ಚಿಕ್ಕಬಳ್ಳಾಪುರ | ಅಕ್ರಮವಾಗಿ ನಿವೇಶನ ಮಾರಾಟ; ಖಾಲಿ ಜಾಗದಲ್ಲಿ ಗುಡಿಸಲು ಹಾಕಿ ಸ್ಥಳೀಯರ ಧರಣಿ

Date:

ಜನವಸತಿ ಇಲ್ಲದ ಪ್ರದೇಶಗಳನ್ನು ಪಂಚಾಯತಿಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿಕೊಂಡು, ಅಕ್ರಮವಾಗಿ ಖಾತೆಗಳನ್ನು ಸೃಷ್ಟಿಸಿ ಮಾರಾಟ ಮಾಡಿರುವುದನ್ನು ತಿಳಿದ ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿಗಳು ಮತ್ತೊಂದು ಜನವಸತಿ ಇಲ್ಲದ ಪ್ರದೇಶ ಮಾರಾಟವಾಗುವುದಕ್ಕೂ ಮುನ್ನವೇ ಎಚ್ಚರಗೊಂಡಿದ್ದು, ಖಾಲಿ ಇರುವ ಸರ್ಕಾರಿ ಗ್ರಾಮ ಠಾಣೆ ಜಾಗದಲ್ಲಿ ರಾತ್ರೊ ರಾತ್ರಿ 80ಕ್ಕೂ ಹೆಚ್ಚು ಗುಡಿಸಲುಗಳನ್ನು ನಿರ್ಮಾಣ ಮಾಡಿಕೊಂಡು ನಿವೇಶನಗಳನ್ನಾಗಿ ವಿತರಣೆ ಮಾಡುವಂತೆ ಒತ್ತಾಯ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಜರಾ ಬಾರ್ಲಹಳ್ಳಿ ಎನ್ನುವ ಜನವಸತಿ ಇಲ್ಲದ ಗ್ರಾಮವನ್ನು, ಸ್ವತಃ ಪಂಚಾಯತಿಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿಕೊಂಡು, ಅಕ್ರಮವಾಗಿ ಖಾತೆಗಳನ್ನು ಸೃಷ್ಟಿಸಿ ಮಾರಾಟ ಮಾಡಿದ್ದು, ಇದೀಗ ಸೀಗಹಳ್ಳಿ ಎಂಬ ಜನವಸತಿ ಇಲ್ಲದ ಪ್ರದೇಶ ಮಾರಾಟಕ್ಕೆ ಮುಂದಾಗುವುದಕ್ಕೂ ಮುನ್ನ ಸ್ಥಳೀಯ ನಿವಾಸಿಗಳು ಎಚ್ಚೆತ್ತುಕೊಂಡು ನಿವೇಶನಕ್ಕಾಗಿ ಒತ್ತಾಯಿಸಿದ್ದಾರೆ.

ದಸಂಸ ಮುಖಂಡ ಗುಡಿಬಂಡೆ ಗಂಗಪ್ಪ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಆವಲಗುರ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂಸೆಪಾಳ್ಯಾ ಗ್ರಾಮದಲ್ಲಿ ನೂರಕ್ಕೂ ಹೆಚ್ಚು ಕುಟುಂಬಗಳಿಗೆ ಮನೆಗಳಿಲ್ಲ. ನಿವೇಶನಗಳೂ ಇಲ್ಲ. ಬಹುತೇಕರು ದಲಿತರು ಹಾಗೂ ಕ್ರೈಸ್ತರು ಇರುವ ಸರ್ಕಾರಿ ಗ್ರಾಮ ಠಾಣೆ ಜಾಗವನ್ನು ಎಲ್ಲಿ ಅಕ್ರಮವಾಗಿ ಮಾರಿ ಬೀಡುತ್ತಾರೋ ಎಂದು ಆಕ್ರೋಶಗೊಂಡು, ಕಳೆದ 15 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದ, ಖಾಲಿ ಜಾಗದಲ್ಲಿ ಗುಡಿಸಲು ಹಾಕಿಕೊಂಡು ಹಗಲು ರಾತ್ರಿ ಧರಣಿ ಮಾಡುತ್ತಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಾತ್ಕಾಲಿಕ ಗುಡಿಸಲುಗಳಲ್ಲಿ ಅಡುಗೆ, ಸ್ನಾನ ಮಾಡಿಕೊಂಡು ಕೊರೆಯುವ ಚಳಿಯಲ್ಲಿ ನಡಗುತ್ತಿದ್ದು, ಸರ್ಕಾರಿ ಜಮೀನನ್ನು ಬಲಾಢ್ಯರಿಗೆ ಮಾರುವುದರ ಬದಲು, ಕಡು ಬಡವ ನಿರ್ಗತಿಕರಿಗೆ ನಿವೇಶನಗಳನ್ನು ನೀಡುವಂತೆ ಸ್ಥಳಿಯರು ಒತ್ತಾಯ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

“ಈಗಾಗಲೇ ಮಜರಾ ಬಾರ್ಲಹಳ್ಳಿ ಎನ್ನುವ ಜನವಸತಿ ಇಲ್ಲದ ಗ್ರಾಮವನ್ನು, ಸ್ವತಃ ಪಂಚಾಯತಿಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿಕೊಂಡು, ಅಕ್ರಮವಾಗಿ ಖಾತೆಗಳನ್ನು ಸೃಷ್ಟಿಸಿ, ಹಿಂದಿನ ಸಚಿವರ ಒತ್ತಡಕ್ಕೆ ಮಣಿದು ಸರ್ಕಾರಿ ಜಾಗವನ್ನು ಈಶಾ ಫೌಂಡೇಶನ್‌ಗೆ ಮಾರಾಟ ಮಾಡಿದ್ದಾರೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.

“ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಗ್ರಾಮದ ಬಳಿ ಈಶಾ ಫೌಂಡೇಶನ್ ನಿರ್ಮಾಣ ಆಗಿದ್ದೇ ತಡ, ಸುತ್ತಮುತ್ತಲ ಪ್ರದೇಶಗಳ ಜಮೀನು ಹಾಗೂ ನಿವೇಶನಗಳಿಗೆ ಚಿನ್ನದ ಬೆಲೆ ಬಂದಿದೆ. ಇದರಿಂದ ನನಗೊಂದು, ತನಗೊಂದು ನಿವೇಶನಗಳನ್ನು ನೀಡುವಂತೆ ಜನರು ಆಗ್ರಹ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆವಲಗುರ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಜಮೀನನ್ನು ಬಿಲ್‌ ಕಲೆಕ್ಟರ್‌ ಮತ್ತು ಹಾಲಿ ಅಧ್ಯಕ್ಷ ಮಂಜುನಾಥ್‌ ಸೇರಿಕೊಂಡು ಈಶಾ ಫೌಂಡೇಶನ್‌ಗೆ ಮಾರಾಟ ಮಾಡಿದ್ದಾರೆ” ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಭದ್ರಾವತಿ | ಕೌಟುಂಬಿಕ ಕಲಹ; ಪತಿಯ ವಿರುದ್ಧವೇ ಮಗಳ ಅಪಹರಣದ ದೂರು ನೀಡಿದ ಪತ್ನಿ

ಖಾಲಿ ಜಾಗ ಹಂಚಿಕೆ ವಿಷಯದಲ್ಲಿ ಅಕ್ರಮ ಎಸಗಿರುವ ಹಿಂದೆ ಕರ್ತವ್ಯದಲ್ಲಿದ್ದ ಪಿಡಿಒ ಹಾಗೂ ಬಿಲ್‌ ಕಲೆಕ್ಟರ್‌ ಇಬ್ಬರು ಅಧಿಕಾರಿಗಳನ್ನೂ ಅಮಾನತು ಮಾಡಬೇಕೆಂದು ಒತ್ತಾಯಿಸಿ ಸ್ಥಳೀಯರು ಟಮಟೆ ಚಳವಳಿ ಮೂಲಕ ಆವಲಗುರ್ಕಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...