ಚಿಕ್ಕಬಳ್ಳಾಪುರ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಎಡಬ್ಲ್ಯೂಯು ನೌಕರರ ಪ್ರತಿಭಟನೆ

Date:

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘದ(ಎಐಎಡಬ್ಲ್ಯೂಯು) ಮುಖಂಡರು ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಈ ವೇಳೆ ಮಾತನಾಡಿದ ಎ.ಐ.ಎ.ಡಬ್ಲ್ಯೂ.ಯು ಮುಖಂಡರು, “ಕಳೆದ 15 – 20 ವರ್ಷಗಳಿಂದ ಅತಿ ಕಡಿಮೆ ಸಂಬಳಕ್ಕೆ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ವಸತಿ ನಿಲಯ, ಶಾಲಾ- ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಡುಗೆ ಸಹಾಯಕರು, ಸ್ವಚ್ಛತಾ ಸಿಬ್ಬಂದಿ, ಡಿ ದರ್ಜೆ ನೌಕರರಿಗೆ ಸೂಕ್ತ ಭದ್ರತೆ ಇಲ್ಲ. ಇದರಿಂದ ವಾರ್ಡನ್ ಸೇರಿದಂತೆ ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಂದ ಶೋಷಣೆಗೆ ಒಳಗಾಗುತ್ತಿದ್ದೇವೆ” ಎಂದು ಆರೋಪಿಸಿದರು.

“ವಸತಿ ನಿಲಯ ಶಾಲಾ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ನೇರವಾಗಿ ಇಲಾಖೆಯಿಂದಲೇ ವೇತನ ನೀಡಬೇಕು. ನಿವೃತ್ತಿಯವರೆಗೆ ಸೇವಾ ಭದ್ರತೆ ಒದಗಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

10 ವರ್ಷ ಸೇವೆ ಸಲ್ಲಿಸಿರುವ ಹೊರಗುತ್ತಿಗೆ ನೌಕರರನ್ನು ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದಡಿ ತರಬೇಕು. ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ಪರಿಷ್ಕರಣೆ ಸಮಿತಿ ಸಭೆ ಕರೆದು ಕನಿಷ್ಠ 31 ಸಾವಿರ ವೇತನ ನಿಗದಿ ಮಾಡಬೇಕು. ಕಾರ್ಮಿಕ ಇಲಾಖೆಯ ನಿಯಮದಂತೆ ವಾರದ ರಜೆ, ಕೆಲಸದ ಅವಧಿ, ನೇಮಕಾತಿ ಪತ್ರ, ಗುರುತಿನ ಚೀಟಿ, ಇ.ಎಸ್.ಐ ಮತ್ತು ಪಿ.ಎಫ್ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಅದಲ್ಲದೆ, ಪ್ರತಿ ತಿಂಗಳು 5ನೇ ತಾರೀಖು ವೇತನ ಕೊಡಬೇಕು. ಇದುವರೆಗೆ ಬಾಕಿ ಇರುವ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ನಿವೃತ್ತಿ ನಂತರ ಜೀವನ ನಿರ್ವಹಣೆಗೆ 10 ಲಕ್ಷ ಪರಿಹಾರ ಕೊಡಬೇಕು ಎಂದು ಮನವಿ ಮಾಡಿದರು. ಇದೇ ವೇಳೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಪಂ ಸಿಇಒಗೆ ಮನವಿ ಸಲ್ಲಿಸಲಾಯಿತು.

ಇದನ್ನು ಓದಿದ್ದೀರಾ? ತುಮಕೂರು | ಹೊರರಾಜ್ಯಕ್ಕೆ ಮಾರಾಟವಾಗಿದ್ದ 11 ವರ್ಷದ ಬಾಲಕಿಯ ರಕ್ಷಿಸಿದ ಅಧಿಕಾರಿಗಳು

ಪ್ರತಿಭಟನೆಯಲ್ಲಿ ಎ.ಐ.ಎ.ಡಬ್ಲ್ಯೂ.ಯು ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮೆ ಗೌಡ, ಕೃಷಿ ಕೂಲಿಕಾರರ ಸಂಘದ ರಾಜ್ಯ ಉಪಾಧ್ಯಕ್ಷ ಮುನಿವೆಂಕಟಪ್ಪ, ರವಿ, ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನಿಯಪ್ಪ ಕೆ, ಚೆನ್ನರಾಯಪ್ಪ, ಅಮರಾವತಮ್ಮ, ಮಂಜುಳಾ, ವರಲಕ್ಷ್ಮಿ, ನಾಗರತ್ನ, ಮಮತಾ, ಕಾಂತಮ್ಮ ಸೇರಿದಂತೆ ಮತ್ತಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...