ಚಿಕ್ಕಬಳ್ಳಾಪುರ | ರಸ್ತೆ ವಿಚಾರಕ್ಕೆ ಗಲಾಟೆ; ಕ್ರಷರ್‌ ಮಾಲೀಕನಿಂದ ವ್ಯಕ್ತಿ ಕಾಲಿಗೆ ಗುಂಡೇಟು

Date:

ರಸ್ತೆ ವಿಚಾರಕ್ಕೆ ಕ್ರಷರ್‌ ಮಾಲೀಕ ಮತ್ತು ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕ್ರಷರ್ ಮಾಲೀಕ ವ್ಯಕ್ತಿಯೋರ್ವನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಮಂಚೇನಹಳ್ಳಿ ತಾಲೂಕಿನ ಕಣಗಾನಕೊಪ್ಪ ಗ್ರಾಮದ ಬಳಿ ಬುಧವಾರ ನಡೆದಿದೆ.

ಚಿಕ್ಕಬಳ್ಳಾಪುರ(Chikkaballapur) ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಕಣಗಾನಕೊಪ್ಪ ಬಳಿ ಮಾಜಿ ಎಂಎಲ್‌ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಸಕಲೇಶ್‌ ಎಂಬಾತ ಜಲ್ಲಿ ಕ್ರಷರ್‌ ಪರವಾನಗಿ ಪಡೆದಿದ್ದು, ದಾರಿಯ ವಿಚಾರವಾಗಿ ಸ್ಥಳೀಯರು ಮತ್ತು ಕ್ರಷರ್‌ ಮಾಲೀಕರ ನಡುವೆ ಹಲವು ದಿನಗಳಿಂದ ಗಲಾಟೆ ನಡೆಯುತ್ತಿತ್ತು.

ಕ್ರಷರ್‌ಗೆ ಅವಕಾಶ ಕೊಡಬಾರದು ಎಂದು ಸ್ಥಳೀಯರು ಹಲವು ಬಾರಿ ಪ್ರತಿಭಟನೆಯನ್ನು ನಡೆಸಿದ್ದರು. ಇದೇ ವಿಚಾರವಾಗಿ ಶಾಸಕ ಪ್ರದೀಪ್‌ ಈಶ್ವರ್‌, ಸ್ಥಳೀಯರು ಮತ್ತು ಕ್ರಷರ್‌ ಮಾಲೀಕರನ್ನು ಕರೆಸಿ ಸಂದಾನ ಸಭೆಯನ್ನೂ ನಡೆಸಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಡಿಯೋ ಲಿಂಕ್‌ : https://www.facebook.com/share/v/15DkXUTsv3/

ಬುಧವಾರ ಮಧ್ಯಾಹ್ನದ ಸುಮಾರಿನಲ್ಲಿ ಕ್ರಷರ್‌ ಮಾಲೀಕ ಸಕಲೇಶ್‌ ಸಹಚರರು ಕ್ರಷರ್‌ಗೆ ದಾರಿ ಮಾಡಲು ಮುಂದಾಗಿದ್ದು, ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿದ್ದು, ಕ್ರಷರ್‌ ಮಾಲೀಕ ಸಕಲೇಶ್‌ ರವಿ ಎಂಬಾತನ ಕಾಲಿಗೆ ತನ್ನ ಬಳಿಯಿದ್ದ ಬಂದೂಕಿನಿಂದ ಗುಂಡು ಹಾರಿಸಿ, ಸ್ಥಳೀಯರಿಗೆ ಬೆದರಿಕೆ ಹಾಕಿದ್ದಾನೆ.

Screenshot 2025 04 23 19 05 48 95 99c04817c0de5652397fc8b56c3b3817 1

ಗಾಯಾಳು ರವಿ ಎಂಬಾತನನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಗುಂಡನ್ನು ಹೊರತೆಗೆಯಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಕುಶಾಲ್‌ ಚೌಕ್ಸೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ಮಂಚೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...