ತುಮಕೂರು | ಸಿದ್ಧಗಂಗಾ ಶ್ರೀಗಳ ಆಶೀರ್ವಾದದೊಂದಿಗೆ ಶಶಿ ಹುಲಿಕುಂಟೆ ಮಠ್ ಪ್ರಚಾರ ಕಾರ್ಯ ಆರಂಭ

Date:

ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್ ಅವರು ಶ್ರೀಮತಿ ಅಮೂಲ್ಯ ಅವರೊಂದಿಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದು ಚುನಾವಣಾ ಪ್ರಚಾರ ಕಾರ್ಯ ಆರಂಭಿಸಿದರು. 

ಕೆಲಕಾಲ ಸಿದ್ದಗಂಗಾ ಸ್ವಾಮೀಜಿ ಅವರೊಂದಿಗೆ ಚುನಾವಣಾ ವಿಷಯವಾಗಿ ಚರ್ಚಿಸಿ ಮಾರ್ಗದರ್ಶನ ಪಡೆದರು.  ಕಿರಿಯ ವಯಸ್ಸಿಗೆ ಅತಿ ದೊಡ್ಡ ಜವಾಬ್ದಾರಿಯನ್ನು ಹೊತ್ತಿದ್ದೀರಿ. ಎಲ್ಲರ ಸಲಹೆ ಸೂಚನೆಗಳನ್ನು ಸ್ವೀಕರಿಸಬೇಕು. ಭವಿಷ್ಯದ ಯುವ ನಾಯಕನಾಗಿ ಬೆಳೆಯುವ ಸಾಮರ್ಥ್ಯ ನಿಮ್ಮಲ್ಲಿದೆ. ಎಲ್ಲರ ಕಷ್ಟ ಕಾರ್ಪಣ್ಯಗಳಿಗೆ ಸಂತೈಸುವ ಮದ್ದು ನೀವಾಗಬೇಕು. ಭವಿಷ್ಯದಲ್ಲಿ ಉನ್ನತ ಹುದ್ದೆ ಹಾಗೂ ಅವಕಾಶಗಳು ಸಿದ್ದಿಯಾಗಲಿ ಎಂದು ಶ್ರೀಗಳು ಬೆನ್ನು ತಟ್ಟಿ ಶುಭ ಹಾರೈಸಿದರು. 

ಈ ಸಂದರ್ಭದಲ್ಲಿ ಸಿದ್ದಲಿಂಗ ಶ್ರೀಗಳು ಶಶಿಹುಲಿ ಕುಂಟೆ ಮಠ್ ಅವರನ್ನು ಶಾಲು ಹೂದಿಸಿ ಸನ್ಮಾನಿಸಿ ಗೌರವಿಸಿದರು. ಇದಕ್ಕೂ ಮುನ್ನ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002724551

ಈ ವೇಳೆಯಲ್ಲಿ ಶಶಿಹುಲಿ ಕುಂಟೆಮಠ್ ಗೆ  ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕದ ಜಿಲ್ಲಾಧ್ಯಕ್ಷ ಡಾ. ದರ್ಶನ್ ಕೆ. ಎಲ್ ಬೆಂಬಲ ವ್ಯಕ್ತಪಡಿಸಿದರು.

ಮಹಾಸಭಾ ಪ್ರಧಾನ ಕಾರ್ಯದರ್ಶಿ ಮನು ಕೊಪ್ಪ, ನಿರ್ದೇಶಕರಾದ ಮಲ್ಲಿಕಾರ್ಜುನ್, ನಾಗರ್ಜುನ್, ಕೆಪಿವೈಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಜೆ, ಗಿರಿ ರಾಮಯ್ಯ, ಜೈ ಶಂಕರ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮತ್ತು ವೀರಶೈವ ಲಿಂಗಾಯತ ಮುಖಂಡರು ಉಪಸ್ಥಿತರಿದ್ದರು.

1002724537

ಇಂದಿನಿಂದ ತುಮಕೂರು ಜಿಲ್ಲಾ ಪ್ರವಾಸ ಹಮ್ಮಿಕೊಳ್ಳಲಿದ್ದೇನೆ

ಸ್ವಾಮೀಜಿಗಳ ಭೇಟಿ ಬಳಿಕ ಶಶಿ ಹುಲಿಕುಂಟೆ ಮಠ್ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟಿಕೆಟ್ ಘೋಷಣೆಯಾದ ಬಳಿಕ ಸಿದ್ದಗಂಗಾ ಮಠಕ್ಕೆ ಮೊದಲ ಬಾರಿಗೆ ಭೇಟಿ ನೀಡಿ ಶಿವಕುಮಾರಸ್ವಾಮೀಜಿ ಗದ್ದುಗೆ ಪೂಜೆ ಸಲ್ಲಿಸಿ, ಸಿದ್ದಗಂಗಾ ಸ್ವಾಮೀಜಿ ಆಶೀರ್ವಾದ ಪಡೆದಿದ್ದೇನೆ. ತಾಲೂಕು ಮಟ್ಟ, ವಿಧಾನಸಭಾ ಮಟ್ಟದಲ್ಲಿ ಶಾಸಕರ ನೇತೃತ್ವದಲ್ಲಿ ಚುನಾವಣಾ ಪೂರ್ವ ಭಾವಿ ಚಟುವಟಿಕೆಗಳು ಶುರುವಾಗಿವೆ. ಇದಕ್ಕೆ ಶಿಕ್ಷಕರು, ಪಧವೀದರರು ಬೆಂಬಲವಾಗಿ ನಿಂತಿದ್ದಾರೆ. ಐದು ಜಿಲ್ಲೆಯಿಂದ 1 ಲಕ್ಷದ 76 ಸಾವಿರ ಮತದಾರ ಪದವೀಧರರ ನೋಂದಣಿಯಾಗಿದೆ. ತುಮಕೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ 49 ಸಾವಿರಕ್ಕೂ ಅಧಿಕ ನೋಂದಣಿಯಾಗಿದೆ ಎಂದು ಮಾಹಿತಿ ನೀಡಿದರು‌.

ಶಿಕ್ಷಕರು ಸೇರಿದಂತೆ ನನಗೆ ಬೆನ್ನೆಲುಬಾಗಿ ನಿಂತಿರುವವರು ನನ್ನೊಂದಿಗೆ ಮಠಕ್ಕೆ ಬಂದಿದ್ದಾರೆ ಅವರೆಲ್ಲರಿಗೂ ನಾನು ಆಭಾರಿ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಆಸಿಡ್ ದಾಳಿ: ಸಂತ್ರಸ್ತರ ಆರೋಗ್ಯ ವಿಚಾರಣೆ

ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿಯಲ್ಲಿ ನಡೆದ ಆಸಿಡ್ ದಾಳಿಯಲ್ಲಿ ಗಾಯಗೊಂಡು ದಾವಣಗೆರೆಯ ಎಸ್.ಎಸ್....

ಚಿತ್ರದುರ್ಗ | ಕೌಟುಂಬಿಕ ಕಲಹ: ಪತ್ನಿ, ಮಗಳು ಸೇರಿ ಐವರ ಮೇಲೆ ಆಸಿಡ್‌ ದಾಳಿ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನನ್ನು ಬಿಟ್ಟು ಹೋಗಿದ್ದ ಪತ್ನಿ,...

ತುಮಕೂರು | ಶೇ‌.50 ಮಹಿಳಾ ಮೀಸಲಾತಿ ಮಸೂದೆ ಸಂಸತ್ತಿನಲ್ಲಿ ಅನುಮೋದಿಸಬೇಕು: ಡಾ.ಜಿ.ಪರಮೇಶ್ವರ

 ಸಂಸತ್ತಿನಲ್ಲೂ ಮಹಿಳಾ ಮೀಸಲಾತಿ ಮಸೂದೆ ಅನುಮೋದನೆ ಆಗಬೇಕು. ಇದರಿಂದ ಸಂಸತ್ತು ಮತ್ತು...

ಬಜೆಟ್-2026‌ | ಚಿಕ್ಕಬಳ್ಳಾಪುರಕ್ಕೆ ರೇಷ್ಮೆ ಆಸರೆ; ನೀರಾವರಿ ಕನಸು ಇನ್ನೂ ದೂರ!

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯದ 17ನೇ ದಾಖಲೆ ಬಜೆಟ್-2026‌, ಗಡಿ ಜಿಲ್ಲೆ...