ಚಾಮರಾಜನಗರ | ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು: ಶಾಸಕ ಎಚ್.ಎಂ ಗಣೇಶ್ ಪ್ರಸಾದ್

Date:

ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು. ಶಿಕ್ಷಣ ವ್ಯವಸ್ಥೆಯಲ್ಲಿ ‌ಕನ್ನಡಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಎಚ್.ಎಂ ಗಣೇಶ್ ಪ್ರಸಾದ್ ಹೇಳಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸರ್ಕಾರಿ ಆದರ್ಶ ಶಾಲೆಯಲ್ಲಿ ನಡೆದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಮಾತೃಭಾಷೆ ಬಹಳ ಮುಖ್ಯವಾಗಿದೆ. ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ‌ಕನ್ನಡಕ್ಕೆ ಮೊದಲ ಆದ್ಯತೆ ನೀಡಲಾಗಿದೆ. ಸರ್ಕಾರಿ ಕಚೇರಿಯಲ್ಲಿ ಕನ್ನಡದಲ್ಲೆ ‌ವ್ಯವಹಾರ ನಡೆಸುವ ಮೂಲಕ ಕನ್ನಡಕ್ಕೆ ಹೆಚ್ಚಿನ ಮನ್ನಣೆ ನೀಡಲಾಗಿದೆ” ಎಂದು ಹೇಳಿದರು.

“ಇತಿಹಾಸದಲ್ಲಿ ಕನ್ನಡಕ್ಕೆ ಅದರದೆ ಆದ ವಿಶೇಷವಾದ ಸ್ಥಾನ ಹೊಂದಿದ್ದು ಸಂಸ್ಕೃತ ಭಾಷೆಯಲ್ಲಿ ಹೆಚ್ಚು ಕನ್ನಡ ಪದಗಳನ್ನು ಬಳಸಿರುವುದನ್ನು ನೋಡಿದರೆ ಕನ್ನಡ ಭಾಷೆಯ ಮಹತ್ವ ತಿಳಿಯುತ್ತದೆ.ಕರ್ನಾಟಕದಲ್ಲಿ ಇರುವ ಕವಿಗಳು ದೇಶದಲ್ಲಿ ಎಲ್ಲೂ ಇಲ್ಲಾ, ಕುವೆಂಪು. ದ.ರಾ ಬೇಂದ್ರೆ ಸೇರಿದಂತೆ ಅನೇಕ ರಾಷ್ಟ್ರಕವಿಗಳಿಗೆ ಜನ್ಮ ನೀಡಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕನ್ನಡದಲ್ಲಿ ರಚಿಸಿರುವ ಅನೇಕ ಕವನಗಳು ಬಹಳ ಅರ್ಥಪೂರ್ಣವಾಗಿವೆ. ಕುವೆಂಪು ಅವರು ರಚಿಸಿರುವ ಓ ನನ್ನ ಚೇತನ ಆಗು ನೀ ಅನಿಕೇತನ ಎನ್ನುವ ಕವನ ಬಹಳ ಅಚ್ಚುಕಟ್ಟಾಗಿ ರಚನೆಯಾಗಿದೆ ಇದಕ್ಕಾಗಿಯೇ ಕನ್ನಡದ ಕಂಪು ವಿಶ್ವದೆಲ್ಲೆಡೆ ಹರಿಯುತ್ತಿದೆ” ಎಂದರು.

“ಎರಡು ರಾಜ್ಯಗಳ ಗಡಿಯನ್ನು ಹೊಂದಿರುವ ಗುಂಡ್ಲುಪೇಟೆಗೆ ಪ್ರತಿದಿನ ನೂರಾರು ಮಂದಿ ವ್ಯಾಪಾರ ವಹಿವಾಟಿಗೆ ಪಟ್ಟಣಕ್ಕೆ ಬರುತ್ತಾರೆ. ಪಟ್ಟಣದಲ್ಲಿ ಹೊರ ರಾಜ್ಯದವರ ಜೊತೆ ಕನ್ನಡ ಭಾಷೆಯಲ್ಲೆ ವ್ಯವಹಾರ ನಡೆಸುವ ಮೂಲಕ ಕನ್ನಡ ಭಾಷೆಯನ್ನು ಉಳಿಸುವ ಕೆಲಸ ಮಾಡಲಾಗುತ್ತಿದೆ” ಎಂದರು.

“ಕನ್ನಡ ಭಾಷೆ ಕಲಿಯಲು ಬಹಳ ಸರಳವಾಗಿರುವುದರಿಂದ ಹೊರ ರಾಜ್ಯಗಳಿಂದ ಕನ್ನಡೇತರರು ಬಹಳ ಬೇಗ ಕನ್ನಡವನ್ನು ಕಲಿತು ನಮ್ಮಲ್ಲಿ ‌ಒಂದಾಗುತಿದ್ದಾರೆ. ಅಮೇರಿಕ, ಆಸ್ಟ್ರೇಲಿಯಾ, ಮತ್ತು ದುಬೈ ಸೇರಿದಂತೆ ಹಲವು ದೇಶಗಳಲ್ಲಿ ಕರ್ನಾಟಕದ ಜನತೆ ವಿದೇಶಗಳಲ್ಲಿ ‌ಕನ್ನಡದ ಸಂಘಟನೆಗಳು ಕನ್ನಡದ ಕಂಪನ್ನು ಹರಿಸಿದ್ದಾರೆ” ಎಂದು ಹೇಳಿದರು.

“ಅನೇಕ ಘಟಾನುಘಟಿ ನಾಯಕರು ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದು ಸರಕಾರಿ ಶಾಲೆಗಳಲ್ಲಿ ಉತ್ತಮವಾದ ಸೌಕರ್ಯವನ್ನು ಹೊಂದಿದ್ದು ಅತ್ತ್ಯುತ್ತಮ ಶಿಕ್ಷಕರನ್ನು ಇದ್ದು ಇದನ್ನು ವಿದ್ಯಾರ್ಥಿಗಳು ಬಳಸಿಕೊಂಡು ಒಳ್ಳೆಯ ಫಲಿತಾಂಶ ನೀಡಬೇಕು” ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಿದ್ದರಾಮಪ್ಪ ಮಾತನಾಡಿದರು. ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ರಾಮಲಿಂಗಯ್ಯ, ದೈಹಿಕ ಪರೀವಿಕ್ಷಕ ಮಲ್ಲನಾಯಕ, ಬಿ.ಆರ್.ಸಿ ಸರೋಜ, ಎಸ್ ಡಿ.ಎಂ.ಸಿ.ಅಧ್ಯಕ್ಷ. ಕುಮಾರ್, ಮೈಸೂರು ಭೂಮಾಪಕ‌ ಸಂಘದ ಅಧ್ಯಕ್ಷ ಜಯಪ್ಪ, ಬನ್ನಿತಾಳಪುರ ಗ್ರಾಮ‌ ಪಂಚಾಯತಿ ಅಧ್ಯಕ್ಷ ಮಹೇಶ್, ಉಪಾಧ್ಯಕ್ಷೆ ಲಕ್ಷ್ಮಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...