ಅಪಘಾತದಲ್ಲಿ ಅಜ್ಜವಾರದ 4 ಮಂದಿ ಯುವಕರು ಸಾವು: ಮೃತರ ಸ್ವ-ಗ್ರಾಮಕ್ಕೆ ಶಾಸಕ ಪ್ರದೀಪ್ ಈಶ್ವರ್ ಭೇಟಿ

Date:

ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟಿನ ಬಳಿ ಗುರುವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಅಜ್ಜವಾರದ 4 ಮಂದಿ ಯುವಕರ ಸ್ವ ಗ್ರಾಮಕ್ಕೆ ಶಾಸಕ ಪ್ರದೀಪ್ ಈಶ್ವರ್ ಭೇಟಿ ನೀಡಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿ ತಲಾ 25 ಸಾವಿರ ಸಹಾಯಧನ ವಿತರಿಸಿದರು.

ತಾಲೂಕಿನ ಅಜ್ಜವಾರ ಗ್ರಾಮಕ್ಕೆ ಭೇಟಿ ನೀಡಿದ‌ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, “ಟಿಪ್ಪರ್ ಲಾರಿಗಳ ಹಾವಳಿಯಿಂದ ಅನೇಕ ತೊಂದರೆಯಾಗುತ್ತಿದೆ. ನಾನು ಶಾಸಕನಾದಾಗಿನಿಂದ ಟಿಪ್ಪರ್ ಲಾರಿಗಳ ಓಡಾಟ ನಿಯಂತ್ರಿಸಲು ಪ್ರಯತ್ನ ಮಾಡುತಿದ್ದೇನೆ. ಆದರೆ, ತಾಲೂಕು ಮಟ್ಟದ ಅಧಿಕಾರಿಗಳು ತಡೆದರೆ, ಮೇಲಧಿಕಾರಿಗಳು ಮತ್ತು ಜಿಲ್ಲಾಡಳಿತದಿಂದ ತಾಲೂಕು ಮಟ್ಟದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುತ್ತಿದೆ. ಟಿಪ್ಪರ್, ಕ್ರಷರ್‌ಗಳಿಂದ ಯಾರಿಗೆ ಎಷ್ಟೆಷ್ಟು ಲಂಚ ಹೋಗುತ್ತಿದೆಯೋ ಗೊತ್ತಿಲ್ಲ, ಅಧಿಕಾರಿಗಳು, ಜನಪ್ರತಿನಿಧಿಗಳ ದುರಾಸೆಯಿಂದ ಅಜ್ಜವಾರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ 4 ಮಂದಿ ಮಕ್ಕಳು ಪ್ರಾಣ ಕಳೆದುಕೊಳ್ಳುವಂತಾಯಿತು” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ..? ಪರ್ಯಾಯ ರಾಜಕಾರಣ ಹೊಸ ಬರವಸೆ ಮೂಡಿಸಿದ ಜನ ದನಿ ರ್ಯಾಲಿ

“ಕಳೆದ ಒಂದು ತಿಂಗಳಲ್ಲಿ ಮಂಜು ಬೀಳುತ್ತಿರುವ ಕಾರಣ ರಸ್ತೆ ಅಪಘಾತಗಳಲ್ಲಿ 50 ಜನ ಜೀವ ಕಳೆದುಕೊಂಡಿದ್ದಾರೆ. ನಿನ್ನೆ ರಾತ್ರಿ ನಡೆದ ಅಪಘಾತದಲ್ಲಿ 4 ಮಂದಿ ಯುವಕರು ಮೃತಪಟ್ಟಿದ್ದಾರೆ. ಶಿಡ್ಲಘಟ್ಟ ಕೆಡೆಯಿಂದ ಅತಿ ವೇಗದಿಂದ ಬಂದ ಟಿಪ್ಪರ್‌ ಡಿಕ್ಕಿ ಹೊಡೆದ ಪರಿಣಾಮ ಅಪಘಾತವಾಗಿದೆ. ತಾಲೂಕಿನಲ್ಲಿ ಟಿಪ್ಪರ್ ಹಾವಳಿ ಹೆಚ್ಚಾಗಿದೆ. ಇದನ್ನು ನಾನು ಶಾಸಕನಾದಾಗಿನಿಂದ ವಿರೋಧಿಸುತ್ತ ಬಂದಿದ್ದೇನೆ” ಎಂದರು.

ಈ ವೇಳೆ ಕಾಂಗ್ರೆಸ್ ಮುಖಂಡರು, ಗ್ರಾಮದ ಮುಖಂಡರು ಮತ್ತು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳ ಮೀಸಲಾತಿ:ಬೆಂಗಳೂರಿನ ಬೃಹತ್ ಪ್ರತಿಭಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳಿದ ಮಾದಿಗ ಮುಖಂಡರುಗಳು

ಚಿಂತಾಮಣಿ:ಒಳ ಮೀಸಲಾತಿ ಜಾರಿಯಲ್ಲಿ ಆಗುತ್ತಿರುವ ವಿಳಂಬವನ್ನು ಖಂಡಿಸಿ ಇಂದು ಬೆಂಗಳೂರು ಚಲೋ...

ಪರಿಶಿಷ್ಟ ಜಾತಿ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ

ಚಿಂತಾಮಣಿ:ಇತ್ತೀಚಿಗೆ ಇಲ್ಲಿನ ಪರಿಶಿಷ್ಟ ಜಾತಿ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘ...

ಕಾರ್ಮಿಕನ ಮಗಳ ಮದುವೆಯ ಸಹಾಯಧನಕ್ಕೆ ಸಲ್ಲಿಸಿದ್ದ ಅರ್ಜಿ ರದ್ದು ಕಾರ್ಮಿಕರ ಪ್ರತಿಭಟನೆ

ಚಿಂತಾಮಣಿ:ಮದುವೆ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಪ್ರಮುಖ ಕ್ಷಣ ಆದರೆ ದಿನಗೂಲಿ ಕಾರ್ಮಿಕರು...

ಒಳಮೀಸಲಾತಿಯಿಂದ ಅನ್ಯಾಯವನ್ನು ಸರಿಪಡಿಸದೇ ಇದ್ದರೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ: ಎಂ.ವಿ.ಕೃಷ್ಣಪ್ಪ

ಬಾಗೇಪಲ್ಲಿ:- ನ್ಯಾ.ನಾಗಮೋಹನದಾಸ್ ವರದಿಯನ್ನು ತಿದ್ದುಪಡಿ ಮಾಡಿ ಎ, ಬಿ, ಸಿ ವರ್ಗಗಳಾಗಿ...