ಚಾಮರಾಜನಗರ | ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ

Date:

ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆನೆ ದಾಳಿ, ಕಾಡ್ಗಿಚ್ಚು, ಕಾಡುಗಳ್ಳರ ಮುತ್ತಿಗೆ, ಪ್ರಾಣಿಗಳ ದಾಳಿ ಸೇರಿದಂತೆ ಹಲವು ಪ್ರಕರಣಗಳಲ್ಲಿ ಪ್ರಾಣ ತೆತ್ತಿರುವ ನಿರ್ದೇಶನಗಳನ್ನು ನಾವು ಸಾಕಷ್ಟು ನೋಡಿದ್ದೇವೆ. ಹಾಗಾಗಿ ಅರಣ್ಯ ಹುತಾತ್ಮರ ದಿನಾಚರಣೆಯಿಂದ ಇವರ ಸೇವೆಗಳನ್ನು ಸ್ಮರಣೆ ಮಾಡಿಕೊಳ್ಳುವುದು ಬಹು ಮುಖ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಬಸವರಾಜ್ ತಳವಾರ್ ಅವರು ತಿಲೀಸಿದರು.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ನಡೆದ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಮಾನವ ಅರಣ್ಯವನ್ನು ಸಂರಕ್ಷಣೆ ಮಾಡದೆ ಹೋದರೆ ಮತ್ತು ಮುಂದಿನ ದಿನಗಳಲ್ಲಿ ಅರಣ್ಯ ಅಳಿವಿನ ಪರಿಸ್ಥಿತಿ ತಲುಪುವುದರಲ್ಲಿ ಯಾವುದೇ ಸಂಶಯವಿಲ್ಲ. ಮುಂದಿನ ಪೀಳಿಗೆಗಳಿಗೂ ಅರಣ್ಯಗಳು ಇರಬೇಕಾದರೆ ಅರಣ್ಯ ಸಂರಕ್ಷಣೆ ಮಾಡುವುದು ಕೇವಲ ಅರಣ್ಯ ಇಲಾಖೆಯ ಕರ್ತವ್ಯವಲ್ಲ. ಇದಕ್ಕೆ ಸಾರ್ವಜನಿಕರ ಸಹಕಾರವೂ ತುಂಬಾ ಅಗತ್ಯವಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಐತಿಹಾಸಿಕ ದಾಖಲೆ ಆಧಾರದ ಮೇಲೆ ನೋಡುವುದಾದರೆ ಮೊದಲು ಇದ್ದಿದ್ದು ಮಾನವನ ಅಥವಾ ಅರಣ್ಯವಾ ಎಂದು ನೋಡಿದರೆ ಮೊದಲು ಅರಣ್ಯ ಎಂದು ತಿಳಿಯುತ್ತದೆ. ಮಾನವ ತನ್ನ ಮೂಲ ನೆಲೆಯಾದ ಅರಣ್ಯವನ್ನು ಸಂರಕ್ಷಣೆ ಮಾಡಲು ವಿಫಲನಾಗಿದ್ದಾನೆ ಮತ್ತು ತನ್ನ ಸ್ವಾರ್ಥಕ್ಕಾಗಿ ಅರಣ್ಯವನ್ನು ವಿನಾಶದ ಕಡೆಗೆ ತೆಗೆದುಕೊಂಡು ಹೋಗುತ್ತಿದ್ದಾನೆ” ಎಂದು ಆರೋಪಿಸಿದರು.

ಬಂಡೀಪುರ ಹುಲಿ ಯೋಜನೆಯ ನಿರ್ದೇಶಕ ಡಾ. ರಮೇಶ್ ಕುಮಾರ್ ಮಾತನಾಡಿ, “ಪೊಲೀಸ್ ಇಲಾಖೆಗಿಂತಲೂ ಅರಣ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವುದು ಬಹಳ ಕಷ್ಟಕರ ಕೆಲಸ. ಹಾಗೆಯೇ ಯಾವಾಗ ಯಾವ ಘಟನೆ ನಡೆಯುತ್ತದೆ ಎಂಬುವುದೇ ತಿಳಿಯುವುದಿಲ್ಲ. ಹಾಗಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ತಮ್ಮ ಜೀವವನ್ನು ರಕ್ಷಣೆ ಮಾಡಿಕೊಂಡು ಕೆಲಸ ಮಾಡಬೇಕು. ತುಂಬಾ ಎಚ್ಚರಿಕೆಯಿಂದ ಕೆಲಸ ಮಾಡಬೇಕು” ಎಂದು ತಿಳಿಸಿದರು.

“ನಮ್ಮ ರಾಜ್ಯದಲ್ಲಿ ಈವರೆಗೆ 60 ಮಂದಿ ಅರಣ್ಯ ಇಲಾಖೆ ಅಧಿಕಾರಿಗಳು ಹುತಾತ್ಮರಾಗಿದ್ದು, ನಮ್ಮ ಬಂಡೀಪುರದಲ್ಲಿ ಐದು ಮಂದಿ ಸಿಬ್ಬಂದಿಗಳು ಹುತಾತ್ಮರಾಗಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಅವರ ಅಗತ್ಯಕ್ಕನುಗುಣವಾಗಿ ಹುತಾತ್ಮರ ದಿನಾಚರಣೆ ಆಚರಿಸುತ್ತಿದ್ದರು. ನಮ್ಮ ರಾಜ್ಯದಲ್ಲಿ ಡಿಸಿಎಫ್ ಅಧಿಕಾರಿ ಶ್ರೀನಿವಾಸ್ ಅವರು ಹುತಾತ್ಮರಾದ ದಿನದಂದು ಆಚರಿಸಲಾಗುತ್ತಿತ್ತು. ತದನಂತರ 2013ರ ಬಳಿಕ ಸೆಪ್ಟಂಬರ್ 11ರಂದು ಅರಣ್ಯ ಹುತಾತ್ಮರ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | 57 ವರ್ಷಗಳ ಹಿಂದೆ ಎಮ್ಮೆ ಕದ್ದಿದ್ದ ಆರೋಪಿ ಬಂಧನ

ಇದೇ ವೇಳೆ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗೌರವ ಸಮರ್ಪಣೆ ಸಲ್ಲಿಸಿ ಎರಡು ನಿಮಿಷಗಳ ಕಾಲ ಮೌನಚರಣೆ ಸಲ್ಲಿಸಿದರು.

ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಶಿವಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನವೀನ್ ಕುಮಾರ್ ಮತ್ತು ಪರಮೇಶ್ವರ್ ಹಾಗೂ ರವೀಂದ್ರ ಸೇರಿದಂತೆ ಹಲವು ವಲಯಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ‘ಬಾರುಕೋಲು’ ರಾಸುಗಳಿಗಷ್ಟೇ ಅಲ್ಲಾ, ಸರ್ಕಾರ ದಾರಿ ತಪ್ಪಿದಾಗಲು ದಂಡನಾಸ್ತ್ರವೇ: ರಾಕೇಶ್ ಟಿಕಾಯತ್

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ...

ʼಅಮೃತಭೂಮಿ’ ಸೊಬಗು ಕಂಡಿರಾ?

ದಕ್ಷಿಣ ಕರ್ನಾಟಕದ ತಳಭಾಗದಲ್ಲಿರುವ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ತಪ್ಪಲಿನ ಹೊಂಡರಬಾಳು...

ಗುಂಡ್ಲುಪೇಟೆ | ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ: ರೈತ ಮುಖಂಡರ ಬಂಧನ

ಬಂಡೀಪುರದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ ವಿರೋಧಿಸಿ ಸಾಮೂಹಿಕ...