ನೆಕ್ಕುಂದಿಪೇಟೆ ಕೆರೆ ಸ್ವರೂಪ ನಾಶ: ಅಕ್ರಮವಾಗಿ ಮಣ್ಣು ಸಾಗಣೆ

Date:

ಚಿಂತಾಮಣಿ : ತಾಲ್ಲೂಕಿನ ನೆಕ್ಕುಂದಿ ಪೇಟೆ ಕೆರೆಯಲ್ಲಿ ಯಾವುದೇ ಪರವಾನಗಿ ಇಲ್ಲದೆ ಹಗಲು-ರಾತ್ರಿ ಮಣ್ಣು ಸಾಗಾಟ ಮಾಡಲಾಗುತ್ತಿದೆ ಇದರಿಂದ ಕೆರೆ ಸ್ವರೂಪ ನಾಶವಾಗುತ್ತಿದೆ.ಅಂತರ್ಜಲ ಮಟ್ಟ ಕುಸಿಯುತ್ತಿದೆ.

ತಾಲ್ಲೂಕಿನ ಕೋನಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ನೆಕ್ಕುಂದಿಪೇಟೆ ಕೆರೆಯಲ್ಲಿ ಕಳೆದ ಕೆಲವು ದಿನಗಳಿಂದ ಜೆಸಿಬಿ ಮತ್ತು ಟ್ರ್ಯಾಕ್ಟ‌ರ್ ಮೂಲಕ ಅವೈಜ್ಞಾನಿಕವಾಗಿ ಮಣ್ಣು ತೆಗೆಯಲಾಗುತ್ತಿದೆ.ಇದರಿಂದ ಕೆರೆ ಒಡ್ಡು ಮತ್ತು ತಳಭಾಗಕ್ಕೆ ಹಾನಿಯಾಗುತ್ತಿದ್ದು ಸಾರ್ವಜನಿಕ ಆಸ್ತಿಗೆ ಧಕ್ಕೆ ಉಂಟಾಗುತ್ತಿದೆ.

ಕೆರೆಯಲ್ಲಿ ಮಣ್ಣು ತೆಗೆಯುತ್ತಿರುವ ಆಳವು ವೈಜ್ಞಾನಿಕ ಮಿತಿಯನ್ನು ಮೀರಿದೆ ಇದರಿಂದ ಕೆರೆ ನೈಸರ್ಗಿಕ ಜಲಮೂಲ ನಾಶವಾಗುತ್ತಿದೆ ಮತ್ತು ಸುತ್ತಮುತ್ತಲಿನ ರೈತರ ಬೋರ್‌ವೆಲ್‌ಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿದೆ ಇದು ಪರಿಸರಕ್ಕೆ ಸರಿಪಡಿಸಲಾಗದ ಹಾನಿಯನ್ನುಂಟು ಮಾಡುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಂದಾಯ ಇಲಾಖೆ ನಿಯಮಗಳ ಪ್ರಕಾರ ಕೆರೆಗಳಲ್ಲಿ 3 ರಿಂದ 4 ಅಡಿಗಿಂತಲೂ ಹೆಚ್ಚು ಆಳವಾಗಿ ಹಾಗೂ ನೇರವಾಗಿ ಮಣ್ಣು ತೆಗೆಯುವಂತಿಲ್ಲ ಸರ್ಕಾರದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಅನುಮತಿ ಹಾಗೂ ಪರವಾನಗಿ ಪಡೆಯದೆ ಮಣ್ಣು ತೆಗೆಯುವಂತಿಲ್ಲ ಜೆಸಿಬಿಯಂತಹ ಭಾರಿ ಯಂತ್ರಗಳನ್ನು ಕೆರೆಗಳಿಗೆ ಇಳಿಸುವಂತಿಲ್ಲ ಇಷ್ಟೆಲ್ಲ ನಿಯಮಗಳಿದ್ದರೂ ಕೆಲ ಪ್ರಭಾವಿಗಳಿಂದ ಅವ್ಯಾಹತವಾಗಿ ಮಣ್ಣು ದಂಧೆ ನಡೆಯುತ್ತಿದೆ.

ನೆಕ್ಕುಂದಿ ಪೇಟೆಯ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ಎತ್ತುತ್ತಿರುವ ಬಗ್ಗೆ ಮಾಧ್ಯಮದವರಿಗೆ ಮಾಹಿತಿ ಸಿಕ್ಕಿದ ತಕ್ಷಣ ಸ್ಥಳಕ್ಕೆ ಹೋದ ಮಾಧ್ಯಮದವರ ಮೇಲೆ ಕೆಲವರು ಗುಂಡಾಗಿರಿ ತೋರಿಸಿ ನಾವು ಅನುಮತಿ ಪಡೆದು ಮಣ್ಣು ತೆಗೆಯುತ್ತಿದ್ದೇವೆ ನೀವು ಯಾರು ನಮಗೆ ಪ್ರಶ್ನೆ ಮಾಡುವುದಕ್ಕೆ ಎಂದು ಅವಾಜ್ ಹಾಕಿದ್ದಾರೆ ಕೂಡಲೇ ಮಾಧ್ಯಮದವರು ತಾಲೂಕು ದಂಡಾಧಿಕಾರಿಗಳಿಗೆತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗೆ ಪೊಲೀಸ್ ಇಲಾಖೆಗೆ ಮಾಹಿತಿ ಮುಟ್ಟಿಸಿದ ತಕ್ಷಣ ಸ್ಥಳಕ್ಕೆ ಪೊಲೀಸರು ಆಗಮಿಸುತ್ತಿದ್ದಂತೆ ಜೆಸಿಬಿ ಹಾಗೂ ಎರಡು ಟಿಪ್ಪರ್ ಗಳು ಅಲ್ಲಿಂದ ನಾಪತ್ತೆಯಾಗಿವೆ,ಮಣ್ಣು ತೆಗೆಯುತ್ತಿದ್ದವರನ್ನು ಪೋಲೀಸರು ನಿಮ್ಮ ಬಳಿ ಕೆರೆಯಲ್ಲಿ ಮಣ್ಣು ತೆಗೆಯಲು ಅನುಮತಿ ಪತ್ರವಿದ್ದರೆ ತೋರಿಸಿ ಎಂದು ಪ್ರಶ್ನಿಸಿದಾಗ ಅವರ ಬಳಿ ಅನುಮತಿ ಪತ್ರವೇ ಇರಲಿಲ್ಲ.

ಇದನ್ನು ಓದಿದ್ದೀರಾ..? ಹೋಬಳಿವಾರು ಸಭೆ ಮಾಡಿ ಸಮಸ್ಯೆಗಳು ಇದ್ದರೆ ಪರಿಹಾರಕ್ಕೆ ಕ್ರಮ: ಅಧ್ಯಕ್ಷ ವಿ.ಎಂ ಮುನಿಯಪ್ಪ

ನಂತರ ಪೊಲೀಸರು ಮೊದಲು ಅನುಮತಿ ಪಡೆದು ಕೆರೆಯಿಂದ ಮಣ್ಣು ತೆಗೆದುಕೊಳ್ಳಬಹುದು ಅನುಮತಿ ಇಲ್ಲದೆ ಕೆರೆಯಿಂದ ಮಣ್ಣು ತೆಗೆದರೆ ಅದು ಕಾನೂನು ಉಲ್ಲಂಘನೆ ಆಗುತ್ತದೆ ಎಂದು ಎಚ್ಚರಿಕೆ ನೀಡಿ ವಾಪಾಸಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಶಿಷ್ಟ ಜಾತಿ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ

ಚಿಂತಾಮಣಿ:ಇತ್ತೀಚಿಗೆ ಇಲ್ಲಿನ ಪರಿಶಿಷ್ಟ ಜಾತಿ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘ...

ಕಾರ್ಮಿಕನ ಮಗಳ ಮದುವೆಯ ಸಹಾಯಧನಕ್ಕೆ ಸಲ್ಲಿಸಿದ್ದ ಅರ್ಜಿ ರದ್ದು ಕಾರ್ಮಿಕರ ಪ್ರತಿಭಟನೆ

ಚಿಂತಾಮಣಿ:ಮದುವೆ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಪ್ರಮುಖ ಕ್ಷಣ ಆದರೆ ದಿನಗೂಲಿ ಕಾರ್ಮಿಕರು...

ಒಳಮೀಸಲಾತಿಯಿಂದ ಅನ್ಯಾಯವನ್ನು ಸರಿಪಡಿಸದೇ ಇದ್ದರೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ: ಎಂ.ವಿ.ಕೃಷ್ಣಪ್ಪ

ಬಾಗೇಪಲ್ಲಿ:- ನ್ಯಾ.ನಾಗಮೋಹನದಾಸ್ ವರದಿಯನ್ನು ತಿದ್ದುಪಡಿ ಮಾಡಿ ಎ, ಬಿ, ಸಿ ವರ್ಗಗಳಾಗಿ...

ಟೊಮೆಟೊ ಬೆಲೆ ಕುಸಿತ: ಅವಿಭಜಿತ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ಸಂಕಷ್ಟ

ಪ್ರತಿದಿನ ಟೊಮೆಟೊ ಬೆಲೆ ಕುಸಿಯುತ್ತಿರುವ ಕಾರಣ ರೈತರು ನಿರಾಶೆಗೆ ಒಳಗಾಗಿದ್ದಾರೆ. ಕೋಲಾರ...