ಚಿಕ್ಕಬಳ್ಳಾಪುರ | ಮಿನಿ ವಿಧಾನಸೌಧ, ಆಸ್ಪತ್ರೆಯ 40 ಲಕ್ಷ ರೂ. ವಿದ್ಯುತ್ ಬಿಲ್‌ ಬಾಕಿ

Date:

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿರುವ ತಾಲೂಕು ‌ಆಡಳಿತ ಕಚೇರಿ ಮಿನಿ ವಿಧಾನಸೌಧ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವಿದ್ಯುತ್ ಬಿಲ್‌ ಕಳೆದ ಒಂದೂವರೆ ವರ್ಷದಿಂದ ಬಾಕಿಯಿದ್ದು, ಎರಡೂ ಕಟ್ಟಡಗಳ ಬಾಕಿ ಮೊತ್ತವು ಸುಮಾರು 40 ಲಕ್ಷ ರೂ. ಗಡಿ ಸಮೀಪಿಸಿದೆ.

ಬೆಸ್ಕಾಂ ಇಲಾಖೆಯು ಪಾರದರ್ಶಕ ಮತ್ತು ಶಿಸ್ತು ಬದ್ಧವಾಗಿ ವಾಸದ ಮನೆಗಳು ಮತ್ತು ವಾಣಿಜ್ಯ ಕಟ್ಟಡಗಳ ವಿದ್ಯುತ್ ಬಿಲ್‌ಗಳನ್ನು ಪ್ರತಿ ತಿಂಗಳು ತಪ್ಪದೆ ಸಂಗ್ರಹಿಸುತ್ತಿವೆ. ಒಂದು ವೇಳೆ ನಿಗದಿತ ಅವಧಿಯಲ್ಲಿ ಪಾವತಿಸದಿದ್ದಲ್ಲಿ ಕೂಡಲೇ ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಾರೆ. ಆದರೆ, ಡಿಸೆಂಬರ್ ತಿಂಗಳಿಗೆ ತಾಲೂಕು ಆಡಳಿತ ಸಂಕೀರ್ಣವಾಗಿರುವ ಮಿನಿ ವಿಧಾನಸೌಧ ಕಟ್ಟಡದ್ದು 28.85 ಲಕ್ಷ ರೂ. ಮತ್ತು ತಾಯಿ ಮತ್ತು ಮಕ್ಕಳ ಆಸ್ಪತ್ರೆಯದ್ದು 10.96 ಲಕ್ಷ ರೂ. ಸೇರಿ ‌ಒಟ್ಟು 39.81 ಲಕ್ಷ ರೂ. ವಿದ್ಯುತ್‌ ಬಿಲ್‌ ಬಾಕಿ ಉಳಿದಿದ್ದು, ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ.

ತಾಲೂಕು ಆಡಳಿತದ ಕಟ್ಟಡದಲ್ಲಿ ಪ್ರಸ್ತುತ ಕಂದಾಯ ಇಲಾಖೆ ಸೇರಿದಂತೆ ಖಜಾನೆ, ಆಹಾರ ಇಲಾಖೆ, ಭೂಮಾಪನ ಇಲಾಖೆ, ಚುನಾವಣಾ ಶಾಖೆ, ಉಪನೋಂದಣಾಧಿಕಾರಿಗಳ ಕಚೇರಿ, ಕಾರ್ಮಿಕ ಇಲಾಖೆ, ಅಬಕಾರಿ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸ್ಥಳೀಯ ಶಾಸಕ ಮತ್ತು ಚಿಕ್ಕಬಳ್ಳಾಪುರ ವಿಧಾನಸಭೆ ‌ಕ್ಷೇತ್ರದ ಶಾಸಕರ ಕಚೇರಿ ಸೇರಿದಂತೆ ಒಟ್ಟು 10ಕ್ಕೂ ಹೆಚ್ಚು ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವುಗಳಿಂದ ಮಾಸಿಕ ಕಚೇರಿಯ ನಿರ್ವಹಣೆ ‌ಮತ್ತು ಬಾಡಿಗೆ ರೂಪದಲ್ಲಿ ನಿಗಧಿತ ಹಣವನ್ನು ತಾಲೂಕು ಆಡಳಿತ ಪಡೆಯುತ್ತಿದೆ. ಆದರೆ, ಈ ಹಣವು ಕಚೇರಿಯ ಒಳಾಂಗಣ ಮತ್ತು‌ ಹೊರಾಂಗಣ ನಿರ್ವಹಣೆಗೆ ಸಾಕಾಗುತ್ತಿದೆ. ಆದ್ದರಿಂದ ಕಚೇರಿಯ ವಿದ್ಯುತ್ ಬಿಲ್‌ ಅನ್ನು ಸಮರ್ಪಕವಾಗಿ ಕಟ್ಟಲು ಸಾಧ್ಯವಾಗುತ್ತಿಲ್ಲ ಎಂದು ಕಚೇರಿಯ ಸಿಬ್ಬಂದಿ ಹೇಳುತ್ತಿದ್ದಾರೆ.

ತಾಯಿ ಮತ್ತು‌ ಮಕ್ಕಳ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ ನಗರದಲ್ಲಿದ್ದ ಸಾರ್ವಜನಿಕ ಆಸ್ಪತ್ರೆಯನ್ನು ರವಾನಿಸಲಾಗಿದ್ದು ಎರಡೂ ಆಸ್ಪತ್ರೆಗಳು ಒಂದೇ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ. ಇದರ ಸಂಪೂರ್ಣ ಜವಾಬ್ದಾರಿ ಇಲ್ಲಿನ ಆಡಳಿತಾಧಿಕಾರಿಗಳು ನಿರ್ವಹಣೆ ಮಾಡುತ್ತಿದ್ದಾರೆ.

ಎರಡೂ ಕಚೇರಿಗಳು ಸಾರ್ವಜನಿಕ ಸೇವೆಗೆ ಒಳಪಟ್ಟಿರುವ ಕಾರಣ ಬೆಸ್ಕಾಂ ‌ಇಲಾಖೆ ಅಧಿಕಾರಿಗಳು ಕಾನೂನಿನ ಚೌಕಟ್ಟನ್ನು ಸಡಿಲಗೊಳಿಸಿ ಲಕ್ಷಾಂತರ ರೂ. ವಿದ್ಯುತ್ ಬಿಲ್ ಬಾಕಿ‌ ಇದ್ದರೂ ಕೂಡ ವಿದ್ಯುತ್ ಸಂಪರ್ಕ ಕಡಿತಗೊಳಿಸಿಲ್ಲ. ಆದರೆ, ಜನಸಾಮಾನ್ಯರ ವಸತಿ ಕಟ್ಟಡ ಅಥವಾ ವಾಣಿಜ್ಯ ಕಟ್ಟಡಗಳ ವಿದ್ಯುತ್ ಬಿಲ್ 50 ದಿನಗಳ ಒಳಗಾಗಿ ಪಾವತಿ ಮಾಡದಿದ್ದರೆ ಕೂಡಲೇ ಸಂಪರ್ಕ ಕಡಿತಗೊಳಿಸುತ್ತಾರೆ.

ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರ ಮೇಲಿನ ಈ ಧೋರಣೆಯು ಸರ್ಕಾರಿ ಕಚೇರಿಗಳ ಬಾಕಿ ಮೊತ್ತ ಪಡೆಯುವಲ್ಲಿ ತೋರಿಸಲಿ ಎನ್ನುತ್ತಿದ್ದಾರೆ ಸ್ಥಳೀಯರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...