ಚಾಮರಾಜನಗರ | ಕೆಲಸ ಅರಸಿ ನೆರೆ ರಾಜ್ಯಕ್ಕೆ ಗುಳೆ ಹೊರಟ ಮಂದಿ; ಮಕ್ಕಳ ಶಿಕ್ಷಣ ಮೊಟಕು

Date:

ನೆರೆ ರಾಜ್ಯ ಕೇರಳದಲ್ಲಿ ಡಿಸೆಂಬರ್‌ನಿಂದ ಫೆಬ್ರವರಿವರೆಗೆ ಕಾಫಿ ಕೊಯ್ಲು ಸೇರಿದಂತೆ ಇತರ ಕೆಲಸಗಳನ್ನು ಅರಸಿ ರಾಜ್ಯದ ಗಡಿ ಭಾಗದ ಹಲವು ಗ್ರಾಮದ ಜನರು ಕೇರಳಕ್ಕೆ ಗುಳೆ ಹೊರಟಿದ್ದಾರೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು, ಕೂತನೂರು, ಕೂಡಹಳ್ಳಿ ಆದಿವಾಸಿ ಸಮುದಾಯದವರು ಹಾಗೂ ಮತ್ತಿತರ ಗ್ರಾಮಗಳ ಜನರು ಹೆಚ್ಚಿನ ಕೂಲಿ ನಿರೀಕ್ಷಿಸಿ ಸಂಸಾರ ಸಹಿತ ಕೇರಳಕ್ಕೆ ಗುಳೆ ಹೋಗುವ ಸಂಭವ ಹೆಚ್ಚಿರುತ್ತದೆ. ನಾವು ಕೂಲಿ ಕೆಲಸಕ್ಕೆ ತೆರಳುವಾಗ ಅವರ ಮಕ್ಕಳ ಆಶ್ರಯದ ಜವಾಬ್ದಾರಿ ನೋಡಿಕೊಳ್ಳುವವರಿಲ್ಲದೆ ಅವರ ಮನೆಯ ಮಕ್ಕಳನ್ನು ಜತೆಯಲ್ಲಿಯೇ ಕರೆದುಕೊಂಡು ಹೋಗುವ ಸಾಧ್ಯತೆಯಿದೆ.

ಓದುತ್ತಿರುವ ಮಕ್ಕಳನ್ನು ಅನಿವಾರ್ಯವಾಗಿ ಶಾಲೆ ಬಿಡಿಸಿ ಹೆಚ್ಚಿನ ಕೂಲಿ ಆಸೆ ಮತ್ತು ಜೀವನ ನಿರ್ವಹಣೆಗೆಂದು ಸಂಸಾರ ಸಹಿತ ಹೋಗುವುದರಿಂದ ಮಕ್ಕಳನ್ನು ಬಾಲಕಾರ್ಮಿಕರನ್ನಾಗಿಸುತ್ತಾರೆ.
ಮೂರ್ನಾಲ್ಕು ತಿಂಗಳು ಶಾಲೆಯಿಂದ ದೂರ ಉಳಿದ ಮಕ್ಕಳು ಮತ್ತೆ ಓದುವ ಆಸೆಯಿಂದ ಯುವಕರಾಗುವುದು ಸಹಜವಾಗಿರುತ್ತದೆ. ಕಷ್ಟಪಟ್ಟು ಓದಿದ ಮಕ್ಕಳು ಪರಿಕ್ಷೆ ಸಮಯದಲ್ಲಿ ಶಾಲೆಯಿಂದ ದೂರ ಉಳಿದರೆ, ಪಾಸ್ ಆಗುವುದಾದರೂ ಹೇಗೆ ಎಂಬ ಪ್ರಶ್ನೆ ಎದುರಾಗುತ್ತದೆ. ಆದರೆ ತಾಲೂಕು ಆಡಳಿತ ಮತ್ತು ಶಿಕ್ಷಣ ಇಲಾಖೆ, ಗಮನಹರಿಸಿ ಮಕ್ಕಳ ಭವಿಷ್ಯಗಳು ಹಾಳಾಗದಂತೆ ಮುನ್ನೆಚ್ಚರಿಕೆ ವಹಿಸಲು ಮುಂದಾಗಬೇಕಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲಸ ಹರಸಿ ಹೊರಟ ಮಂದಿ

ಗುಂಡ್ಲುಪೇಟೆ ತಾಲೂಕು, ಮಳೆಯಾಶ್ರಿತ ಪ್ರದೇಶ ಈ ಬಾರಿ ಬರಗಾಲದ ಬಿಸಿ, ತುಸು ಹೆಚ್ಚು ತಟ್ಟಿದೆ ಎನ್ನಬಹುದು. ದುಡಿಯುವ ಕೈಗಳಿಗೆ ಕೆಲಸ ಇಲ್ಲದ ಪರಿಸ್ಥಿತಿ ನಿರ್ಮಾಣ ಆಗಿರುವುದು ಸುಳ್ಳಲ್ಲ ಎಂಬುದು ಸ್ಪಷ್ಟ. ಇದರಿಂದ ನೆರೆಯ ಕೇರಳ ರಾಜ್ಯಕ್ಕೆ ಕೂಲಿ ಅರಸಿ ವಲಸೆ ಹೋಗುವುದು ಸರ್ವೇ ಸಾಮಾನ್ಯವಾಗಿದೆ. ಆದರೆ ತಾಲೂಕು ಆಡಳಿತ ಇದನ್ನೆಲ್ಲ ನೋಡಿಯೂ ನೋಡದಂತೆ ಇದ್ದಾರೆಂಬ ಆರೋಪ ಕೇಳಿಬರುತ್ತಿದೆ. ವ್ಯಾಸಂಗ ಮಾಡಬೇಕಾದ ಮಕ್ಕಳು ಪರಿಸ್ಥಿತಿಯ ಒತ್ತಡಕ್ಕೆ ಸಿಲುಕಿ ಭವಿಷ್ಯ ಹಾಳಾಗುತ್ತಿರುವುದನ್ನು ತಾಲೂಕು ಆಡಳಿತ ಗಂಭೀರವಾಗಿ ಪರಿಗಣಿಸಬೇಕು.

ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ಸುಭಾಷ್ ಮಾಡ್ರಹಳ್ಳಿ ಈ ದಿನ.ಕಾಮ್ ಜೊತೆ ಮಾತನಾಡಿ, “ಪೇಟೆ ಗಡಿ ತಾಲೂಕು ಕೇಂದ್ರವಾಗಿರುವುದರಿಂದ ಸಹಜವಾಗಿ ಕೂಲಿ ಅರಸಿ ವಲಸೆ ಹೋಗುವುದು ಸರ್ವೇ ಸಾಮಾನ್ಯವಾಗಿದೆ. ಆದರೆ ಮಕ್ಕಳನ್ನು ಶಾಲೆ ಬಿಡಿಸಿ ಕರೆದುಕೊಂಡು ಹೋಗುವುದರಿಂದ ಶಿಕ್ಷಣದಿಂದ ವಂಚಿತರಾಗುವುದಲ್ಲದೆ ಮಕ್ಕಳ ಭವಿಷ್ಯ ಕಮರುತ್ತದೆ. ಜಿಲ್ಲೆಯಲ್ಲಿ ಡ್ರಾಪೌಟ್ ಮಕ್ಕಳ ಸಂಖ್ಯೆ ಕೊಟ್ಟಿರುವ ಮಾಹಿತಿ ಇದೆ. ಇದನ್ನು ತಾಲೂಕು ಆಡಳಿತ ಮತ್ತು ಶಿಕ್ಷಣ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ಪುನರ್ವಸತಿ ಕೇಂದ್ರ ತೆರೆದು ಮಕ್ಕಳಿಗೆ ಆಶ್ರಯ ನೀಡಬೇಕು. ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಸೃಷ್ಟಿಸಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿದ್ದೀರಾ? ಲೋಕಸಭೆ ಚುನಾವಣೆ | ತಮ್ಮ ಸಂಬಂಧಿಕರಿಗೆ ಟಿಕೆಟ್‌ ಗಿಟ್ಟಿಸಲು ಪ್ರಮುಖ ಕಾಂಗ್ರೆಸ್ಸಿಗರ ಲಾಬಿ

ರಾಘವಾಪುರ ಗ್ರಾಮ ಪಂಚಾಯಿತಿ ಸದಸ್ಯ ಆರ್ ಡಿ ಉಲ್ಲಾಸ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಕೂಲಿ ಅರಸಿ ಹೋಗುವುದು ಸರ್ವೇಸಾಮಾನ್ಯವಾಗಿದೆ. ಅದರಿಂದ ಮಕ್ಕಳನ್ನು ಶಾಲೆ ಬಿಡಿಸಿ ಬಾಲ ಕಾರ್ಮಿಕರನ್ನಾಗಿಸುವುದು ಒಂದು ಅಪರಾಧ. ತಾಲೂಕು ಆಡಳಿತ ಮತ್ತು ಶಿಕ್ಷಣ ಇಲಾಖೆ ಇದರ ಬಗ್ಗೆ ಗಮನ ಹರಿಸಿ ಮಕ್ಕಳ ಭವಿಷ್ಯ ಹಾಳಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...