ಅಂಬೇಡ್ಕರ್ ವಿವಾದ | ಶಾ ಹೇಳಿಕೆಗೆ ಚಿಕ್ಕಬಳ್ಳಾಪುರ ದಲಿತ ಮುಖಂಡರ ವ್ಯಾಪಕ ಖಂಡನೆ

Date:

“ಕೇಂದ್ರದ ಮೋದಿ ಸರಕಾರ ಅಂಬೇಡ್ಕರ್‌ ವಿರೋಧಿ, ಸಂವಿಧಾನ ವಿರೋಧಿ, ದಲಿತ ವಿರೋಧಿ ಸರಕಾರವಾಗಿದೆ, ಬಹಿಷ್ಕೃತ ಅಮಿತ್‌ ಶಾಗೆ ಅಂಬೇಡ್ಕರ್‌ ಕುರಿತು ಮಾತಾಡುವ ನೈತಿಕತೆ ಇಲ್ಲ, ಹೆಜ್ಜೆಹೆಜ್ಜೆಗೂ ಸಂವಿಧಾನದ ಮೇಲೆ ದಾಳಿ ಮಾಡುತ್ತಿರುವ ಮನುಸಂತಾನ. ಕೋಮುವಾದಿ ಅಮಿತ್‌ ಶಾ ರಾಜೀನಾಮೆ ಕೊಡಬೇಕು, ಕೆಟ್ಟ ಮನಸ್ಥಿತಿಯ ಅಮಿತ್‌ ಶಾನನ್ನು ಸಂಪುಟದಿಂದ ವಜಾಗೊಳಿಸಬೇಕು.”

ಲೋಕಸಭೆಯಲ್ಲಿ ಗೃಹಸಚಿವ ಅಮಿತ್ ಶಾ ಅಂಬೇಡ್ಕರ್ ಅವರ ವಿರುದ್ಧವಾಗಿ ನಾಲಿಗೆ ಹರಿಬಿಟ್ಟಿರುವುದನ್ನು ವಿರೋಧಿಸಿ ಚಿಕ್ಕಬಳ್ಳಾಪುರ ನಗರದಲ್ಲಿ ಗುರುವಾರ ದಲಿತ ಮುಖಂಡರಿಂದ ವ್ಯಕ್ತವಾದ ಖಂಡನೆಯ ಮಾತುಗಳಿವು.

“ಅಂಬೇಡ್ಕರ್..ಅಂಬೇಡ್ಕರ್..ಅಂಬೇಡ್ಕರ್..ಇದೊಂದು ಫ್ಯಾಷನ್‌ ಆಗಿದೆ. ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ, ಅವರಿಗೆ ಸ್ವರ್ಗದಲ್ಲಿ ಸ್ಥಾನವಾದರೂ ದೊರೆಯುತ್ತಿತ್ತು” ಎಂದು ಹೇಳುವ ಮೂಲಕ ಅಮಿತ್ ಷಾ ಬಾಬಾ ಸಾಹೇಬರಿಗೆ ಅಪಮಾನ ಮಾಡಿದ್ದಾರೆ. ಪ್ರಧಾನಿ ಮೋದಿ ಕೂಡಲೇ ಅವರನ್ನು ಸಂಪುಟದಿಂದ ವಜಾಗೊಳಿಸಿ ದೇಶದ ಜನರಿಗೆ ಕ್ಷಮೆಯಾಚಿಸಬೇಕು ಎಂದು ದಲಿತ ಮುಖಂಡರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಈ ದಿನ ಸಂಪಾದಕೀಯ | ‘ಅಂಬೇಡ್ಕರ್‌’- ಅಮಿತ್‌ ಶಾ ಆಡಿದ ಮಾತಲ್ಲ, ಹೊಟ್ಟೆಯೊಳಗಿನ ಹೊಲಸು

ಸುದ್ದಿಗಾರರೊಂದಿಗೆ ಮಾತನಾಡಿದ ದಲಿತ ಮುಖಂಡ ಸುಧಾ ವೆಂಕಟೇಶ್, ಬಿಜೆಪಿ ಸರಕಾರ ಮನುವಾದಿ ಸರಕಾರ ಎಂಬುದನ್ನು ಪದೇ ಪದೇ ಸಾಬೀತು ಮಾಡುತ್ತಿದೆ. ಸಂವಿಧಾನವನ್ನು ಬದಲಾವಣೆ ಮಾಡುವುದಕ್ಕಾಗಿಯೇ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಅಂದಿನ ಸಂಸದ ಅನಂತಕುಮಾರ್ ಹೆಗ್ಗಡೆ ಹೇಳಿದ್ದರು. ಈಗ ಶಾಸನ ಮಾಡುವ ಲೋಕಸಭೆಯಲ್ಲಿಯೇ ಪದೇ ಪದೇ ಅಂಬೇಡ್ಕರ್ ಹೆಸರೇಳುವುದು ತಪ್ಪು. ಬದಲಿಗೆ ದೇವರ ಹೆಸರು ಹೇಳಿ ಎಂದು ಪರೋಕ್ಷವಾಗಿ ಗೃಹಸಚಿವರೇ ಹೇಳುತ್ತಿದ್ದಾರೆ. ಇದನ್ನು ಪ್ರತಿಪಕ್ಷಗಳು ಖಂಡಿಸಿದರೆ ಪ್ರಧಾನಿ ಮೋದಿ, ಶಾ ಹೇಳಿಕೆಯಲ್ಲಿ ತಪ್ಪಿಲ್ಲವೆಂದು ಸಮರ್ಥಿಸಿಕೊಂಡಿದ್ದಾರೆ. ಕೇಂದ್ರದ ಮೋದಿ ಸರಕಾರ ದಲಿತ ವಿರೋಧಿ, ಅಂಬೇಡ್ಕರ್ ವಿರೋಧಿ, ಸಂವಿಧಾನ ವಿರೋಧಿ ಸರಕಾರವಾಗಿದೆ. ಇಲ್ಲಿರುವ ಮನುವಾದಿಗಳಿಂದ ಇದನ್ನಲ್ಲದೆ ಬೇರೇನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.

ಅಂಬೇಡ್ಕರ್ ವಿಶ್ವಶ್ರೇಷ್ಠ ಸಂವಿಧಾನವನ್ನು ಭಾರತಕ್ಕೆ ಕೊಡುಗೆ ನೀಡಿದ್ದರೂ, ಇದರ ಮೂಲಕವೇ ಅಧಿಕಾರಕ್ಕೆ ಬಂದಿರುವ ಬಿಜೆಪಿಯ ಮನುಸಂತಾನ ಹೆಜ್ಜೆಹೆಜ್ಜೆಗೂ ಸಂವಿಧಾನದ ಮೇಲೆ ದಾಳಿ ಮಾಡುತ್ತಲೇ ಬಂದಿದೆ. ಇದನ್ನು ಗ್ರಹಿಸಿಯೇ ದೇಶಕ್ಕೆ ಸಂವಿಧಾನ ಸಮರ್ಪಣೆ ಮಾಡುವ ಸಂದರ್ಭದಲ್ಲಿ ಬಾಬಾ ಸಾಹೇಬರು, “ನಾನು ಭಾರತ ದೇಶಕ್ಕೆ ಒಪ್ಪುವ ಉತ್ತಮ ಸಂವಿಧಾನವನ್ನೇ ನೀಡಿದ್ದೇನೆ. ಆದರೆ ಇದನ್ನು ಜಾರಿಮಾಡುವ ಸ್ಥಾನದಲ್ಲಿ ಕುಳಿತುಕೊಳ್ಳುವ ಜನ ಒಳ್ಳೆಯವರಿದ್ದರೆ, ಒಳ್ಳೆಯದೇ ಆಗಲಿದೆ. ಕೆಟ್ಟವರಿದ್ದರೆ ಕೆಟ್ಟದ್ದೇ ಆಗಲಿದೆ” ಎಂದು ಮಾತೊಂದನ್ನು ಹೇಳಿದ್ದರು. ಅಂಬೇಡ್ಕರ್ ಹೇಳಿರುವ ಮಾತು ಇಂದಿಗೆ ನಿಜವಾಗಿದೆ. ಗುಜರಾತ್‌ನಲ್ಲಿ ಹಲವು ಕೇಸುಗಳನ್ನು ಮೈಮೇಲೆ ಹಾಕಿಸಿಕೊಂಡು ಜೈಲಿಗೆ ಹೋಗಿಬಂದಿದ್ದ, ಗಡಿಪಾರು ಆಗಿದ್ದ ಅಮಿತ್ ಶಾ ಇಂದು ದೇಶದ ಗೃಹಮಂತ್ರಿಯಾಗಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಇಂತಹ ಕೆಟ್ಟ ವ್ಯಕ್ತಿಯನ್ನು ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯಲು ಬಿಡದೆ ರಾಜೀನಾಮೆ ಪಡೆಯಬೇಕು ಎಂದು ಪ್ರಧಾನಿಗಳನ್ನು ಒತ್ತಾಯಿಸಿದರು.

ಮಾಜಿ ನಗರಸಭೆ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ, ಬಹಿಷ್ಕೃತರಾಗಿರುವ ಅಮಿತ್ ಶಾ ಅವರಿಗೆ ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ. ಅವರ ಪಾದದೂಳಿಗೂ ಸಮನಿಲ್ಲದ ಈ ವ್ಯಕ್ತಿ ಅಂಬೇಡ್ಕರ್ ಅವರ ಹೆಸರೇಳುವುದನ್ನು ಸಹಿಸಲ್ಲ ಎಂದರೆ ಎಂತಹ ಕೆಟ್ಟ ಮನುಷ್ಯ ಎನ್ನುವುದು ದೇಶದ ಜನತೆಗೆ ಇದೀಗ ಅರಿವಾಗಿದೆ. ಈತನ ಮಾತನ್ನು ನಾವು ಒಪ್ಪುವುದಿಲ್ಲ. ನೀವು ಕೂಡಲೇ ರಾಜೀನಾಮೆ ಕೊಡಲಿಲ್ಲ ಎಂದರೆ ದೇಶಾದ್ಯಂತ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ದಸಂಸ ರಾಜ್ಯ ಸಂಚಾಲಕ ಬಿ.ವಿ.ಆನಂದ್ ಮಾತನಾಡಿ, ದಲಿತರು ಅಂಬೇಡ್ಕರ್ ಅವರ ಧ್ಯಾನ ಮಾಡದೆ ಇನ್ನಾರನ್ನು ಧ್ಯಾನ ಮಾಡಲು ಸಾಧ್ಯ. ಪ್ರಧಾನಿ ವಿದೇಶಗಳಿಗೆ ಹೋದಾಗ ನಾವು ಬುದ್ದನ ನಾಡಿನಿಂದ ಬಂದಿದ್ದೇವೆ ಎಂದು ಹೇಳುವ ಇವರು ದೇಶದಲ್ಲಿ ಅಂಬೇಡ್ಕರ್ ವಿರುದ್ದ ನಡೆದುಕೊಳ್ಳುತ್ತಿರುವುದು ಖಂಡನೀಯ. ದಸಂಸ ಇದನ್ನು ತೀವ್ರವಾಗಿ ಖಂಡಿಸುತ್ತದೆ. ಇವರು ಗುಜರಾತ್ ಸರಕಾರದಲ್ಲಿ ಗೃಹಮಂತ್ರಿ ಆಗಿದ್ದಾಗ ಗಡಿಪಾರಾಗಿ, ಜೈಲುವಾಸ ಅನುಭವಿಸಿ ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬಂದು ಕೇಂದ್ರದಲ್ಲಿ ಗೃಹಮಂತ್ರಿ ಆಗಿದ್ದಾರೆ. ಇವರು ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಬೇಕು. ಅಲ್ಲಿಯವರೆಗೆ ದಸಂಸ ವಿರಮಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಜಾಗೃತಿ ಕೊರತೆಯಿಂದ ಮಾನವ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ : ನ್ಯಾ.ನೇರಳೆ ವೀರಭದ್ರಯ್ಯ ಭವಾನಿ

ಈ ವೇಳೆ ಮುಖಂಡರಾದ ಕಂಗಾನಹಳ್ಳಿ ನಾರಾಯಣಸ್ವಾಮಿ, ವೆಂಕಟೇಶ್, ರಮಣಪ್ಪ, ಸಾಗರ್ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...