ಹಾಸನ | ಚನ್ನಕೇಶವಸ್ವಾಮಿ ರಥೋತ್ಸವ: ವಿರೋಧದ ನಡುವೆಯೂ ಸೌಹಾರ್ದತೆ ಮೆರೆದ ಬೇಲೂರು

Date:

  • ಆಗಮ ಪಂಡಿತರ ವರದಿ ಅನ್ವಯ ಧಾರ್ಮಿಕ ದತ್ತಿ ಇಲಾಖೆ ಆದೇಶ
  • ಪ್ರತಿಭಟನೆ ನಡೆಸಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರು

ವಿಶ್ವವಿಖ್ಯಾತ ಬೇಲೂರು ಚನ್ನಕೇಶಸ್ವಾಮಿ ರಥೋತ್ಸವ ಮಂಗಳವಾರ ಜರುಗಿದೆ. ಈ ವೇಳೆ ಸಂಪ್ರದಾಯದಂತೆ ಮುಸ್ಲಿಂ ಸಮುದಾಯದ ಮುಖಂಡರು ಮೆಟ್ಟಿಲುಗಳ ಬಳಿ ಕುರಾನ್‌ ಪಠಿಸಿ, ವಂದನೆ ಸಲ್ಲಿಸಿದ್ದಾರೆ. ಹಿಂದುತ್ವವಾದಿಗಳ ವಿರೋಧದ ನಡುವೆಯೂ ಬೇಲೂರು ಸೌಹಾರ್ದೆಯನ್ನು ಎತ್ತಿ ಹಿಡಿದಿದೆ.

ರಥೋತ್ಸವದಲ್ಲಿ ರಥ ಎಳೆಯುವ ಮುನ್ನ ಮುಸ್ಲಿಂ ಮುಖಂಡರು ಕುರಾನ್‌ ಪಠಣ ಮಾಡಬಾರದು ಎಂದು ಆಗ್ರಹಿಸಿ ಹಿಂದುತ್ವ ಕೋಮುವಾದಿ ಸಂಘಟನೆಗಳ ನೇತೃತ್ವದಲ್ಲಿ ಕೆಲವು ದಿನಗಗಳ ಹಿಂದೆ ಪ್ರತಿಭಟನೆ ನಡೆಸಲಾಗಿತ್ತು. ಆ ಸಂದರ್ಭದಲ್ಲಿ ಮುಸ್ಲಿಂ ಯುವಕನೊಬ್ಬ ‘ಕುರಾನ್‌ ಜಿಂದಾಬಾದ್‌’ ಎಂದು ಕೂಗಿದ್ದರಿಂದ ಸ್ಥಳದಲ್ಲಿ ಅಶಾಂತಿಯ ವಾತಾವರಣ ಉಂಟಾಗಿತ್ತು. ಬಳಿಕ, ಕುರಾನ್ ಪಠಣ ಕುರಿತು ಉಂಟಾದ ಗೊಂದಲಗಳನ್ನು ಪರಿಶೀಲಿಸಲು ಧಾರ್ಮಿಕ ದತ್ತಿ ಇಲಾಖೆ ಕಚೇರಿಯ ಹಿರಿಯ ಆಗಮ ಪಂಡಿತ ವಿಜಯ್ ಕುಮಾರ್ ಮಾರ್ಚ್‌ 30ರಂದು ಬೇಲೂರು ದೇವಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಿದ್ದರು.

ವರದಿಯನ್ನು ಆಧರಿಸಿ, ಚನ್ನಕೇಶವಸ್ವಾಮಿ ರಥೋತ್ಸವದ ವೇಳೆ ರಥದ ಮುಂದೆ ಕುರಾನ್ ಪಠಣ ಮಾಡದೇ, ಸಂಪ್ರದಾಯದಂತೆ ದೇವಾಲಯದ ಮೆಟ್ಟಿಲುಗಳ ಬಳಿ ನಿಂತು ವಂದನೆ ಸಲ್ಲಿಸಲು ಧಾರ್ಮಿಕ ದತ್ತಿ ಇಲಾಖೆ ಸೋಮವಾರ ಆದೇಶ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಈ ಸುದ್ದಿ ಓದಿದ್ದೀರಾ ? ರಾಮನಗರ | ನಾನು ತಲೆಮರೆಸಿಕೊಂಡಿಲ್ಲ; ಫೇಸ್‌ಬುಕ್‌ನಲ್ಲಿ ವಿಡಿಯೋ ಹರಿಬಿಟ್ಟ ಪುನೀತ್‌ ಕೆರೆಹಳ್ಳಿ

ಅದರಂತೆಯೇ, ರಥೋತ್ಸವದ ಸಂದರ್ಭದಲ್ಲಿ ಬೇಲೂರಿನ ದೊಡ್ಡ ಮೇದೂರಿನ ಸೈಯಾದ್‌ ಸಜ್ಜಾದ್‌ ಖಾಝಿ ಮತ್ತು ಅವರ ಕುಟುಂಬ ಸದಸ್ಯರು ಚನ್ನಕೇಶವಸ್ವಾಮಿ ದೇವಾಲಯದ ಗೌರವಗಳನ್ನು ಸ್ವೀಕರಿಸಿ, ಸಂಪ್ರದಾಯ ಪದ್ಧತಿಗಳಲ್ಲಿ ಯಾವುದೇ ವ್ಯತ್ಯಾಸ ಆಗದಂತೆ ದೇವರಿಗೆ ವಂದನೆ ಸಲ್ಲಿಸಿದರು.

ಸ್ವಾತಂತ್ರ್ಯಾ ಪೂರ್ವದಿಂದಲೂ ರಥೋತ್ಸವದ ಸಂದರ್ಭದಲ್ಲಿ ರಥದ ಮುಂದೆ ಕುರಾನ್‌ ಪಠಣ ಮಾಡುವುದು ಸಂಪ್ರದಾಯವಾಗಿ ಬೆಳೆದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...