ಮಹಿಳೆ, ಶೂದ್ರರನ್ನು ಶಿಕ್ಷಣದಿಂದ ದೂರವಿರಿಸಿದ್ದ ಚಾತುರ್ವರ್ಣ ವ್ಯವಸ್ಥೆ : ಸಿಎಂ ಸಿದ್ದರಾಮಯ್ಯ

Date:

  • ವಚನ ಪಿತಾಮಹ ಫ.ಗು.ಹಳಕಟ್ಟಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ
  • ಶೂದ್ರರಿಗೆ ಶಿಕ್ಷಣ ಭಾಗ್ಯವನ್ನು ಕಲ್ಪಿಸಿ ಕ್ರಾಂತಿ ಮಾಡಿದವರು ವಚನಕಾರರು : ಸಿಎಂ

ಚಾತುರ್ವರ್ಣ ವ್ಯವಸ್ಥೆಯ ಕಾರಣಕ್ಕೆ ಶಿಕ್ಷಣದಿಂದ ವಂಚಿತರಾಗಿದ್ದ ಮಹಿಳೆಯರು ಮತ್ತು‌ ಶೂದ್ರರಿಗೆ ಶಿಕ್ಷಣ ಭಾಗ್ಯವನ್ನು ಕಲ್ಪಿಸಿ ಕ್ರಾಂತಿ ಮಾಡಿದವರು ವಚನಕಾರರು ಮತ್ತು ಬಸವಣ್ಣನವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಟೌನ್ ಹಾಲ್‌ನಲ್ಲಿ ಫ.ಗು.ಹಳಕಟ್ಟಿ ಫೌಂಡೇಶನ್ ಹಮ್ಮಿಕೊಂಡಿದ್ದ ‘ವಚನ ಪಿತಾಮಹ ಫ.ಗು.ಹಳಕಟ್ಟಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ’ದಲ್ಲಿ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.

ಅತ್ಯಂತ ಕೆಳ ಜಾತಿಯಲ್ಲಿ ಜನಿಸಿ ಅತ್ಯುನ್ನತ ಎತ್ತರಕ್ಕೆ ಏರಿದ ಅಲ್ಲಮಪ್ರಭುರನ್ನು ಅನುಭವ ಮಂಟಪದ ಮುಖ್ಯಸ್ಥರನ್ನಾಗಿಸಿದ್ದು ಬಸವಣ್ಣನವರು. ಈ ಅನುಭವ ಮಂಟಪದ ಆಶಯವನ್ನು, ವಚನಗಳ ಮಹತ್ವವನ್ನು ಮುಂದಿನ ತಲೆಮಾರುಗಳಿಗೆ ದಾಟಿಸಿದವರಲ್ಲಿ ಫ.ಗು.ಹಳಕಟ್ಟಿಯವರು ಪ್ರಮುಖರು ಎಂದು ಸಿಎಂ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಾತುರ್ವರ್ಣ ವ್ಯವಸ್ಥೆ ಕಾರಣಕ್ಕೆ ಶಿಕ್ಷಣದಿಂದ, ಸಂಪತ್ತಿನಿಂದ ಶೂದ್ರ ಸಮುದಾಯ ವಂಚಿತವಾಗಿತ್ತು. ಅದಕ್ಕೇ ಕಾಯಕ ಮತ್ತು ದಾಸೋಹ ಸಂಸ್ಕಾರದ ಮೂಲಕ ಸರ್ವರಿಗೂ ಶಿಕ್ಷಣ ಮತ್ತು ಅವಕಾಶಗಳಲ್ಲಿ ಸಮಪಾಲು ಸಿಗುವಂತೆ ಮಾಡಿದ್ದು ಬಸವಣ್ಣನವರು. ಮುಖ್ಯಮಂತ್ರಿ ಆಗಿ ಇದೇ ಕಾಯಕ ಮತ್ತು ದಾಸೋಹ ಸಂಸ್ಕೃತಿಯನ್ನು ಪಾಲಿಸುತ್ತಿದ್ದೇನೆ ಎಂದರು.

ಪ್ರಶಸ್ತಿ ಪುರಸ್ಕೃತರಾದ ವಚನ ಕ್ಷೇತ್ರದಲ್ಲಿ ಮಹತ್ವದ ಮೌಲ್ಯಯುತ ಸಾಹಿತ್ಯಿಕ ಕೆಲಸ ಮಾಡಿರುವ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಶಿಕ್ಷಣ ತಜ್ಞ ಡಾ.ವಿ.ಪಿ.ನಿರಂಜನಾರಾಧ್ಯ, ಸಮಾಜ ಸೇವಕಿ ಶ್ರೀಮತಿ ಎಸ್.ಜಿ.ಸುಶೀಲಮ್ಮ ಅವರನ್ನು ಸನ್ಮಾನಿಸಲಾಯಿತು.

ಬೇಲಿಮಠದ ಶ್ರೀಶ್ರೀ ಶಿವರುದ್ರ ಮಹಾಸ್ವಾಮಿಗಳ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಹಿಸಿದ್ದರು. ಶ್ರೀಮತಿ ಶೀಲಾ ಹಳಕಟ್ಟಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಪವಿತ್ರ ಹಳಕಟ್ಟಿ ಸೇರಿ ಹಲವು ಗಣ್ಯರು ವೇದಿಕೆಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...