ಚಿಕ್ಕಬಳ್ಳಾಪುರ | ಇನ್‌ಪೆಕ್ಟರ್ ತಪ್ಪಿಗೆ ಸಿಬ್ಬಂದಿ ತಲೆದಂಡ: ಎಸ್‌ಪಿ ನಾಗೇಶ್ ಅಮಾನತಿಗೆ ಆಗ್ರಹ

Date:

ಸಮಸ್ಯೆ ಹೇಳಿಕೊಂಡು ಬಂದ ಪರಿಶಿಷ್ಟರನ್ನು ನಿಂದಿಸಿ, ಜಾತೀಯತೆ ಮೆರೆದಿರುವ ಚಿಕ್ಕಬಳ್ಳಾಪುರ ಎಸ್‌ಪಿ ನಾಗೇಶ್ ಅವರನ್ನು ಅಮಾನತು ಮಾಡಬೇಕು. ಅವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಬೇಕು ಎಂದು ಅಹಿಂದ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಹರಿರಾಮ್ ಒತ್ತಾಯಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಸಾಂವಿಧಾನಿಕವಾಗಿ ನೇಮಕಗೊಂಡು ಅಧಿಕಾರದ ಗದ್ದುಗೆ ಏರುವ ಮೇಲಾಧಿಕಾರಿಗಳೇ ಜಾತೀಯತೆ ಆಚರಣೆ ಮಾಡಿದರೆ, ತಳವರ್ಗದ ಜನರ ಪಾಡು ಏನಾಗಬೇಕು” ಎಂದರು.

“ಪ್ರಕರಣವೊಂದರಲ್ಲಿ ಇನ್ಸ್‌ಪೆಕ್ಟರ್ ಅವರನ್ನು ರಕ್ಷಿಸಲು ಸಿಬ್ಬಂದಿಗಳ ತಲೆದಂಡ ಮಾಡುತ್ತಿದ್ದಾರೆ. ಇಬ್ಬರು ಪೇದೆಗಳನ್ನು 6 ತಿಂಗಳ ಕಾಲ ಅಮಾನತು ಮಾಡಿ ಮಾನಸಿಕ ಹಿಂಸೆ ಕೊಟ್ಟಿದ್ದಾರೆ. ಇದನ್ನು ಕೇಳಲು ಹೆಣ್ಣುಮಕ್ಕಳು ಎಸ್‌ಪಿ ಕಚೇರಿಗೆ ಹೋದಾಗ ಅವರ ವಿರುದ್ಧವೂ ಪ್ರಕರಣ ದಾಖಲಿಸುವುದಾಗಿ ನಾಗೇಶ್‌ ಬೆದರಿಕೆ ಹಾಕಿದ್ದಾರೆ. ಜಾತಿ ನಿಂದನೆ ಮಾಡಿದ್ದಾರೆ. ಅಧಿಕಾರಿಗಳ ದುರ್ವರ್ತನೆ ಖಂಡನೀಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಿಬ್ಬೂರಹಳ್ಳಿ ಠಾಣೆಯ ಇನ್ಸ್‌ಪೆಕ್ಟರ್ ರವಿಕುಮಾರ್ ಹಣ ಬದಲಾವಣೆ ಪ್ರಕರಣದ ಆರೋಪಿಗಳನ್ನು 3 ದಿನಗಳ ಕಾಲ ಅಕ್ರಮವಾಗಿ ಬಂಧನದಲ್ಲಿಟ್ಟುಕೊಂಡಿದ್ದರು. ಅದು ದೊಡ್ಡ ಅಪರಾಧ. ಇದು ಬೆಳಕಿಗೆ ಬಂದ ಬಳಿಕ, ಇನ್ಸ್‌ಪೆಕ್ಟರ್‍‌ನನ್ನು ರಕ್ಷಿಸಲು ಮುಖ್ಯಪೇದೆ ನರಸಿಂಹ ಮೂರ್ತಿ ಹಾಗೂ ಪೇದೆ ಅಶೋಕ್ ಎಂಬುವರನ್ನು ಅಮಾನತು ಮಾಡಲಾಗಿದೆ” ಎಂದು ದೂರಿದ್ದಾರೆ.

“ಅಕ್ರಮವಾಗಿ ಬಂಧನದಲ್ಲಿಟ್ಟಿದ್ದ ಇನ್ಸ್‌ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳಬೇಕು. ಇನ್ಸ್‌ಪೆಕ್ಟರ್ ವಿರುದ್ಧ ಪ್ರಕರಣ ದಾಖಲಿಸಿದಂತೆ ದಲಿತರನ್ನು ಜಾತಿ ನಿಂದನೆ ಮಾಡಿದ ಎಸ್‌ಪಿ ವಿರುದ್ಧವೂ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಭಾಸ್ಕರ ಪ್ರಸಾದ್, ದಲಿತ್ ರಮೇಶ್, ಜನಾರ್ದನ, ನಾಗೇಶ್ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...