ಚಿಕ್ಕಬಳ್ಳಾಪುರ | ಹಣಕ್ಕಾಗಿ ಬ್ಲಾಕ್‌ಮೇಲ್‌; ಯುವತಿಯ ತಿರುಚಿದ ಅಶ್ಲೀಲ ಫೋಟೊ ತಂದೆಗೆ ಕಳುಹಿಸಿದ ಕಿರಾತಕ

Date:

ವೃತ್ತಿಯಲ್ಲಿ ವೈದ್ಯೆಯಾಗಿರುವ ಯುವತಿಯೊಬ್ಬಳ ಫೋಟೊವನ್ನು ಅಶ್ಲೀಲವಾಗಿ ಎಡಿಟ್‌ ಮಾಡಿ ಅದನ್ನು ಆಕೆಯ ತಂದೆಗೆ ಕಳುಹಿಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿರುವ ಕಿರಾತಕನ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯ ಸೈಬರ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಯುವತಿಯ ಫೋಟೊವನ್ನು ಅಸಭ್ಯವಾಗಿ ಎಡಿಟ್‌ ಮಾಡಿ ಅದನ್ನು ಆಕೆಯ ತಂದೆಗೇ ವಾಟ್ಸಾಪ್‌ ಮಾಡಿರುವ ವಿಕೃತನೊಬ್ಬ, ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ. ಯುವತಿಯ ತಂದೆ ಸೈಬರ್‌ ಪೊಲೀಸರಿಗೆ ದೂರು ನೀಡಿದ್ದಾರೆ.

ಇತ್ತೀಚೆಗಷ್ಟೇ ಎಂಬಿಬಿಎಸ್ ಮುಗಿಸಿ ಉದ್ಯೋಗ ಆರಂಭಿಸಿದ್ದ ಯುವತಿಗೆ ಅಪರಿಚಿತ ಕರೆಯೊಂದು ಬಂದಿದ್ದು, ನೀವು ಆನ್ಲೈನ್‌ನಲ್ಲಿ 5 ಸಾವಿರ ಸಾಲ ಪಡೆದಿದ್ದೀರಿ. ಅದನ್ನು ವಾಪಸ್‌ ಕಟ್ಟಬೇಕು ಎಂದು ಬೆದರಿಕೆ ಹಾಕಲಾಗಿದೆ. ಆದರೆ, ಯುವತಿ, ನಾನು ಯಾವುದೇ ಸಾಲ ಪಡೆದಿಲ್ಲ. ಹಾಗಾಗಿ ಯಾವುದೇ ಹಣ ಕಟ್ಟುವುದಿಲ್ಲ ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಂತಾಮಣಿ ನಗರದ ಕನಂಪಲ್ಲಿ ನಿವಾಸಿಯಾಗಿರುವ ಈ ಯುವ ವೈದ್ಯೆ ಹಲವು ದಿನಗಳ ಹಿಂದೆ ನಕಲಿ ಅಪ್ಲಿಕೇಶನ್‌ ಮೇಲೆ ಕ್ಲಿಕ್‌ ಮಾಡಿದ್ದು ನಿಜವಾದರೂ ಯಾವುದೇ ಹಣ ಪಡೆದಿರಲಿಲ್ಲ. ಆರಂಭದಲ್ಲಿ ಹಣ ಪಡೆಯುವಂತೆ ಒತ್ತಡ ಹೇರಿದ ಕಿರಾತಕರು ಬಳಿಕ, ಹಣ ಪಡೆದಿದ್ದೀರಿ ವಾಪಸ್‌ ಕೊಡಿ ಎಂದು ಒತ್ತಡ ಹೇರಲು ಆರಂಭಿಸಿದ್ದಾರೆ. ಆದರೆ, ಆಕೆ ಹಣ ಮರಳಿ ಪಾವತಿಸುವ ಪ್ರಮೇಯವೇ ಇಲ್ಲವೆಂದು ಸ್ಪಷ್ಟವಾಗಿ ಹೇಳಿದ್ದರು ಎನ್ನಲಾಗಿದೆ.

“ನಿಮ್ಮ ಅಶ್ಲೀಲ ಫೋಟೊ ನಮ್ಮ ಬಳಿ ಇದೆ. ಅದನ್ನು ನಿಮ್ಮ ಮನೆಯವರು, ಸ್ನೇಹಿತರಿಗೆಲ್ಲ ಕಳುಹಿಸುತ್ತೇನೆʼʼ ಎಂದು ಆಕೆಗೆ ತಿಳಿಸಿದ್ದಾರೆ. ಆದರೆ, ತಮ್ಮ ಫೋಟೊ ಅವರಿಗೆ ಹೇಗೆ ಸಿಗುತ್ತದೆ, ತಾನು ಆ ರೀತಿ ನಡೆದುಕೊಂಡಿದ್ದೇ ಇಲ್ಲ ಎಂದು ಯುವ ವೈದ್ಯೆ ಧೈರ್ಯವಾಗಿದ್ದರು.

ಕಿರಾತಕನೊಬ್ಬ ವೈದ್ಯೆಯ ಅಸಭ್ಯ ಫೋಟೊ ಒಂದನ್ನು ಯುವತಿಯ ತಂದೆಯ ವಾಟ್ಸಾಪ್‌ಗೆ ಶೇರ್‌ ಮಾಡಿದ್ದಾನೆ. ಇದು ಅಶ್ಲೀಲವಾಗಿ ಎಡಿಟ್‌ ಮಾಡಿರುವ ಫೋಟೊ ಆಗಿದ್ದು, ಗೊತ್ತೇ ಆಗದಂತೆ ಎಡಿಟ್‌ ಮಾಡಲಾಗಿದೆ ಎನ್ನಲಾಗಿದೆ. ಜತೆಗೆ ಮನೆಯವರು, ಸಂಬಂಧಿಕರಿಗೂ ಈ ಫೋಟೊಗಳನ್ನು ಸೈಬರ್‌ ಕಳ್ಳ ಕಳುಹಿಸಿದ್ದಾನೆ. ಇದೀಗ ಯುವತಿಯ ತಂದೆ ಚಿಕ್ಕಬಳ್ಳಾಪುರದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಧರ್ಮಸ್ಥಳ ಸೌಜನ್ಯ ಪ್ರಕರಣ : 11 ವರ್ಷಗಳ ಬಳಿಕ ಆರೋಪಿ ದೋಷಮುಕ್ತ

ವೈದ್ಯೆಯ ಅಶ್ಲೀಲ ಫೋಟೊ ಎಡಿಟ್‌ ಮಾಡಿ ಬ್ಲ್ಯಾಕ್‌ ಮೇಲ್‌ ಮಾಡುತ್ತಿರುವುದು ಸೈಬರ್‌ ಕಳ್ಳರ ಅಥವಾ ಬೇರೆ ಯಾರೋ ಪರಿಚಿತರು ಈ ಕೃತ್ಯ ನಡೆಸುತ್ತಿದ್ದಾರ ಎಂಬ ಬಗ್ಗೆಯೂ ಸಂಶಯವಿದೆ. ಈ ಕಿರಾತಕ ಕೇವಲ ಸೋಷಿಯಲ್‌ ಮೀಡಿಯಾದಲ್ಲಿ ಮಾತ್ರ ಯುವತಿಯ ಫೋಟೊ ಅಪ್‌ಲೋಡ್‌ ಮಾಡುತ್ತಿಲ್ಲ. ಬದಲಾಗಿ ಯುವತಿಯ ಸಂಬಂಧಿಕರಿಗೆಲ್ಲ ಫೋಟೊ ಕಳುಹಿಸುತ್ತಿರುವುದು ಬೆಳಕಿಗೆ ಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...