ಚೆನ್ನೈ-ಬೆಂಗಳೂರು-ಮೈಸೂರು ಬುಲೆಟ್ ರೈಲು; ಭೂಮಿ ಕಳೆದುಕೊಳ್ಳುವ ಆತಂಕದಲ್ಲಿ ರೈತರು

Date:

ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಬುಲೆಟ್‌ ರೈಲು ಓಡಿಸುವ ಯೋಜನೆ ಹಲವಾರು ರೈತರನ್ನು ಕಂಗಾಲಾಗಿಸಿದೆ. ಕೃಷಿ, ತೋಟಗಾರಿಕೆ ಮತ್ತು ಹೈನುಗಾರಿಕೆಯನ್ನು ಅವಲಂಬಿಸಿರುವ ರಾಮನಗರ ಜಿಲ್ಲೆಯ ರೈತರು, ತಮ್ಮ ಫಲವತ್ತಾದ ಕೃಷಿ ಭೂಮಿಯನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.

ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸಲು ರಾಷ್ಟ್ರೀಯ ಹೈಸ್ಪೀಡ್ ರೈಲು ನಿಗಮ ನಿಯಮಿತ (ಎನ್‌ಎಚ್‌ಎಸ್‌ಆರ್‌ಸಿಎಲ್) ಮುಂದಾಗಿದೆ. ಅದಕ್ಕಾಗಿ, ರಾಮನಗರ ಜಿಲ್ಲೆಯಲ್ಲಿ ಭೂಸ್ವಾಧೀನ ಮಾಡಿಕೊಳ್ಳಬೇಕಾದ 28 ಗ್ರಾಮಗಳ ಕಂದಾಯ ನಕ್ಷೆಗಳನ್ನು ನೀಡುವಂತೆ ಜಿಲ್ಲಾಧಿಕಾರಿಗೆ ಎನ್‌ಎಚ್‌ಎಸ್‌ಆರ್‌ಸಿಎಲ್ ಮನವಿ ಸಲ್ಲಿಸಿದೆ. ನಕ್ಷೆ ರಚಿಸಲು ಜಿಲ್ಲಾಡಳಿತ ಮುಂದಾಗಿದೆ.

ಯೋಜನೆಯ ಸಲಹಾ ಸೇವೆಗಳನ್ನು ಖಾಸಗಿ ಏಜೆನ್ಸಿಗಳಿಗೆ ಹಸ್ತಾಂತರಿಸಲಾಗಿದೆ. ಈ ಏಜೆನ್ಸಿಗಳಿಗೆ ಜಿಲ್ಲಾಧಿಕಾರಿ ಅಗತ್ಯ ನೆರವು ನೀಡಬೇಕು ಎಂದು ಎನ್‌ಎಚ್‌ಎಸ್‌ಆರ್‌ಸಿಎಲ್ ಕೋರಿದೆ. ಅದಕ್ಕಾಗಿ, ಕಾರಿಡಾರ್‌ಗೆ ಸ್ವಾಧೀನಪಡಿಸಿಕೊಳ್ಳಬೇಕಾದ ಜಮೀನುಗಳ ಸರ್ವೆ ನಂಬರ್‌ಗಳು, ಜಮೀನಿನ ವಿಸ್ತೀರ್ಣ ಮತ್ತು ಆ ಜಮೀನುಗಳ ಮಾಲೀಕರ ವಿವರಗಳನ್ನು ಸಂಗ್ರಹಿಸಿ, ಜಿಲ್ಲಾಡಳಿತವು ಗ್ರಾಮ ಪಂಚಾಯಿತಿಗಳಿಗೆ ಪತ್ರ ಬರೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯೋಜನೆಯಲ್ಲಿ ತೊಡಗಿರುವ ಸಿಬ್ಬಂದಿ ಗ್ರಾಮಗಳಿಗೆ ಭೇಟಿ ನೀಡಿ ರೈತರ ಆಧಾರ್ ಕಾರ್ಡ್ ಸಂಗ್ರಹಿಸುತ್ತಿದ್ದಾರೆ. ಯೋಜನಾ ತಂಡವು ಗ್ರಾಮಸ್ಥರಿಗೆ ತಮ್ಮ ಜಮೀನಿನ ಮೂಲಕ ರೈಲು ಮಾರ್ಗ ಹಾದು ಹೋಗಬಹುದು ಎಂದು ತಿಳಿಸುತ್ತಿದೆ. ಡಿಪಿಆರ್ ಸಿದ್ಧಪಡಿಸಿದ ಬಳಿಕ ಭೂಸ್ವಾಧೀನಕ್ಕೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

”ನಮ್ಮ ಹಳ್ಳಿಗಳಲ್ಲಿ ಪ್ರಸ್ತಾವಿತ ಮಾರ್ಗವಿದೆ ಎಂಬುದನ್ನು ನಾವು ಗಮನಿಸಿದ್ದೇವೆ. ಜಮೀನಿಗೆ ಪರಿಹಾರ ಸಿಗುತ್ತದೆ. ಆದರೆ, ನಮ್ಮ ಮುಖ್ಯ ಜೀವನಾಧಾರವಾದ ಕೃಷಿಯೇ ಇಲ್ಲವಾದರೆ ಏನು ಮಾಡುವುದು” ಎಂದು ಚನ್ನಪಟ್ಟಣ ತಾಲೂಕಿನ ಕೂಡ್ಲೂರು ಗ್ರಾಮದ ನಿವಾಸಿಯೊಬ್ಬರು ಹೇಳಿದ್ದಾರೆ.

“ತೆಂಗು, ಹಿಪ್ಪುನೇರಳೆ, ಬಾಳೆ, ಭತ್ತ, ರಾಗಿ, ಮಾವು ಸೇರಿದಂತೆ ನೂರಾರು ಎಕರೆ ಕೃಷಿ ಭೂಮಿ ರೈತರ ಕೈತಪ್ಪಲಿದೆ. ಕೃಷಿಯನ್ನೇ ಆಧರಿಸಿದ್ದ ರೈತರು, ಪರಿಹಾರ ಪಡೆದು, ಏನು ಮಾಡಲು ಸಾಧ್ಯ” ಎಂದು ಅವರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮೋದಿ ಸರ್ಕಾರದ ವಿರುದ್ಧ ಮಾತಾಡಿದ್ರೆ ಟ್ವಿಟರ್ ಖಾತೆ ಬ್ಲಾಕ್

“ಕೆರೆ ತುಂಬಿಸುವ ಯೋಜನೆಯಿಂದ ಅಂತರ್ಜಲ ಮಟ್ಟ ಹೆಚ್ಚಿದೆ. ಗ್ರಾಮಸ್ಥರು ಕೃಷಿ, ತೋಟಗಾರಿಕೆ ಮತ್ತು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಉತ್ತಮ ಜೀವನ ನಡೆಸುತ್ತಿದ್ದಾರೆ. ಹೆಚ್ಚಿನ ಭೂಮಿ ಹೊಂದಿರುವವರಿಗೆ ಒಂದೆಡೆ ಭೂಮಿ ಹೋದರೂ, ಮತ್ತೊಂದೆಡೆ ಭೂಮಿ ಇರುತ್ತದೆ. ಆದರೆ, ತುಂಡು ಭೂಮಿ ಹೊಂದಿರುವವರು ತೀವ್ರ ತೊಂದರೆಗೆ ಸಿಲುಕುತ್ತಾರೆ. ಅವರು ಏನು ಮಾಡಬೇಕು. ಎಲ್ಲಿಗೆ ಹೋಗಬೇಕು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಮನಗರ ಜಿಲ್ಲೆಯ ತಾಳಕುಪ್ಪೆ, ಕೆ.ಜಿ.ಭೀಮನಹಳ್ಳಿ, ಬೆಳಕೆಂಪನಹಳ್ಳಿ, ಬಾನಂದೂರು, ಬಾದಾಡಿ, ಕೆಂಚನಕುಪ್ಪೆ, ಕಲ್ಲುಗೋಪನಹಳ್ಳಿ, ಕೆಂಪನಹಳ್ಳಿ, ಮಾಯಗೊಂಡನಹಳ್ಳಿ, ಕೇತೋಹಳ್ಳಿ, ಬಸವನಪುರ, ಕೊತ್ತೀಪುರ, ಶಿಡ್ಕಲ್ಲು, ಅಚ್ಚಲು, ಅಚ್ಚಲು ರಾಜ್ಯ ಅರಣ್ಯ, ವಿಭೂತಿಕೆರೆ, ಬ್ರಹ್ಮನಮ್ಮನಹಳ್ಳಿ, ಹೊಮ್ಮನಹಳ್ಳಿ, ಹೊಮ್ಮನಹಳ್ಳಿ, ತಿಮ್ಮನಹಳ್ಳಿ, ಬ್ರಹ್ಮನಹಳ್ಳಿ, ತಿ. ಕೂಡ್ಲೂರು, ಹೊಟ್ಟಿಗಾನಹೊಸಹಳ್ಳಿ, ಚಕ್ಕೆರೆ, ಕುರಣಗೆರೆ, ಚಕ್ಕಲೂರು ಮತ್ತು ಕುಕ್ಕೂರು ಗ್ರಾಮಗಳ ಮೂಲಕ ರೈಲು ಮಾರ್ಗ ಹಾದುಹೋಗಲಿದೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...