ಕರ್ನಾಟಕ ಕಾವಲು ಪಡೆಯ ವತಿಯಿಂದ ಇಂದು ಗುಂಡ್ಲುಪೇಟೆ ಪಟ್ಟಣದ ಹೊಸೂರಿನ ಮಧುರವರ ಸುಪುತ್ರಿ ಎಂ ಮೋನಿಷಾ (6ನೇ ತರಗತಿ ವಿದ್ಯಾರ್ಥಿನಿ) ಅವರು ರಾಷ್ಟ್ರೀಯ ಮಟ್ಟದ ವುಶು ಚಾಂಪಿಯನ್ಷಿಪ್ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆಗಾಗಿ ಅಭಿನಂದನೆ ಸಲ್ಲಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕಾವಲು ಪಡೆಯ ತಾಲೂಕು ಅಧ್ಯಕ್ಷ ಎ ಅಬ್ದುಲ್ ಮಾಲಿಕ್, “ಇಂತಹ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಿಗೆ ಅಗತ್ಯ ಪ್ರೋತ್ಸಾಹ ನೀಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಸಾಧಕರ ಬೆಂಬಲದಿಂದಲೇ ಸಮಾಜದಲ್ಲಿ ಕ್ರೀಡಾ ಸಂಸ್ಕೃತಿ ಬೆಳೆಯುತ್ತದೆ” ಎಂದು ಹೇಳಿದರು.
ಇದೇ ವೇಳೆ ಕನ್ನಡಪರ ಹಿರಿಯ ಹೋರಾಟಗಾರ ಬ್ರಹ್ಮಾನಂದ್ ಅವರು ವಿದ್ಯಾರ್ಥಿನಿಗೆ ಶುಭಕೋರಿದರು. ಮಾನವ ಬಂಧತ್ವ ವೇದಿಕೆ ಜಿಲ್ಲಾ ಸಂಚಾಲಕ ಮಾಡ್ರಹಳ್ಳಿ ಸುಭಾಷ್ ಅವರು ಕಾವಲು ಪಡೆಯ ಕಾರ್ಯವೈಖರಿಯನ್ನು ಶ್ಲಾಘಿಸಿದರು.
ಇದನ್ನೂ ಓದಿ: ಗುಂಡ್ಲುಪೇಟೆ | ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿ
ಕಾರ್ಯಕ್ರಮದಲ್ಲಿ ಆರ್ ಡಿ ಉಲ್ಲಾಸ್, ಶಿಕ್ಷಕ ಪ್ರಸನ್ನ, ಕಾವಲು ಪಡೆಯ ಜಿಲ್ಲಾ ಕಾರ್ಯಧ್ಯಕ್ಷ ಅಬ್ದುಲ್ ರಷೀದ್, ತಾಲೂಕು ಕಾರ್ಯದರ್ಶಿ ಎಸ್ ಮುಬಾರಕ್, ಟೌನ್ ಉಪಾಧ್ಯಕ್ಷ ಸಾದಿಕ್ ಪಾಷ, ಟೌನ್ ಗೌರವಾಧ್ಯಕ್ಷ ಶಕೀಲ್, ಟೌನ್ ಸಂಚಾಲಕ ಮುಂಟೀಪುರ ಮಾದಯ್ಯ ಸೇರಿದಂತೆ ವಿದ್ಯಾರ್ಥಿನಿಯ ಪೋಷಕರು ಹಾಗೂ ಶಿಕ್ಷಕಿಯರು ಉಪಸ್ಥಿತರಿದ್ದರು.





