮರಾಜನಗರದ ಜಗದೀಶ್- ನಂಜನಗೂಡಿನ ಕಾವ್ಯಾಶ್ರೀ, ಪಿಜಿ ಪಾಳ್ಯದ ಮಹೇಶ್ ಕುಮಾರ್ ಮೈಸೂರಿನ ಹೊರಳವಾಡಿಯ ರಮ್ಯಾ, ತಾಳವಾಡಿಯ ಉದಯಕುಮಾರ್, ಇದೇ ಗ್ರಾಮದ ಸ್ನೇಹ, ನರಸೀಪುರದ ದಿನೇಶ್ ಮೈಸೂರಿನ ನಿರ್ಮಲಾ, ನಂಜನಗೂಡು ತಾಲೂಕಿನ ಹಳೇಪುರದ ಮಹೇಂದ್ರ, ಚಾಮರಾಜನಗರ ತಾಲೂಕಿನ ಅರಳೀಪುರ ಗ್ರಾಮದ ಮಂಗಳಮ್ಮ, ಮೈಸೂರಿನ ಸಂಜಯ್ – ಸೌಭಾಗ್ಯ ಹಾಗೂ ಚಾಮರಾಜನಗರದ ರವಿ-ಸೌಮ್ಯ ಜೋಡಿ ಸಾಲೂರು ಬೃಹನ್ಮಠದಲ್ಲಿ ವಿವಾಹವಾದರು. ಅಂತೆಯೆ ಮಹದೇಶ್ವರ ಬೆಟ್ಟದ ಬೊಮ್ಮೇಶ್ವರ ದೇಗುಲದಲ್ಲಿ ಮಹದೇವಪ್ಪ-ಸವಿತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪ್ರಚಾರಕ್ಕಾಗಿ ಸಚಿವರನ್ನ ರೇಣುಕಾಚಾರ್ಯ ಭೇಟಿ ಮಾಡುತ್ತಿದ್ದಾರೆ: ಶಾಸಕ ಬಸವರಾಜ್ ಶಿವಗಂಗಾ

ದಿನಾಂಕ ನಿಗದಿಗೆ ಒತ್ತಾಯ: ಈಗಾಗಲೇ 2 ಬಾರಿ ವಿವಾಹ ಮಂದೂಡಿಕೆಯಾಗಿರುವುದರಿಂದ ಅರ್ಜಿ ಸಲ್ಲಿಸಿರುವ ವಧು- ವರರು ಹಾಗೂ ಕುಟುಂಬಸ್ಥರು ಪ್ರಾಧಿಕಾರದ ಕಾರ್ಯವೈಖರಿಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಸಾಮೂಹಿಕ ವಿವಾದ ಮುಂದಿನ ದಿನಾಂಕವನ್ನು ಕೂಡಲೇ ನಿಗದಿಪಡಿಸುವಂತೆ ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ‘ಬಾರುಕೋಲು’ ರಾಸುಗಳಿಗಷ್ಟೇ ಅಲ್ಲಾ, ಸರ್ಕಾರ ದಾರಿ ತಪ್ಪಿದಾಗಲು ದಂಡನಾಸ್ತ್ರವೇ: ರಾಕೇಶ್ ಟಿಕಾಯತ್

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ...

ʼಅಮೃತಭೂಮಿ’ ಸೊಬಗು ಕಂಡಿರಾ?

ದಕ್ಷಿಣ ಕರ್ನಾಟಕದ ತಳಭಾಗದಲ್ಲಿರುವ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ತಪ್ಪಲಿನ ಹೊಂಡರಬಾಳು...

ಗುಂಡ್ಲುಪೇಟೆ | ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ: ರೈತ ಮುಖಂಡರ ಬಂಧನ

ಬಂಡೀಪುರದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ ವಿರೋಧಿಸಿ ಸಾಮೂಹಿಕ...