ಚನ್ನರಾಯಪಟ್ಟಣ | 15ನೇ ಹಣಕಾಸು ಅನುದಾನ ಬಿಡುಗಡೆ; ಆನೆಕೆರೆ ಗ್ರಾ.ಪಂ. ಪಿಡಿಒ ಶೇ.10ರಷ್ಟು ಲಂಚಕ್ಕೆ ಬೇಡಿಕೆ

Date:

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆ ಗ್ರಾಮ ಪಂಚಾಯಿತಿಗೆ 15ನೇ ಹಣಕಾಸು ಯೋಜನೆಯ ಅನುದಾನ ಬಿಡುಗಡೆಯಾಗಿದ್ದು, ಪಿಡಿಒ ಪ್ರತಿ ಸದಸ್ಯರ ಬಳಿ ಶೇ.10ರಷ್ಟು ಲಂಚ ಕೇಳಿರುವುದಾಗಿ ತಿಳಿದುಬಂದಿದೆ.

15ನೇ ಹಣಕಾಸು ಯೋಜನೆಯ ಹಣ ಬಿಡುಗಡೆಯಾಗಿರುವ ಹಿನ್ನೆಲೆಯಲ್ಲಿ ಆನೆಕೆರೆ ಗ್ರಾಮ ಪಂಚಾಯಿತಿ ಪಿಡಿಒ ಸದಸ್ಯರ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಬಹಿರಂಗವಾಗಿ ಪಿಡಿಒ ಅನುರಾಧಾ ಅವರು ಸದಸ್ಯರ ಬಳಿ ಕಮೀಷನ್‌ ಕೇಳುತ್ತಿರುವುದು ಕಂಡುಬಂದಿದೆ. ಪ್ರತಿ ಸದಸ್ಯರೂ ಕೂಡ ಶೇ.10ರಷ್ಟು ಲಂಚ ಕೊಡಬೇಕೆಂದು ಕೇಳಿದ್ದಾರೆ.

ಹೆಸರೇಳಲಿಚ್ಚಿಸದ ಗ್ರಾ.ಪಂ ಸದಸ್ಯರೊಬ್ಬರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಆನೆಕೆರೆ ಗ್ರಾಮ ಪಂಚಾಯಿತಿಯ ಪಿಡಿಒ ಅನುರಾಧಾ ಅವರು ತುಂಬಾ ಟಾರ್ಚರ್‌ ನೀಡುತ್ತಿದ್ದಾರೆ. ಸದಸ್ಯರ ಎಲ್ಲ ಅನುದಾನದಲ್ಲಿಯೂ ಕಮೀಷನ್‌ ಕೊಡಬೇಕೆಂದು ಪಟ್ಟು ಹಿಡಿಯುತ್ತಾರೆ. ಇದೀಗ 15ನೇ ಹಣಕಾಸಿನ ಅನುದಾನ ಬಿಡುಗಡೆಯಾಗಿದೆ. ಅದರಲ್ಲಿ ಶೇ.10ರಷ್ಟು ಕಮೀಷನ್‌ ಕೊಡಲೇಬೇಕೆಂದು ಬಹಿರಂಗವಾಗಿ ಸಭೆಯಲ್ಲೇ ಕೇಳುತ್ತಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಮೊದಲು ಎಲ್ಲರ ಬಳಿ ಶೇ.4ರಷ್ಟು ಲಂಚ ಪಡೆಯುತ್ತಿದ್ದರು. ಇದೀಗ ಶೇ.10ಕ್ಕೆ ಬೇಡಿಕೆ ಇಡುತ್ತಿದ್ದಾರೆ. ಇ-ಸ್ವತ್ತು ಮಾಡಿಕೊಡಲು ₹10,000 ಲಂಚ ಕೊಡಬೇಕು ಅಂತ ಕೇಳುತ್ತಾರೆ. ಸರ್ಕಾರಿ ಸಂಬಳ ತೆಗೆದುಕೊಳ್ಳುವ ಅವರು ಸದಸ್ಯರ ಬಳಿಯೇ ಲಂಚಬಾಕರಂತೆ ವರ್ತಿಸುತ್ತಿದ್ದರೆ ಜನಸಾಮಾನ್ಯರ ಕೆಲಸಗಳನ್ನು ಹೇಗೆ ಮಾಡಿಕೊಡುತ್ತಾರೆ” ಎಂದು ಪ್ರಶ್ನಿಸಿದ್ದಾರೆ.

ಇನ್ನೋರ್ವ ಸದಸ್ಯರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “15ನೇ ಹಣಕಾಸು ಯೋಜನೆಯ ಹಣ ಮತ್ತು ಮನರೇಗಾ ಹಣ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರಿಗೆ ಬಿಡುಗಡೆಯಾಗುವ ಪ್ರತಿ ಅನುದಾನದಲ್ಲಿ ಶೇ.10ರಷ್ಟು ಲಂಚ ಕೊಡುವಂತೆ ಪಿಡಿಒ ಅನುರಾಧಾ ಮತ್ತು ಅಧ್ಯಕ್ಷೆ ಭವ್ಯಾ ಸೇರಿಕೊಂಡು ಪೀಡಿಸುತ್ತಿದ್ದಾರೆ. ನಾವು ಮುಂದೆ ನಿಂತು ಊರಿನ ಸ್ವಚ್ಛತೆ ಕಾರ್ಯಗಳನ್ನು ಮಾಡಿಸಿದರೂ ಕೂಡ ಬಿಲ್‌ ತೆಗೆದುಕೊಳ್ಳುವಷ್ಟರಲ್ಲಿ ಹೈರಾಣುಗುತ್ತಿದ್ದೇವೆ” ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿದ್ದೀರಾ? ಅಂಗನವಾಡಿ ಸಹಾಯಕಿಯಿಂದ ಸಾಮಾಜಿಕ ನಾಯಕಿವರೆಗೆ; ಚಂದಮ್ಮರ ಸ್ಫೂರ್ತಿಯ ಪಯಣ

“ಅನುದಾನದ ಹಣವನ್ನು ಸದಸ್ಯರುಗಳಿಗೆ ನೀಡಬೇಡಿ, ಅವರು ನನಗೇ ಕೊಡಬೇಕು. ಅದನ್ನು ಕಟ್‌ ಮಾಡಿಕೊಂಡು ಕೊಡಿ, ಇಲ್ಲದಿದ್ದರೆ ನನಗೆ ಕೊಡಿ ಎಂದು ಎಂಜಿನಿಯರ್‌ಗೆ ಹೇಳುತ್ತಾರೆ. ಬಿಡುಗಡೆಯಾಗಿರುವ ಅನುದಾನವನ್ನು ಮತ್ತೆ ಪಿಡಿಒ ಅನುರಾಧ ಅವರೇ ವಾಪಸ್‌ ತೆಗೆದುಕೊಂಡಿದ್ದಾರೆ. ನಮ್ಮ ಊರುಗಳಲ್ಲಿ ₹370 ಕೂಲಿಗೆ ಯಾರೂ ಬರುವುದಿಲ್ಲ. ಜನ ಸಿಗುವುದಿಲ್ಲ, ಜಾಬ್‌ ಕಾರ್ಡ್‌ ಇರುವವರನ್ನು ಹುಡುಕಿಕೊಂಡು ಕೆಲಸ ಮಾಡಿಸಿಕೊಳ್ಳುವಷ್ಟರಲ್ಲೇ ಸಾಕಾಗಿರುತ್ತದೆ. ಅಲ್ಲದೇ ಅನುದಾನ ಪಡೆಯುವಾಗ ಇನ್ನೊಂದು ರೀತಿಯ ಸಮಸ್ಯೆ ಎದುರಿಸುವಂತಾಗಿದೆ” ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...