ಚಾಮರಾಜನಗರ | ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಕ್ಕೆ ನಿರ್ಧಾರ

Date:

ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮತ್ತು ಅರಣ್ಯ ಇಲಾಖೆಗಳು ಮುಂದಾಗಿವೆ.

ಚಾಮರಾಜನಗರ ಜಿಲ್ಲಾಡಳಿತವು ಬೆಟ್ಟದ ದೇವಾಲಯದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸಿದ್ದರೂ, ಅದರ ಬಳಕೆ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಬೆಟ್ಟದ ದೇವಾಲಯದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ತೊಡೆದುಹಾಕಲು ಜಂಟಿ ಜಾಗೃತಿ ಅಭಿಯಾನ ತೀವ್ರಗೊಳಿಸಿದ್ದಾರೆ.

ಸ್ವಯಂಸೇವಕರು ಮತ್ತು ಸರ್ಕಾರೇತರ ಸಂಸ್ಥೆಗಳ ಸಹಾಯವನ್ನು ಬಳಸಿಕೊಂಡು, ಅರಣ್ಯ ಇಲಾಖೆ ಕಳೆದ ವರ್ಷ ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ಅಭಯಾರಣ್ಯದ ಮೂಲಕ ಹಾದುಹೋಗುವ ಕೌದಳ್ಳಿಯಿಂದ ಬೆಟ್ಟದವರೆಗೆ 36 ಕಿಲೋಮೀಟರ್ ಉದ್ದಕ್ಕೂ ಸುಮಾರು ಏಳರಿಂದ ಎಂಟು ಟನ್ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹದೇಶ್ವರ ಅಭಯಾರಣ್ಯವು ಸುಮಾರು 15 ಹುಲಿಗಳು, 700 ಕ್ಕೂ ಹೆಚ್ಚು ಆನೆಗಳು, ಕಡವೆ(ಸಾಂಬಾರ್‌ ಜಿಂಕೆ), ಭಾರತೀಯ ಕಾಡೆಮ್ಮೆ ಮತ್ತು ಇತರ ಪ್ರಾಣಿಗಳಿಗೆ ಹಾಗೂ ಹಲವು ಜಾತಿಯ ಪಕ್ಷಿಗಳಿಗೆ ನೆಲೆಯಾಗಿದೆ. ಈ ಬೆಟ್ಟದ ದೇವಾಲಯಕ್ಕೆ ವರ್ಷಕ್ಕೆ ಸುಮಾರು 50 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡುತ್ತಾರೆ.

ಭೇಟಿ ನೀಡುವ ಭಕ್ತರು ಮತ್ತು ಪ್ರವಾಸಿಗರು ಪ್ಲಾಸ್ಟಿಕ್‌ ಕವರ್‌ಗಳು, ಕುಡಿಯುವ ನೀರಿನ ಬಾಟಲಿಗಳು, ಚೀಲಗಳು ಮತ್ತು ಬಳಸಿದ ಪಾದರಕ್ಷೆಗಳು ಸೇರಿದಂತೆ ಪ್ಲಾಸ್ಟಿಕ್ ತ್ಯಾಜ್ಯವನ್ನು ಎಸೆಯುವುದರಿಂದ ಗಂಭೀರ ಪ್ಲಾಸ್ಟಿಕ್ ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಈಗ, ತಪ್ಪಿತಸ್ಥರನ್ನು ಭೇದಿಸಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ, ದೇವಾಲಯದ ಬೀದಿಗಳಲ್ಲಿ ಮತ್ತು ಮಹದೇಶ್ವರ ಬೆಟ್ಟದ ಅಭಯಾರಣ್ಯದ 36 ಕಿ ಮೀ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಹಾವಳಿಯನ್ನು ತಪ್ಪಿಸಲು ದೇವಾಲಯ ಪ್ರಾಧಿಕಾರ ಅರಣ್ಯಾಧಿಕಾರಿಗಳನ್ನು ಒಳಗೊಂಡ ವಿಶೇಷ ತಂಡ ರಚಿಸಲು ನಿರ್ಧರಿಸಿದೆ.

ಅಂಗಡಿಯವರ ವಿರುದ್ಧ ಅಭಿಯಾನವನ್ನು ತೀವ್ರಗೊಳಿಸಲು ದೇವಾಲಯದ ಪ್ರಾಧಿಕಾರವು ಅಧಿಕಾರಿಗಳಿಗೆ ತಿಳಿಸಿದ್ದು, ನಿರ್ದೇಶನವನ್ನು ಉಲ್ಲಂಘಿಸುವುದು ಕಂಡುಬಂದರೆ ಅವರ ವ್ಯವಹಾರಗಳನ್ನು ವಶಪಡಿಸಿಕೊಳ್ಳಲು ನಿರ್ದೇಶಿಸಿದೆ.

ಪ್ಲಾಸ್ಟಿಕ್ ನೀರಿನ ಬಾಟಲಿಗಳು, ಕ್ಯಾರಿ ಬ್ಯಾಗ್‌ಗಳು, ಯೂಸ್ ಅಂಡ್ ಥ್ರೋ ಕವರ್‌ಗಳು, ಶೌಚಾಲಯಗಳ ಪ್ಲಾಸ್ಟಿಕ್ ಬಾಟಲಿಗಳು, ಸೌಂದರ್ಯವರ್ಧಕಗಳು, ಸ್ವಚ್ಛಗೊಳಿಸುವ ವಸ್ತುಗಳು ಮುಂತಾದ ಎಲ್ಲ ಏಕ-ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಮೇಲೆ ನಿಷೇಧ ಅನ್ವಯಿಸುತ್ತದೆ.

“ಪ್ಲಾಸ್ಟಿಕ್ ಹಾವಳಿ ಹೆಚ್ಚಾಗಿರುವ ಬೆಟ್ಟದ ಉಗಮ ಸ್ಥಾನಗಳಾದ ವಡಕೆಹಳ್ಳ, ತಾಳೆಬೆಟ್ಟ ಸೇರಿದಂತೆ ವಿವಿಧ ಸ್ಥಳಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಕ್ತರು ಪ್ಲಾಸ್ಟಿಕ್ ವಸ್ತುಗಳನ್ನು ಸಾಗಿಸುತ್ತಿದ್ದಾರೆಯೇ ಎಂದು ಪರಿಶೀಲಿಸಲು ಎರಡು ಸ್ಥಳಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗುವುದು” ಎಂದು ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರ್ವಾಹಕ ಕಾರ್ಯದರ್ಶಿ ಸರಸ್ವತಿ ತಿಳಿಸಿದ್ದಾರೆ.

“ಸ್ಥಳೀಯರು ಮತ್ತು ಬೆಟ್ಟದ ದೇವಾಲಯಕ್ಕೆ ಭೇಟಿ ನೀಡುವ ಪ್ರವಾಸಿಗರು ತಮ್ಮೊಂದಿಗೆ ಪ್ಲಾಸ್ಟಿಕ್ ಬಾಟಲಿಗಳು ಮತ್ತು ಇತರ ಏಕ-ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ತರುತ್ತಿಲ್ಲವೆಂದು ಖಚಿತಪಡಿಸಿಕೊಳ್ಳಲು ಈ ಚೆಕ್ ಪೋಸ್ಟ್‌ಗಳಲ್ಲಿ ಸಿಬ್ಬಂದಿಯನ್ನು ನಿಯೋಜಿಸಿದ್ದು, ನಿಯಮಿತವಾಗಿ ತಪಾಸಣೆ ನಡೆಸಲಾಗುವುದು” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಮೇವು, ನೀರು ಅರಸಿ ಕೊಪ್ಪಳದಿಂದ ದನಕರುಗಳ ವಲಸೆ

“ಅಭಯಾರಣ್ಯದ ರಸ್ತೆಯುದ್ದಕ್ಕೂ ಭಕ್ತರು ಪ್ಲಾಸ್ಟಿಕ್ ಕವರ್ ಮತ್ತು ಇತರ ತ್ಯಾಜ್ಯಗಳಿಂದ ಅರಣ್ಯ ಪ್ರದೇಶವನ್ನು ಅನೈರ್ಮಲ್ಯ ಮಾಡುತ್ತಿದ್ದಾರೆ. ಕಸ ಹಾಕುವುದರಿಂದ, ಪ್ಲಾಸ್ಟಿಕ್ ತ್ಯಾಜ್ಯವನ್ನು ಹಾಕುವುದರಿಂದ ಕಾಡು ಪ್ರಾಣಿಗಳಿಗೆ ಅಪಾಯ ಉಂಟಾಗುತ್ತಿದ್ದು, ಕೆಲವು ಪ್ರಾಣಿಗಳು ಸಾವನ್ನಪ್ಪುತ್ತಿವೆ. ಪ್ಲಾಸ್ಟಿಕ್ ಮಣ್ಣನ್ನೂ ಕೂಡ ಕಲುಷಿತಗೊಳಿಸುತ್ತದೆ. ಅರಣ್ಯ ಇಲಾಖೆ ಮತ್ತು ದೇವಾಲಯದ ಪ್ರಾಧಿಕಾರವು ಜಾಗೃತಿ ಅಭಿಯಾನವನ್ನು ನಡೆಸುವ ಮೂಲಕ ಪ್ಲಾಸ್ಟಿಕ್ ಪಿಡುಗಿನ ವಿರುದ್ಧ ಹೋರಾಡಲು ಮತ್ತು ಜನರು ಪ್ಲಾಸ್ಟಿಕ್ ತರುವುದನ್ನು ತಡೆಯುವ ಮೂಲಕ ಜಂಟಿ ಯೋಜನೆಯನ್ನು ರೂಪಿಸಿದೆ” ಎಂದು ಮಹದೇಶ್ವರ ಬೆಟ್ಟ ಅಭಯಾರಣ್ಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ ಸಂತೋಷ್ ಕುಮಾರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...