ಚಿಕ್ಕಬಳ್ಳಾಪುರ | ಶಾಶ್ವತ ನೀರಾವರಿ ಯೋಜನೆಗಾಗಿ ಪ್ರಧಾನಿ ಭೇಟಿ : ಶಾಸಕ ಸಮೃದ್ಧಿ ಮಂಜುನಾಥ್‌ ವಾಗ್ದಾನ

Date:

“ಬರಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ತರುವ ಕುರಿತು ಪ್ರಧಾನಿ ಮೋದಿ ಭೇಟಿಗೆ ದಿನಾಂಕ ಕೇಳಿದ್ದೇವೆ. ನಮ್ಮ ಜಿಲ್ಲೆಗಳಿಗೆ ಖಂಡಿತವಾಗಿಯೂ ಶಾಶ್ವತ ನೀರಾವರಿ ಯೋಜನೆ ತಂದೇ ತರುತ್ತೇವೆ” ಎಂದು ಕೋಲಾರ ಜಿಲ್ಲೆಯ ಮುಳುಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್‌ ವಾಗ್ದಾನ ಮಾಡಿದರು.

ಚಿಕ್ಕಬಳ್ಳಾಪುರ ನಗರದ ಪತ್ರಿಕಾ ಭವನದಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ನೇತೃತ್ವದಲ್ಲಿ ಶನಿವಾರ ಆಯೋಜಿಸಿದ್ದ ಮೂರು ಜಿಲ್ಲೆಗಳ ದುಂಡು ಮೇಜಿನ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಬಯಲುಸೀಮೆ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಶಾಶ್ವತ ನೀರಾವರಿಗಾಗಿ ಸಾಕಷ್ಟು ಹೋರಾಟಗಳು, ಚಳುವಳಿಗಳು ನಡೆದರೂ ಯಾವುದೇ ಪ್ರಯೋಜನವಾಗಿಲ್ಲ. ಇದು ನಮ್ಮೆಲ್ಲರ ದೌರ್ಭಾಗ್ಯ. ಆದರೆ, ಈ ಬಾರಿ ಖಂಡಿತವಾಗಿಯೂ ಜನರು ನನಗೆ ಕೊಟ್ಟಿರುವ ಸಾಂವಿಧಾನಿಕ ಹಕ್ಕನ್ನು ಅಧಿವೇಶನದಲ್ಲಿ ಚಲಾಯಿಸುತ್ತೇನೆ” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಬಾರಿ ಅಧಿವೇಶನದಲ್ಲಿ ಈ ಕುರಿತು ಧ್ವನಿ ಎತ್ತಿದಾಗ ನಮ್ಮ ಜಿಲ್ಲೆಯವರೇ ನನಗೆ ಅಡ್ಡಿ ಮಾಡಿದರು. ಈ ಬಾರಿ ಖಂಡಿತವಾಗಿಯೂ ಹಿಡಿದ ಕೆಲಸವನ್ನು ಕೈಬಿಡದೆ ಮಾಡುತ್ತೇನೆ ಎಂದರು.

“ಪ್ರಸ್ತುತ ಎಲ್ಲವೂ ಚೆನ್ನಾಗಿದೆ. ಆದರೆ, 8-10 ವರ್ಷಗಳು ಕಳೆದರೆ ನಮ್ಮ ಜಿಲ್ಲೆಗಳ ತರಕಾರಿ, ಹಣ್ಣುಗಳನ್ನು ಕೊಳ್ಳಲು ಯಾರೂ ಮುಂದೆ ಬರದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಇದಕ್ಕೆ ನಮ್ಮವರೇ ಸಾಥ್‌ ಕೊಡುತ್ತಿಲ್ಲ. ಕೆಲವರಿಗೆ ಪ್ರಚಾರದ ಹುಚ್ಚು. ಅದಕ್ಕೆ ಈ ರೀತಿ ವರ್ತಿಸುತ್ತಿದ್ದಾರೆ. ಜನಪ್ರತಿನಿಧಿಗಳು ಪ್ರಚಾರದ ಗೀಳನ್ನು ಬಿಟ್ಟು ಜನಪರ ಕೆಲಸಗಳಿಗೆ ಆದ್ಯತೆ ಕೊಡಬೇಕು” ಎಂದು ಮಾರ್ಮಿಕವಾಗಿ ನುಡಿದರು.

ಶಾಶ್ವತ ನೀರಾವರಿ 1

“ರೈತರೊಂದಿಗೆ ಪ್ರಧಾನಿಯವರ ಬಳಿ ಹೋಗಿ ನಮ್ಮ ಬೇಡಿಕೆಯನ್ನು ಮುಂದಿಡೋಣ. ನಾನೇ ಇದರ ನೇತೃತ್ವ ವಹಿಸಿಕೊಳ್ಳುತ್ತೇನೆ. ಇದು ಪ್ರಚಾರಕ್ಕಾಗಿ ಅಲ್ಲ. ರೈತರ ಕಣ್ಣೀರು ಒರೆಸುವ ದೃಷ್ಟಿಯಲ್ಲಿ ವಿಧಾನಸೌಧದಲ್ಲೂ ಗಟ್ಟಿ ಧ್ವನಿ ಎತ್ತುತ್ತೇನೆ. ಸದಾ ಜಿಲ್ಲೆಯ ರೈತರೊಂದಿಗೆ ನಾನಿರುತ್ತೇನೆ” ಎಂದು ಮುಳುಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್‌ ಭರವಸೆ ನೀಡಿದರು.

ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆಂಜನೇಯ ರೆಡ್ಡಿ ಮಾತನಾಡಿ, “ಕಳೆದ 25 ವರ್ಷಗಳಿಂದ ನೀರಾವರಿ ಹೋರಾಟಗಳು ನಡೆಯುತ್ತಲೇ ಇವೆ. ನಾನಾ ರೀತಿಯಲ್ಲಿ ಹೋರಾಟಗಳು ನಡೆದಿವೆ. ಆದರೆ, ಸರಕಾರದ ನಿರ್ಲಕ್ಷ್ಯದ ಕಾರಣ ಸೂಕ್ತ ಪರಿಹಾರ ದೊರೆತಿಲ್ಲ. ಒಗ್ಗಟ್ಟಿನ ಪ್ರದರ್ಶನದಿಂದ ಮಾತ್ರ ನಮ್ಮ ಬಯಲು ಸೀಮೆಯ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ದೊರೆಯಲು ಸಾಧ್ಯ” ಎಂದು ಕರೆ ನೀಡಿದರು.

“ರೈತರನ್ನ, ಹೋರಾಟಗಾರರನ್ನ ಜಗಳಕ್ಕೆ ಹಚ್ಚೋದಷ್ಟೆ ಸರಕಾರದ ಕೆಲಸವಾಗಿಬಿಟ್ಟಿದೆ. ಆದರೆ, ಜಿಲ್ಲೆಗಳ ಪಾಲಿಗೆ ಬರಬೇಕಾದ ನೀರಿನ ವಿಚಾರ ಕುರಿತು ತುಟಿಬಿಚ್ಚುತ್ತಿಲ್ಲ. ಬೆಂಗಳೂರಿಂದ ಬರುತ್ತಿರುವ ಸೀವೇಜ್‌ ನೀರಿನಿಂದ ಸಾಕಷ್ಟು ರೋಗ ರುಜಿನಗಳಿಗೆ ಕಾರಣವಾಗುತ್ತಿರುವ ಕುರಿತು ವೈಜ್ಞಾನಿಕ ವರದಿಗಳು ಹೇಳುತ್ತಿವೆ. ಎಚ್.ಎನ್.ವ್ಯಾಲಿ – ಕೆ.ಸಿ.ವ್ಯಾಲಿ ನೀರು ತೃತೀಯ ಹಂತದ ಶುದ್ಧೀಕರಣವಾಗಬೇಕು. ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ತರಬೇಕು. ಈ ನಿಟ್ಟಿನಲ್ಲಿ ಜಿಲ್ಲೆಗಳ ಜನಪ್ರತಿನಿಧಿಗಳು ಮುಂಬರುವ ಅಧಿವೇಶನದಲ್ಲಿ ಒಗ್ಗಟ್ಟಿನಿಂದ ಗಟ್ಟಿ ಧ್ವನಿ ಎತ್ತಬೇಕಿದೆ” ಎಂದು ಆಂಜನೇಯ ರೆಡ್ಡಿ ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಕಲಬುರಗಿ | ನಗರಾಭಿವೃದ್ಧಿ ಇಲಾಖೆಯ ಎಡವಟ್ಟು; 6 ತಿಂಗಳ ಹಿಂದೆ ಮೃತಪಟ್ಟಿರುವ ಇಂಜಿನಿಯರ್ ವರ್ಗಾವಣೆ!

ದುಂಡು ಮೇಜಿನ ಸಭೆಯಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಸುಷ್ಮಾ ಶ್ರೀನಿವಾಸ್, ಉಷಾ, ಆಯೇಶಾ ಸುಲ್ತಾನ, ದೊಡ್ಡಬಳ್ಳಾಪುರ ತಾಲೂಕಿನ ಸಂಜೀವ್‌, ಮುತ್ತಯ್ಯ, ಚಿಕ್ಕಬಳ್ಳಾಪುರ ತಾಲೂಕಿನ ಗಿರೀಶ್‌, ನಾರಾಯಣಸ್ವಾಮಿ, ಸುಧಾಕರ್‌, ಅಭಿಷೇಕ್‌, ಕೃಷ್ಣ, ಅಭಿಲಾಷ್‌, ಬಾಗೇಪಲ್ಲಿಯ ಗೋವಿಂದ್, ಶ್ರೀನಿವಾಸಪುರದ ನರಸಿಂಹ ರೆಡ್ಡಿ, ದೇವನಹಳ್ಳಿಯ ಕಾರೇಹಳ್ಳಿ ನಾರಾಯಣಸ್ವಾಮಿ, ಶ್ರೀನಿವಾಸ್‌, ಶಿಡ್ಲಘಟ್ಟ ತಾಲೂಕಿನ ಬಾಬು ರೆಡ್ಡಿ, ಸತೀಶ್‌, ವರುಣ್‌, ದೇವರಾಜು, ಮುಳುಬಾಗಿಲು ತಾಲೂಕಿನ ವೆಂಕಟ್, ಶ್ರೀನಿವಾಸ್‌, ಯುವ ಶಕ್ತಿ ಸಂಘದ ರಾಘವೇಂದ್ರ, ನವೀನ್‌, ಜಯರಾಂ, ಚಿಂತಾಮಣಿ ತಾಲೂಕಿನ ನಿತೀಶ, ರಾಘವೇಂದ್ರ, ನಾರಾಯಣಸ್ವಾಮಿ, ಶಿವರಾಮ್‌, ಗೌರಿಬಿದನೂರು ತಾಲೂಕಿನ ನವೀನ್‌, ಮಂಜುನಾಥ್‌, ರಾಜಣ್ಣ, ಕೋಲಾರದ ರಾಮು, ಶಿವಣ್ಣ, ಜಿ.ನಾರಾಯಣಸ್ವಾಮಿ, ವಿಶ್ವನಾಥ್‌ ಗೌಡ, ನೀರಾವರಿ ಹೋರಾಟ ಸಮತಿಯ ಸದಸ್ಯರು ಸೇರಿದಂತೆ ಹಲವರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...