ಚಿಕ್ಕಬಳ್ಳಾಪುರ | ವಿವಿಧ ಗ್ರಾಪಂಗಳಲ್ಲಿ ಅಕ್ರಮ; ಭ್ರಷ್ಟರ ವಿರುದ್ಧ ಕ್ರಮಕ್ಕೆ ಅಂಬೇಡ್ಕರ್‌ ಸೇನೆ ಧರಣಿ

Date:

ಜಿಲ್ಲೆಯ ವಿವಿಧ ಗ್ರಾಪಂಗಳ ವ್ಯಾಪ್ತಿಯಲ್ಲಿನ ಗ್ರಾಮ ಠಾಣಾ ಜಾಗವನ್ನು ಕಬಳಿಕೆ ಮಾಡಿ ಖಾಸಗಿ ವ್ಯಕ್ತಿಗಳ ಹೆಸರಲ್ಲಿ ಖಾತೆ ಮಾಡಿಕೊಡಲಾಗಿದೆ. ಹತ್ತಲವು ವರ್ಷಗಳಿಂದ ಅನುಭವದಲ್ಲಿರುವ ದಲಿತರ ಜಾಗಗಳನ್ನು ಒತ್ತುವರಿ ಮಾಡಿಕೊಂಡು ಬೇರೆಯವರಿಗೆ ಖಾತೆ ಮಾಡಿಕೊಡಲಾಗಿದೆ. ಇಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಭ್ರಷ್ಟ ಅಧಿಕಾರಿಗಳನ್ನ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿ ಮಹಾನಾಯಕ ಡಾ.ಬಿ.ಆರ್.‌ಅಂಬೇಡ್ಕರ್‌ ಸೇನೆ ನೇತೃತ್ವದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಚಿಕ್ಕಬಳ್ಳಾಪುರ ನಗರದ ಬಿ.ಆರ್.ಅಂಬೇಡ್ಕರ್‌ ವಸತಿ ನಿಲಯದ ಮುಂಭಾಗದಿಂದ ತಾಲೂಕು ಕಚೇರಿ ಆವರಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ತಾಲೂಕು ಕಚೇರಿ ಆವರಣದಲ್ಲಿ ಧರಣಿ ಕುಳಿತ ಕಾರ್ಯಕರ್ತರು ತಾಲೂಕು ಆಡಳಿತ, ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸದಸ್ಯರ ವಿರುದ್ಧ ಧಿಕ್ಕಾರ ಕೂಗಿದರು.

ambedkar sene 1

ಈ ವೇಳೆ ಮಾತನಾಡಿದ ಮಹಾನಾಯಕ ಡಾ.ಬಿ.ಆರ್.‌ಅಂಬೇಡ್ಕರ್‌ ಸೇನೆ ರಾಜ್ಯಾಧ್ಯಕ್ಷ ಡಿ ವಿ ನಾರಾಯಣಸ್ವಾಮಿ, ಚಿಕ್ಕಬಳ್ಳಾಪುರ ತಾಲೂಕು ಹಾರೋಬಂಡೆ ಗ್ರಾಮ ಪಂಚಾಯಿತಿಯ ಜಡೇನಹಳ್ಳಿಯ ಗ್ರಾಮಠಾಣದಲ್ಲಿ ದಲಿತರಿಗೆ ನಿವೇಶನ ಹಂಚಿಕೆಯಲ್ಲಿ ಅನ್ಯಾಯವಾಗಿದ್ದು, ಈಗಾಗಲೇ ಹಂಚಿಕೆಯಾಗಿರುವ ಹೌಸ್‌ ಲಿಸ್ಟ್‌ಗಳನ್ನು ವಜಾಗೊಳಿಸಿ ದಲಿತರಿಗೆ ಸೂಕ್ತ ನಿವೇಶನ ಹಂಚಿಕೆ ಮಾಡಬೇಕು. ಮತ್ತು ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

30-40 ವರ್ಷಗಳಿಂದ ಅನುಭವದಲ್ಲಿರುವ ದಲಿತರ ಜಾಗಕ್ಕೆ ಗ್ರಾಪಂ ಅಧಿಕಾರಿಗಳು ಮತ್ತು ಸದಸ್ಯರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಕ್ಕದ ಊರಿನವರಿಗೆ ಇ-ಖಾತೆ ಮಾಡಿಕೊಡಲಾಗಿದೆ. ಜಡೇನಹಳ್ಳಿ ಗ್ರಾಮದ ಮನೆ ಸಂಖ್ಯೆ 25 ಗ್ರಾಮಠಾಣ ಜಾಗವಾಗಿದ್ದು, ಸದರಿ ಜಾಗವನ್ನು ಏರ್‌ಟೆಲ್‌ ಟವರ್‌ಗೆ ಬಾಡಿಗೆ ಕೊಡಲಾಗಿದೆ. ಖಾಸಗಿ ವ್ಯಕ್ತಿಗಳು ಬಾಡಿಗೆ ಮತ್ತು ಮುಂಗಡ ಹಣ ಪಡೆದಿದ್ದಾರೆ. ಇದರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆರೋಪಿಸಿದರು.

ambedkar sene1

ತಾಲೂಕಿನ ಆವಲಗುರ್ಕಿ ಗ್ರಾಪಂ ವ್ಯಾಪ್ತಿಯ ಸ.ನಂ 137ರಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಆಶ್ರಯ ಯೋಜನೆಯಡಿಯಲ್ಲಿ ನಿವೇಶನ ಹಂಚಿಕೆ ಮಾಡಲಾಗಿದ್ದು, 21 ಮಂದಿ ದಲಿತರಿಗೆ ಮನೆ ನಿರ್ಮಿಸಿಕೊಡದೆ ಅನ್ಯಾಯ ಮಾಡಲಾಗಿದೆ. ಈ ರೀತಿ ತಾಲೂಕಿನ ಹಲವೆಡೆ ದಲಿತರಿಗೆ ಅನ್ಯಾಯವಾಗುತ್ತಿದ್ದು, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ‘ಕಾಂಗ್ರೆಸ್‌ ಒಂದು ಪಕ್ಷವಾಗುವುದು’ ಯಾವಾಗ?

ಪ್ರತಿಭಟನೆಯಲ್ಲಿ ಅಂಬೇಡ್ಕರ್‌ ಸೇನೆಯ ಜಿಲ್ಲಾಧ್ಯಕ್ಷ ತಿಮ್ಮರಾಜು, ಕೃಷ್ಣಪ್ಪ, ರಾಜು, ಪ್ರಧಾನ ಕಾರ್ಯದರ್ಶಿ ಸಾದಲಿ ಮಂಜುನಾಥ್‌, ನರಸಿಂಹಮೂರ್ತಿ, ಶ್ರೀನಿವಾಸ್‌, ಜ್ಯೋತಿ, ಸುಜಾತ, ಎಚ್.ವಿ.ವೆಂಕಟೇಶ್‌, ಭಾರತಿ, ಲಲಿತ, ಸಾಜನ್‌, ನಾರಾಯಣಸ್ವಾಮಿ ಸೇರಿದಂತೆ ಹಲವು ಮಂದಿ ಕಾರ್ಯಕರ್ತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...