ಚನ್ನಪಟ್ಟಣ | ಕೆಪಿಎಸ್‌ ‘ಮ್ಯಾಗ್ನೆಟ್’ ಶಾಲಾ ವಿಲೀನ ಆದೇಶಕ್ಕೆ ಎಸ್‌ಐಓ ತೀವ್ರ ವಿರೋಧ

Date:

ಎಸ್‌ಐಓ(ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ) ಕರ್ನಾಟಕದ ಪ್ರತಿನಿಧಿಗಳ ತಂಡವು ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊಂಗನೂರು ಕೆಪಿಎಸ್ ಶಾಲೆ ಹಾಗೂ ಇತರೆ ಹಲವು ಶಾಲೆಗಳಿಗೆ ಭೇಟಿ ನೀಡಿ, ಕೆಪಿಎಸ್ “ಮ್ಯಾಗ್ನೆಟ್” ಶಾಲಾ ವಿಲೀನ ನೀತಿಯ ಸ್ಥಳೀಯ ಸತ್ಯಾಂಶಗಳನ್ನು ಅಧ್ಯಯನ ಮಾಡಿದ್ದು, ಅಲ್ಲಿನ ಪರಿಸ್ಥಿತಿಗಳನ್ನು ಗಮನಿಸಿದ ಬಳಿಕ ಶಾಲಾ ವಿಲೀನ ಆದೇಶಕ್ಕೆ ಎಸ್‌ಐಓ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಸ್ಥಳೀಯ ಶಿಕ್ಷಕರೊಂದಿಗೆ ಚರ್ಚೆ ನಡೆಸಿದ ನಂತರ, ಸಮೀಪದ ನೆರೆಹೊರೆಯ ಶಾಲೆಗಳನ್ನು ಮುಚ್ಚಿ ಕೆಪಿಎಸ್ ಸಂಸ್ಥೆಗಳೊಂದಿಗೆ ವಿಲೀನಗೊಳಿಸುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ ಎಂದು ಎಸ್‌ಐಓ ತಂಡ ಗಮನಿಸಿದೆ.

ಎಸ್‌ಐಓ ಪ್ರತಿನಿಧಿಗಳ ತಂಡವು, ಮಕ್ಕಳ ಹಕ್ಕುಗಳು ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ (RTE Act, 2009)ಯಡಿಯಲ್ಲಿ “ನೆರೆಹೊರೆಯ ಶಾಲೆ” ನಿಯಮ (ಕಲಂ 6) ಪ್ರಕಾರ, ಪ್ರತಿ ಮಗುವಿನ ನಿವಾಸದಿಂದ ನಡೆದು ಹೋಗಬಹುದಾದ ದೂರದಲ್ಲಿ ಸರ್ಕಾರವು ಶಾಲೆಗಳನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮನರೇಗಾ ಬದಲಿಗೆ ವಿಬಿ-ಜಿ ರಾಮ್‌ ಜಿ ಮಸೂದೆ: ಉದ್ಯೋಗ ಖಾತ್ರಿ ಯೋಜನೆಯ ಬದಲಾವಣೆಗಳೇನು?

ಸಮೀಪದ ಶಾಲೆಗಳನ್ನು ಮುಚ್ಚಿ ವಿಲೀನಗೊಳಿಸುವ ಆದೇಶವು ಈ ಕಾಯ್ದೆಯ ನೇರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದೆ. ಭೇಟಿಯ ಸಂದರ್ಭದಲ್ಲಿ, ತಂಡವು ಶಾಲಾ ಆಡಳಿತ ಮಂಡಳಿಗೆ ಎಸ್‌ಐಓ ನಡೆಸಿದ ಇತ್ತೀಚಿನ ಸಮೀಕ್ಷೆಯ ವಿವರಗಳನ್ನು ನೀಡಿತು.

WhatsApp Image 2025 12 16 at 11.31.30 AM

ಈ ಸಮೀಕ್ಷೆಯು ಸರ್ಕಾರಿ ಶಾಲೆಗಳ ಸುತ್ತಲಿನ ವಿವಿಧ ಕಳವಳಕಾರಿ ಸಮಸ್ಯೆಗಳನ್ನು ಎತ್ತಿ ತೋರಿಸಿದೆ ಎಸ್‌ಐಓ ಇದಕ್ಕೂ ಮೊದಲು ನೆರೆಹೊರೆಯ ಶಾಲೆಗಳ ಮುಚ್ಚುವಿಕೆಯನ್ನು ಖಂಡಿಸಿತ್ತಲ್ಲದೇ, ಸರ್ಕಾರವು ತಕ್ಷಣವೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದೆ.

ಎಸ್‌ಐಓ ನಿಯೋಗದಲ್ಲಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ (SIO) ಕರ್ನಾಟಕದ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಹಯಾನ್, ರಾಜ್ಯ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದೀಕ್, ರಾಜ್ಯ ಸಲಹಾ ಸಮಿತಿಯ ಸದಸ್ಯ ಮೊಹಮ್ಮದ್ ಪೀರ್ ಲಟಗೇರಿ ಉಪಸ್ಥಿತರಿದ್ದರು.

WhatsApp Image 2025 12 16 at 11.31.29 AM 1
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...