ಚಿಕ್ಕಬಳ್ಳಾಪುರವನ್ನು ಕಾಡುತ್ತಿದೆ ಬಾಲ್ಯ ವಿವಾಹ; ಮೂರು ವರ್ಷದಲ್ಲಿ ಗರ್ಭ ಧರಿಸಿದ್ದಾರೆ 317 ಬಾಲೆಯರು

Date:

ಬಾಲ್ಯ ವಿವಾಹದ ವಿರುದ್ಧ ಕಾನೂನುಗಳಿದ್ದರೂ, ನಾನಾ ರೀತಿಯ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿದ್ದರೂ ಬಾಲ್ಯ ವಿವಾಹವೆಂಬ ಅನಿಷ್ಠ ಪದ್ದತಿಗೆ ಇನ್ನೂ ಸಂಪೂರ್ಣ ಕಡಿವಾಣ ಬಿದ್ದಿಲ್ಲ. ಹೀಗಾಗಿ, ಹದಿಹರೆಯದ ವಯಸ್ಸಿನಲ್ಲೇ ವಿವಾಹವಾಗುವ ಬಾಲಕಿಯರು, ತಮ್ಮ ಬಾಲ್ಯ ಮುಗಿಯುವ ಮುನ್ನವೇ ತಾಯಿಯರಾಗುತ್ತಿದ್ದಾರೆ. ತಾವು ಆಟವಾಡುವ ವಯಸ್ಸಿನಲ್ಲಿ ಮಕ್ಕಳನ್ನು ಸಲಹುವ, ಆಟವಾಡಿಸುವ ಜವಬ್ದಾರಿ ಹೊರುತ್ತಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ತವರು ಜಿಲ್ಲೆ ಬೆಳಗಾವಿಯಲ್ಲಿ ಕಳೆದ ಒಂದೂವರೆಗೆ ವರ್ಷದಲ್ಲಿ 336 ಬಾಲಕಿಯರು ಗರ್ಭಿಣಿಯರಾಗಿದ್ದಾರೆ. ಅಂತೆಯೇ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ (2021-2023ವರೆಗೆ) 317 ಬಾಲಕಿಯರು ಗರ್ಭ ಧರಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ (ಆರ್‌ಸಿಎಚ್‌) ಪೋರ್ಟಲ್‌ನ ಅಂಕಿ–ಅಂಶಗಳ ಪ್ರಕಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2021ರಲ್ಲಿ 18 ವರ್ಷದೊಳಿಗಿನ 124 ಬಾಲಕಿಯರು, 2022ರಲ್ಲಿ 158 ಹೆಣ್ಣು ಮಕ್ಕಳು, 2023ರ ನವೆಂಬರ್‌ವರೆಗೆ 35 ಬಾಲಕಿಯರು ಗರ್ಭಿಣಿಯರಾಗಿದ್ದಾರೆ. ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳು ಹೆಚ್ಚಾಗಿ ನಡೆಯುತ್ತಿವೆ ಎಂಬುದನ್ನು ಈ ಅಂಕಿಅಂಶಗಳು ಸಾಬೀತುಪಡಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ಬಾಗೆಪಲ್ಲಿ ತಾಲೂಕಿನಲ್ಲಿ ಅತಿ ಹೆಚ್ಚು ಬಾಲಕಿಯರು ಗರ್ಭಿಣಿಯರಾಗಿದ್ದಾರೆ. ತಾಲೂಕಿನಲ್ಲಿ ಒಟ್ಟು 87 ಬಾಲಕಿಯರು ಗರ್ಭ ಧರಿಸಿದ್ದಾರೆ. ಎರಡನೇ ಸ್ಥಾನದಲ್ಲಿರುವ ಶಿಡ್ಲಘಟ್ಟ ತಾಲೂಕಿನಲ್ಲಿ ಒಟ್ಟು 75 ಬಾಲಕಿಯರು ಗರ್ಭಿಣಿಯರಾಗಿದ್ದಾರೆ.

ಬಾಲ್ಯ ವಿವಾಹವನ್ನು ತಡೆಯಲು ಪ್ರಯತ್ನಗಳು ನಡೆಯುತ್ತಲೇ ಇವೆ. ಜಾಗೃತಿ ಅಭಿಯಾನಗಳನ್ನೂ ಅಧಿಕಾರಿಗಳು ನಡೆಸುತ್ತಿದ್ದಾರೆ. ಆದರೂ, ಹಲವಾರು ಬಾಲ್ಯ ವಿವಾಹಗಳು ಬೆಳಕಿಗೆ ಬರುತ್ತಿಲ್ಲ. ಬಾಲಕಿಯರು ಗರ್ಭಿಣಿಯರಾದಾಗಲೇ ಬಾಲ್ಯ ವಿವಾಹಗಳು ಬೆಳಕಿಗೆ ಬರುತ್ತಿವೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...