ಉಡುಪಿ | ಮಹಿಷಾಸುರ ನಾಡಿನ ಮೂಲನಿವಾಸಿಗಳ ಅಸ್ಮಿತೆ : ನಟ ಚೇತನ್

Date:

ಮಹಿಷಾಸುರ ಚಾತುರ್ವರ್ಣ ಧರ್ಮಕ್ಕೆ ಸೇರಿದವನಲ್ಲ. ಮಹಿಷ ಮತ್ತು ಚಾಮುಂಡಿ ಮುಖಾಮುಖಿಯಾಗಿಲ್ಲ. ಭೌಗೋಳಿಕವಾಗಿ ಮಹಿಷಾಸುರ ಬೌದ್ಧ ಧರ್ಮ ಪ್ರಚಾರಕ ಮತ್ತು ಅಸ್ಮಿತೆಯಾಗಿ ನಮ್ಮ ನಡುವೆ ಕಂಗೊಳಿಸುವ ಇತಿಹಾಸ ಪುರುಷರಾಗಿದ್ದಾರೆ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.

ಅವರು ಇಂದು ಮಲ್ಪೆ ಸರಸ್ವತಿ ಬಯಲು ರಂಗಮಂದಿರದಲ್ಲಿ ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆ ಆಯೋಜಿಸಿದ ಮಹಿಷಾಸುರನಿಗೆ ಪುಷ್ಪಾರ್ಚನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಹಿಂದೂ ಪುರಾಣಗಳಲ್ಲಿ
ಅವಾಸ್ತವಿಕ, ಅಮಾನವೀಯ ಮತ್ತು ಅವೈಜ್ಞಾನಿಕ ಸಂಗತಿಗಳನ್ನು ಮಂಡಿಸಿ ವೈದಿಕಶಾಹಿ ಮೂಲನಿವಾಸಿಗಳ ಸ್ವಾತಂತ್ಯ, ಸಮಾನತೆ, ಭ್ರಾತೃತ್ವ ಮತ್ತು ಸಾರ್ವಭೌಮತ್ವಗಳನ್ನು ಕಸಿದುಕೊಂಡಿದ್ದಾರೆ ಎಂದು ಆರೋಪಿಸಿದ ಅವರು, ಭಾರತದಲ್ಲಿ
ಮನುವಾದಿಗಳು ಪುರಾಣ ಮತ್ತು ಮಹಾಕಾವ್ಯಗಳನ್ನೇ ಇತಿಹಾಸವೆಂದು ಬಣ್ಣಿಸಿ ಇಲ್ಲಿನ ಮೂಲನಿವಾಸಿಗಳನ್ನು ದಾರಿತಪ್ಪಿಸಿದ್ದಾರೆ ಎಂದರು.

WhatsApp Image 2025 09 21 at 1.25.10 AM 1

ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಮಾತನಾಡಿ, ಬಲಿ ಚಕ್ರವರ್ತಿ, ರಾವಣ, ನರಕಾಸುರ, ಮಹಿಷಾಸುರ ಮುಂತಾದ ಮಹಾರಾಜರನ್ನು ಹೇಯವಾಗಿ ಚಿತ್ರಿಸುವ ಮೂಲಕ ಬೌದ್ಧ ಧರ್ಮವನ್ನು ನಾಶಮಾಡುವ ಪಿತೂರಿಯನ್ನು ಮನುವಾದಿಗಳು ಮಾಡಿದ್ದಾರೆ.ಎಂದ ಅವರು ಮಹಿಷಾಸುರ ಎಂದರೆ ಪ್ರಾಣವನ್ನು ರಕ್ಷಿಸುವ ಮಹಾರಕ್ಷಕ ಮತ್ತು ಮಹಿಷ ಮಂಡಲವನ್ನು ಕಟ್ಟಿ ಬೆಳೆಸಿದ ದೊರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಬೇಡ್ಕರ್ ಯುವಸೇನೆಯ ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ ಮಾತನಾಡಿ, ಮಹಿಷಾಸುರನ ಸ್ಮರಣೆ ಯಾವುದೇ ಧರ್ಮ ಅಥವಾ ಸರಕಾರದ ವಿರುದ್ಧವಲ್ಲ. ಇದು ಪುರಾಣ, ಮೌಢ್ಯ ಮತ್ತು ಅವೈಜ್ಞಾನಿಕ ಸಂಪ್ರದಾಯಗಳ ವಿರುದ್ಧ
ಮೂಲನಿವಾಸಿಗಳು ಆಚರಿಸುವ ಹಬ್ಬ. ಭಾರತೀಯ ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ಯದ ಹಕ್ಕು ಎಂದರು. ‌

ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಯುವಸೇನೆಯ ಮುಖಂಡರುಗಳಾದ ಹರೀಶ್ ಸಲ್ಯಾನ್, ದಯಾಕರ್ ಮಲ್ಪೆ,ಅರುಣ್ ಸಾಲ್ಯಾನ್,ಭಗವಾನ್ ಮಲ್ಪೆ, ಪ್ರಶಾಂತ್‌ಬಿ,ಎನ್, ರವಿರಾಜ್ ಲಕ್ಷಿö್ಮನಗರ,ನವೀನ್ ಬನ್ನಂಜೆ, ಶಶಿಕಾಂತ್ ನೇಜಾರು, ಸಾಧು ಚಿಟ್ಪಾಡಿ, ವಿನಯ ಕೊಡಕೂರು, ರಾಜೇಶ್ ಮಲ್ಪೆ , ಅಶೋಕ್ ನಿಟ್ಟೂರು, ಸುಕೇಶ್ ಪುತ್ತೂರು, ರಾಜೇಶ್ ಸಂತೆಕಟ್ಟೆ, ಜೀವನ್ ಕೊಡವೂರು, ವಿಘ್ನೇಶ್ ಉಡುಪಿ, ಸುಶೀಲ್ ಕೊಡವೂರು, ಶ್ರವಣ್ ಸಂತೆಕಟ್ಟೆ, ಉಡುಪಿ ನಗರಸಭಾ ಸದಸ್ಯ,ಯಾದವ ಕೊಳ, ಸಂಧ್ಯಾ ತಿಲಕ್‌ರಾಜ್, ಪೂರ್ಣಿಮಾ, ವಿನೋದ್, ಪ್ರಮೀಳ, ಸುಜಾತ, ಚಿತ್ರಾಕ್ಷಿ ತೊಟ್ಟಂ, ಶ್ರೀಮತಿ ಜಾನಕಿ ನೆರ್ಗಿ ಮುಂತಾದವರು ಭಾಗವಹಿಸಿದ್ದರು. ಸತೀಶ್ ಕಪ್ಪೆಟ್ಟು ಸ್ವಾಗತಿಸಿ, ಗುಣವಂತ ತೊಟ್ಟಂ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...