ಹಾಸನ | ಶ್ರವಣಬೆಳಗೊಳ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇನ್ನಿಲ್ಲ

Date:

  • ಆರೋಗ್ಯದಲ್ಲಿ ದಿಢೀರ್ ಏರುಪೇರು ಆಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು
  • 1970ರಲ್ಲಿ ಶ್ರವಣಬೆಳಗೊಳ ಜೈನ ಮಠದ ಪೀಠವೇರಿದ್ದ ಶ್ರೀಗಳು

ಹಾಸನ ಜಿಲ್ಲೆಯ ಐತಿಹಾಸಿಕ ಶ್ರವಣಬೆಳಗೊಳದ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು (ಮಾ.23) ಮುಂಜಾನೆ ಮಂಡ್ಯ ಜಿಲ್ಲೆಯ ಬೆಳ್ಳೂರು ಕ್ರಾಸ್‌ನ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಳೆದ ಕೆಲವು ತಿಂಗಳಿಂದ ಸ್ವಾಮೀಜಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಗುರುವಾರ ಮುಂಜಾನೆ ಆರೋಗ್ಯ ಸ್ಥಿತಿಯಲ್ಲಿ ದಿಢೀರ್ ಏರು ಪೇರು ಆಗಿದ್ದು, ಕೂಡಲೆ ಶ್ರವಣಬೆಳಗೊಳದ ಜೈನ ಮಠಕ್ಕೆ ವೈದ್ಯರು ಆಗಮಿಸಿ ಪರೀಕ್ಷೆ ನಡೆಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವ ಕಾರಣಕ್ಕೆ ಆದಿಚುಂಚನಗಿರಿ ಆಸ್ಪತ್ರೆಗೆ ಸ್ವಾಮೀಜಿಯವರನ್ನು ಸ್ಥಳಾಂತರ ಮಾಡಲಾಗಿತ್ತು. ಇದೀಗ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ 1949ರ ಮೇ 3 ರಂದು ಜನಿಸಿದ್ದರು. ಮೂಲತಃ ಕಾರ್ಕಳದ ವರಂಗ ಗ್ರಾಮದವರು. 1970ರಲ್ಲಿ ಜೈನ ಮಠದ ಪೀಠವೇರಿದ್ದ ಶ್ರೀಗಳು, ಇತಿಹಾಸ ತಜ್ಞ, ತತ್ವಜ್ಞಾನಿ, ಇತಿಹಾಸ, ಕನ್ನಡ, ಸಂಸ್ಕೃತ ದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಪ್ರಾಕೃತ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1981ರ ಮಹಾಮಸ್ತಕಾಭಿಷೇಕ ಯಶಸ್ವಿಯಾಗಿ ನೆರವೇರಿಸಿದ್ದಕ್ಕೆ ಅಂದಿನ ಪ್ರಧಾನಿ ಇಂದಿರಾಗಾಂಧಿ ಅವರು ಇವರಿಗೆ ಕರ್ಮಯೋಗಿ ಎಂದು ಬಿರುದು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ವಸ್ಥಿಶ್ರೀ ಚಾರುಕೀರ್ತಿ ಎನ್ನುವ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿಗಳು ಕರ್ನಾಟಕದಲ್ಲಿ ಇದ್ದಾರೆ. ಮೂಲತಃ ಶ್ರವಣಬೆಳಗೊಳದ ಜೈನ ಮಠದ ಸ್ವಾಮೀಜಿಗಳಿಗೆ 13ನೆ ಶತಮಾನದಲ್ಲಿ (1118-19)ಹೊಯ್ಸಳ ದೊರೆ ಬಲ್ಲಾಳರಾಯನು ನೀಡಿದ ಬಿರುದು “ಚಾರುಕೀರ್ತಿ” ಆಗಿನಿಂದ ಆ ಪೀಠದ ಸ್ವಾಮೀಜಿಗಳಿಗೆ ಸ್ವಸ್ಥಿ ಶ್ರೀಚಾರುಕೀರ್ತಿ ಎಂದೆ ಕರೆಯಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...