ಚನ್ನಪಟ್ಟಣ ಉಪಚುನಾವಣೆ; ಚರ್ಚೆ, ಸಂವಾದ, ಸಮೀಕ್ಷೆಗಳಿಗೆ ನಿರ್ಬಂಧ

Date:

ರಾಮನಗರ ಜಿಲ್ಲೆಯ ಚನ್ನಪಟ್ಟಣ ಉಪಚುನಾವಣೆಗೆ ನವೆಂಬರ್ 13ರಂದು ಮತದಾನ ನಡೆಯಲಿದೆ. ಇದರ ಹಿನ್ನೆಲೆಯಲ್ಲಿ ನ.11ರ ಸಂಜೆ 5.30 ರಿಂದ ನ.20ರ ಸಂಜೆ 6.30ರವರೆಗೆ ಬಹಿರಂಗ ಪ್ರಚಾರ, ಚರ್ಚೆ, ಸಂವಾದ, ಸಮೀಕ್ಷೆ ಮತ್ತು ಚುನಾವಣೆ ಸಂಬಂಧಿತ ಇತರ ಕಾರ್ಯಕ್ರಮಗಳಿಗೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.

ರಾಮನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್ ನೀಡಿದ ಮಾಹಿತಿಯ ಪ್ರಕಾರ, “ಚುನಾವಣೆಯ ಸಂದರ್ಭದಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ಯಾವುದೇ ಮಾಧ್ಯಮ, ಟಿವಿ, ಕೇಬಲ್, ರೇಡಿಯೋ, ಸಾಮಾಜಿಕ ಜಾಲತಾಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಚುನಾವಣೆ ಸಂಬಂಧಿತ ಚರ್ಚೆ, ವಿಶ್ಲೇಷಣೆ, ಮತ್ತು ಚುನಾವಣೋತ್ತರ ಸಮೀಕ್ಷೆ ಪ್ರಸಾರ ಮತ್ತು ಬಿತ್ತರವನ್ನೂ ನಿಷೇಧಿಸಲಾಗಿದೆ. ಈ ನಿಯಮ ಉಲ್ಲಂಘಿಸುವವರು ಪ್ರಜಾ ಪ್ರತಿನಿಧಿ ಕಾಯ್ದೆ-1951ರ ಕಲಂ 126ರ ಅನ್ವಯ 2 ವರ್ಷಗಳ ಶಿಕ್ಷೆ ಇಲ್ಲವೇ ದಂಡ, ಇಲ್ಲವೇ ಎರಡನ್ನೂ ಎದುರಿಸಬೇಕಾಗುತ್ತದೆ.

ಮತದಾನ ಪೂರ್ವ 48 ಗಂಟೆಗಳ ಅವಧಿಯಲ್ಲಿ ಮತ್ತು ಮತದಾನದ ದಿನದಂದು, ಯಾವುದೇ ಮಾಧ್ಯಮಗಳು ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುವಂತಹ, ಮತದಾರರ ಮೇಲೆ ಪ್ರಭಾವ ಬೀರುವ ಮಾತುಗಳನ್ನು ಪ್ರಸಾರ ಮಾಡಬಾರದು. ಯಾವುದೇ ಪಕ್ಷದ ಪರವಾಗಿ ಇಲ್ಲವೇ ವಿರೋಧವಾಗಿ ನೀಡುವ ಅಭಿಪ್ರಾಯ ಸಂಗ್ರಹಗಳ ಫಲಿತಾಂಶವನ್ನು ಪ್ರಕಟಿಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾವೇರಿ | ಹಣ ಹಂಚುತ್ತಿದ್ದುದ್ದನ್ನು ಪ್ರಶ್ನಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತರಿಂದ ಕೆಆರ್‌ಎಸ್ ಕಾರ್ಯಕರ್ತರ ಮೇಲೆ ಹಲ್ಲೆ

ಮತದಾನದ ಪೂರ್ವ 48 ಗಂಟೆ ಮತ್ತು ಮತದಾನದ ಸಮಯ ಮುಗಿದ ನಂತರದ ಅರ್ಧ ಗಂಟೆವರೆಗೂ ಅಂದರೆ ನ.20ರ ಸಂಜೆ 6.30 ಗಂಟೆಯವರೆಗೆ ಯಾವುದೇ ಸುದ್ದಿ ವಾಹಿನಿ, ಕೇಬಲ್ ಟಿವಿ ಸೇರಿದಂತೆ ಇನ್ನಿತರ ಡಿಜಿಟಲ್ ಮಾಧ್ಯಮಗಳು ಎಕ್ಸಿಟ್ ಪೋಲ್ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...