ಚಾಮರಾಜನಗರ | ಕನಕ ಜಯಂತಿ ಪೂರ್ವಭಾವಿ ಸಭೆ

Date:

ಕನಕ ಜಯಂತಿಯನ್ನು ನಿಗದಿತ ದಿನದಂದು ತಾಲೂಕು ಆಡಳಿತದಿಂದ ಸರಳವಾಗಿ ಆಚರಣೆ ಮಾಡಲಾಗುತ್ತದೆ. ನಂತರದ ದಿನದಲ್ಲಿ ‌ಸಮಾಜ ಮತ್ತು ಸಂಘ ಸಂಸ್ಥೆಗಳ ಜೊತೆಗೂಡಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಶಾಸಕ ಗಣೇಶ್ ಪ್ರಸಾದ್ ಹೇಳಿದ್ದಾರೆ.

ಚಾಮನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದ ಕನಕ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. “ಡಿಸೆಂಬರ್‌ನಲ್ಲಿ ವಿಧಾನಸಭಾ‌ ಅಧಿವೇಶನ ಇರುವುದರಿಂದ ಶೀಘ್ರದಲ್ಲಿ ಕನಕ ‌ಜಯಂತಿ‌ ಆಚರಣೆ ದಿನಾಂಕವನ್ನು ನಿಗದಿಗೊಳಿಸಲಾಗುವುದು. ಯಾವುದೇ ಗೊಂದಲಕ್ಕೆ ಅವಕಾಶ ಮಾಡಿಕೊಡದೆ ಎಲ್ಲಾ ಸಮುದಾಯವರ ಜೊತೆಗೂಡಿ ಆಚರಣೆ ಮಾಡಬೇಕು” ಎಂದರು.

ಪುರಸಭಾ ಮಾಜಿ ಅಧ್ಯಕ್ಷ ಜಿ.ಡಿ.ಎಲ್ ಸುರೇಶ್ ಮಾತನಾಡಿ, “ಕಾರಣಂತರಗಳಿಂದ ಕಳೆದ ನಾಲ್ಕು ವರ್ಷಗಳಿಂದ ಸರಳವಾಗಿ ಕನಕ ಜಯಂತಿ ಆಚರಣೆ ಮಾಡಲಾಗಿದೆ. ಈ‌ಬಾರಿ ಸಮಾಜದ ಬೇಡಿಕೆಯಂತೆ ಅದ್ದೂರಿಯಾಗಿ ಕನಕ ‌ಜಯಂತಿ ಆಚರಣೆ ಮಾಡಬೇಕು. ಕುರುಬ ಸಮಾಜದ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಯಲ್ಲಿ ಚಿನ್ನದ ಪದಕಗಳಿಸಿದ್ದಾರೆ. ಅವರಿಗೆ ಸನ್ಮಾನ ‌ಮಾಡಲಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕನಕ ಭವನ ಹತ್ತು ವರ್ಷದಿಂದ ನೆನೆಗುದಿಗೆ ಬಿದ್ದಿದೆ. ಇದನ್ನು ಶೀಘ್ರ ಪೂರ್ಣಗೊಳಿಸಬೇಕು” ಎಂದು ‌ಕನಕ‌ ಯುವ ಸಂಘಟನೆಯ ಯುವಕರು ಶಾಸಕರಲ್ಲಿ ಮನವಿ ಮಾಡಿಕೊಂಡರು.

ಸಭೆಯಲ್ಲಿ ತಹಸೀಲ್ದಾರ್ ಟಿ.ರಮೇಶ್ ಬಾಬು, ಪುರಸಭೆ ಮುಖ್ಯಾಧಿಕಾರಿ ವಸಂತಕುಮಾರಿ ವಿಶ್ವನಾಥ್, ಶಿವಣ್ಣ, ತಾಪಂ‌ ಇಓ ರಾಮಲಿಂಗಯ್ಯ,ಮತ್ತು ‌ಯಜಮಾರುಗಳು‌ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...