ಚನ್ನರಾಯಪಟ್ಟಣ | ಪುರಸಭೆ ಪರಿಶೀಲನಾ ಸಭೆ; ಸಭಾಂಗಣಕ್ಕೆ ಬೀಗ ಜಡಿದು ಸಂಸದರಿಗೆ ಅಡ್ಡಿಪಡಿಸಿದ ಪುರಸಭಾ ಅಧ್ಯಕ್ಷ

Date:

ಹಾಸನ ಸಂಸದ ಶ್ರೇಯಸ್ ಎಂ ಪಟೇಲ್ ಚನ್ನರಾಯಪಟ್ಟಣ ಪುರಸಭೆ ಪರಿಶೀಲನಾ ಸಭೆ ನಡೆಸಲು ಮುಂದಾದ ಸಂದರ್ಭದಲ್ಲಿ ಪುರಸಭೆಯ ಸಭಾಂಗಣದಲ್ಲಿ ಸಭೆ ಮಾಡಬಾರದೆಂದು ಪುರಸಭಾ ಅಧ್ಯಕ್ಷ ಮೋಹನ್ ಸೇರಿದಂತೆ ಕೆಲ ಸದಸ್ಯರು ಸಭಾಂಗಣಕ್ಕೆ ಬೀಗ ಹಾಕಿ ಸಂಸದರಿಗೆ ಅಪಮಾನ ಎಸಗಿದ ಪ್ರಸಂಗ ನಡೆದಿದೆ.

ಕೇಂದ್ರ ಸರ್ಕಾರದಿಂದ ಪುರಸಭೆಗೆ ವಿವಿಧ ಯೋಜನೆ ಅಡಿಯಲ್ಲಿ ಹಣ ಬಿಡುಗಡೆಯಾಗಿದ್ದು, ಈ ಹಣವನ್ನು ಯಾವ ರೂಪದಲ್ಲಿ ವ್ಯಯ ಮಾಡಲಾಗಿದೆ ಎಂಬ ಮೂಲ ಉದ್ದೇಶವನ್ನು ಇಟ್ಟುಕೊಂಡು ಲೋಕಸಭಾ ಸದಸ್ಯರು ಬುಧವಾರ ಪುರಸಭೆಗೆ ಭೇಟಿ ನೀಡುತ್ತೇನೆಂದು ಪುರಸಭಾ ಅಧಿಕಾರಿಗೆ ತಿಳಿಸಿದ್ದರು ಎನ್ನಲಾಗಿದೆ.

ಇದರಂತೆ ಪುರಸಭೆಗೆ ಲೋಕಸಭಾ ಸದಸ್ಯ ಶ್ರೇಯಸ್ ಪಟೇಲ್ ಅವರು ಭೇಟಿ ನೀಡಿ ಪುರಸಭಾ ಸಭಾಂಗಣದಲ್ಲಿ ಸಭೆ ಮಾಡಲು ಮುಂದಾದಾಗ ಪುರಸಭಾ ಅಧ್ಯಕ್ಷ ಮೋಹನ್ ಅವರು ಪುರಸಭೆಯ ಸಭಾಣಕ್ಕೆ ಬೇಗ ಹಾಕಿ ತಾವೇ ಬೀಗದ ಕೀ ಇಟ್ಟುಕೊಂಡಿದ್ದರು. ಇದನ್ನು ವಿರೋಧಿಸಿದ ಪುರಸಭಾ ನಾಮನಿರ್ದೇಶಕ ಸದಸ್ಯರು ಮತ್ತು ಕಾಂಗ್ರೆಸ್ ಕಾರ್ಯಕರ್ತರು, “ನಿತ್ಯವೂ ಪುರಸಭೆಯ ಸಭಾಂಗಣವು ತೆರೆದಿರುತ್ತಿತ್ತು. ಇಂದು ಲೋಕಸಭಾ ಸದಸ್ಯರು ಪುರಸಭೆಗೆ ಪ್ರಗತಿ ಪರಿಶೀಲನಾ ಸಭೆ ಮಾಡಲು ಆಗಮಿಸುತ್ತಿರುವುದನ್ನು ಖಂಡಿಸಿ ಪುರಸಭೆಯ ಅಧಿಕಾರಿಗಳು ಮತ್ತು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಸೇರಿಕೊಂಡು ಬೀಗ ಹಾಕಿರುವುದು ಸರಿಯಲ್ಲ”ವೆಂದು ಬೀಗವನ್ನು ಮುರಿಯಲು ಮುಂದಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಹಾಡಹಗಲೇ 3 ಕೆಜಿ ಚಿನ್ನಾಭರಣ ದರೋಡೆ: ಮಾಲೀಕನಿಗೆ ಗನ್ ತೋರಿಸಿ ಆರೋಪಿಗಳು ಪರಾರಿ

ಪುರಸಭೆಯ ಸಭಾಂಗಣದ ಬೀಗವನ್ನು ತೆರೆದು ಸಭೆ ಮಾಡಲು ಮುಂದಾದಾಗ ನಾಮ ನಿರ್ದೇಶಕ ಸದಸ್ಯರು ಮತ್ತು ಕಾಂಗ್ರೆಸ್ ಪುರಸಭಾ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ಅಧ್ಯಕ್ಷರು, ಪುರಸಭೆಯ ಮುಖ್ಯಾಧಿಕಾರಿಗಳು ಒಬ್ಬರಿಗೊಬ್ಬರು ಕೈ ಕೈ ಮಿಲಾಯಿಸುವ ಪರಿಸ್ಥಿತಿ ನಿರ್ಮಾಣವಾಯಿತು. ನಂತರ ಲೋಕಸಭಾ ಸದಸ್ಯರು ಕಾರ್ಯಕರ್ತರು ಮತ್ತು ನಾಮ ನಿರ್ದೇಶಕ ಸದಸ್ಯರನ್ನು ಮನವೊಲಿಸಿ ಎಲ್ಲರನ್ನೂ ಸಭಾಂಗಣದಿಂದ ಹೊರ ತೆರಳುವಂತೆ ತಿಳಿಸಿ ಸಭೆಯನ್ನು ಆರಂಭಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...