ಚಿಕ್ಕಬಳ್ಳಾಪುರ | ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಪಾತ್ರವೂ ಹೊರಬರಲಿ: ನಟ ಚೇತನ್

Date:

“ತನಿಖಾ ಸಂಸ್ಥೆಗಳು ಸರಕಾರದ ತಾಳಕ್ಕೆ ಕುಣಿಯುತ್ತಿವೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾತ್ರ ಕೂಡ ಹೊರಬರಬೇಕು” ಎಂದು ನಟ ಚೇತನ್ ಆಗ್ರಹಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ ಸೇರಿದಂತೆ ಸಾಕಷ್ಟು ಹಗರಣಗಳ ತನಿಖೆ ಮಾಡುವಲ್ಲಿ ಎಸ್.ಐ.ಟಿ ವಿಫಲವಾಗುತ್ತಿದೆ. ಸರಕಾರದ ಕೈಗೊಂಬೆಯಾಗಿ ವರ್ತಿಸುತ್ತಿದೆ” ಎಂದು ಆರೋಪಿಸಿದರು.

“ಮುಡಾ ಹಗರಣದಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ. ಅವರೆಲ್ಲರನ್ನೂ ಪಕ್ಷಾತೀತವಾಗಿ, ಪಾರದರ್ಶಕವಾಗಿ ವಿಚಾರಣೆಗೊಳಪಡಿಸಿ ತನಿಖೆ ನಡೆಸಬೇಕು. ಸಿಎಂ ಸಿದ್ದರಾಮಯ್ಯ ಅದು ಬಿಜೆಪಿ ಅವಧಿಯಲ್ಲಿ ಆಗಿರುವುದು ಎಂದು ಹೇಳುತ್ತಿರುವುದು ಸರಿಯಾದ ಕ್ರಮವಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಧಾನಸೌಧದ ಮುಂಭಾಗದಲ್ಲಿ 25 ಅಡಿ ಉದ್ದದ ಭುವನೇಶ್ವರಿ ಪ್ರತಿಮೆ ಸ್ಥಾಪಿಸಿರುವುದು ಮೌಢ್ಯದ ಪ್ರತೀಕ. ವೈಜ್ಞಾನಿಕ ಮನಸ್ಥಿತಿಯನ್ನೇ ಹೋಗಲಾಡಿಸುವ ಪ್ರಯತ್ನವಿದು. ಇದನ್ನು ಎಲ್ಲರೂ ಖಂಡಿಸಬೇಕು” ಎಂದು ಹೇಳಿದರು.

“ರಾಜ್ಯದ ಕುರಿ ಕಳ್ಳತನ ಹೆಚ್ಚುತ್ತಿರುವ ಕಾರಣ ಕುರಿಗಾಹಿಗಳು ಬಂದೂಕು ವಿತರಣೆ ಮಾಡುವ ಕುರಿತು ಸರಕಾರ ಬಹಳ ದಿನಗಳಿಂದ ಚಿಂತನೆ ನಡೆಸುತ್ತಿದೆ. ಇದೂ ಸಹ ಸರಿಯಾದ ಕ್ರಮವಲ್ಲ. ಇದು ಸಮಾಜದ ಶಾಂತಿ, ಸುರಕ್ಷತೆಗೆ ಹಾನಿಕಾರಕ. ಇದಕ್ಕೆ ಬದಲಾಗಿ ಪೊಲೀಸ್ ವ್ಯವಸ್ಥೆಯಲ್ಲಿ ಸುಧಾರಣೆ ಮಾಡಿ. ನೀವು ಬಂದೂಕು ಕೊಡುತ್ತಿರುವುದು ರಕ್ಷಣೆಗೆ ಅಲ್ಲ. ಮನುಷ್ಯರ ನಡುವಿನ ಸಂಘರ್ಷಕ್ಕೆ ದಾರಿಯಾಗಲಿದೆ” ಎಂದು ನಟ ಚೇತನ್ ಕಳವಳ ವ್ಯಕ್ತಪಡಿಸಿದರು.

ನಟ ಚೇತನ್

ದೇಶದಲ್ಲಿ ಅರಣ್ಯ ಕಬಳಿಕೆ ಹೆಚ್ಚಾಗಿದೆ. ಅರಣ್ಯಗಳು ಪ್ರಪಂಚದ ಶ್ವಾಸಕೋಶಗಳಿದ್ದಂತೆ. ಗೋಮಾಳ ಜಾಗವನ್ನು ಕೈಗಾರಿಕೆ ಮತ್ತು ಭೂ ಮಾಲೀಕರು ಅತಿಕ್ರಮಣ ಮಾಡುತ್ತಿದ್ದಾರೆ. ಪ್ರಾಣಿ ಪಕ್ಷಿಗಳ ಉಳಿವಿಗಾಗಿ, ಧನ, ಕರು, ಕುರಿ ಮೇಕೆಗಳ ಮೇವಿಗಾಗಿ ಗೋಮಾಳಗಳ ರಕ್ಷಣೆ ಆಗಬೇಕಿದೆ ಎಂದು ಹೇಳಿದರು.

ಅಹಿಂದ ಒಕ್ಕೂಟಗಳ ಅಧ್ಯಕ್ಷ, ಹೈಕೋರ್ಟ್ ವಕೀಲ ಹರಿರಾಂ ಮಾತನಾಡಿ, “ಕಾಂಗ್ರೆಸ್ ಸರಕಾರ ಗ್ಯಾರಂಟಿಗಳಿಗಾಗಿ ಬೇರೆ ಮಾರ್ಗ ಅನುಸರಿಸಬಹುದು ಎಂದು ನಾವು ಭಾವಿಸಿದ್ದೆವು. ಆದರೆ, ದಲಿತರ ಜೇಬನ್ನು ಕದಿಯುತ್ತಿರುವ 420 ಕಾಂಗ್ರೆಸ್ ಎಂದು ನಾವು ಊಹಿಸಿರಲಿಲ್ಲ. ದಲಿತರ ಎಸ್‌ಇಪಿ – ಟಿಎಸ್‌ಪಿ ಹಣವನ್ನು ಗ್ಯಾರಂಟಿಗಳ ಅನುಷ್ಠಾನಕ್ಕೆ ಬಳಸಿದೆ. ಕಳೆದ 9 ವರ್ಷಗಳಲ್ಲಿ ಸುಮಾರು 75 ಸಾವಿರ ಕೋಟಿ ದಲಿತರ ಹಣ ದುರ್ಬಳಕೆ ಆಗಿದೆ. ನಿಗಮಗಳಿಗೆ ಹಣ ಬಿಡುಗಡೆ ಆಗುತ್ತಿಲ್ಲ. ದಲಿತರ ನಿಯೋಗ ಇದೆಲ್ಲವನ್ನೂ ಪ್ರಶ್ನೆ ಮಾಡಲು ಹೋದಾಗ ಅವರ ಮೇಲೆ ಕೇಸು ಹಾಕಲಾಗಿದೆ” ಎಂದು ಕಿಡಿಕಾರಿದರು.

ಪಿ.ಟಿ.ಸಿ.ಎಲ್ ಕಾಯ್ದೆಯ ಪರಿಣಾಮ ದಲಿತರು ಭೂಮಿ ಕಳೆದುಕೊಂಡರು. ಅಧಿಕಾರಿಗಳು ದಲಿತರ ವಿರುದ್ಧವಾಗಿ ಆದೇಶ ಮಾಡುತ್ತಿದ್ದಾರೆ. ಎಸಿ, ಡಿಸಿಗಳನ್ನ ನಿಯಂತ್ರಣ ಮಾಡಲು ಸರಕಾರಕ್ಕೆ ಸಾಧ್ಯವಾಗುತ್ತಿಲ್ಲ. ಅವರನ್ನ ರಕ್ಷಣೆ ಮಾಡುವ ಕೆಲಸಕ್ಕೆ ಸರಕಾರ ಮುಂದಾಗುತ್ತಿದೆ ಎಂದು ಗುಡುಗಿದರು.

ಭೂಮಿ ಮಂಜೂರು ಸಮಿತಿ ಅಧ್ಯಕ್ಷರಾಗಿರುವ ಶಾಸಕರ ಸಂಬಂಧಿಯೊಬ್ಬರು 150 ಕೋಟಿ ಬೆಲೆಬಾಳುವ ಜಮೀನನ್ನು ದಲಿತರ ವಿರುದ್ಧವಾಗಿ ಆದೇಶ ಮಾಡಿದ್ದಾರೆ. ಜನಪ್ರತಿನಿಧಿಗಳ ಅಷ್ಟೇ ಅಲ್ಲ, ಅವರ ಕೆಳಗಿನ ಅಧಿಕಾರಿ ವರ್ಗವೂ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅಂತವರನ್ನು ಕಾಪಾಡುವ ಕೆಲಸಕ್ಕೆ ಸರಕಾರ ಮುಂದಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬರಲು ಶೇ.85 ರಷ್ಟು ದಲಿತರು, ಶೇ.95 ರಷ್ಟು ಮುಸ್ಲಿಮರ ಮತಗಳೇ ಕಾರಣ. ಆದರೆ ಸರಕಾರದಲ್ಲಿ ದಲಿತರಿಗೆ ಉನ್ನತ ಅಧಿಕಾರ ಇಲ್ಲ. ಸಿದ್ದರಾಮಯ್ಯ ಒಬ್ಬರಿದ್ದರೆ ದಲಿತರು ಇದ್ದಂತಲ್ಲ. ಇದು ಸರ್ವಾಧಿಕಾರಿ ಧೋರಣೆ. ಹೀಗಾಗಿ, ಬಿಜೆಪಿ ವಿರುದ್ಧ ಪ್ರಶ್ನೆ ಮಾಡುವ ನೈತಿಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಎಂದರು.

ಇದನ್ನು ಓದಿದ್ದೀರಾ? ಉಡುಪಿ | ವೈದ್ಯ ಡಾ. ಕೀರ್ತನ್ ಉಪಾಧ್ಯರಿಂದ ಮುಸ್ಲಿಮರ ಬಗ್ಗೆ ದ್ವೇಷದ ಟ್ವೀಟ್; ಎಫ್‌ಐಆರ್ ದಾಖಲು

ಕಾಂಗ್ರೆಸ್ ಅವಧಿಯಲ್ಲಿ ದಲಿತರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. ಕೋಲಾರದ ಪೊಲೀಸ್ ಅಧಿಕಾರಿ ಒಬ್ಬ ಕೇವಲ ಎರಡೇ ದಿನಗಳಲ್ಲಿ 90 ಜನರಿಗೆ ನೋಟಿಸ್ ನೀಡಿ ಬಿ – ರಿಪೋರ್ಟ್ ಕೊಟ್ಟಿದ್ದಾರೆ. ಇದು ಸಾಧ್ಯವಾ? ಗೃಹ ಸಚಿವರಿಗೆ ಇದರ ಪ್ರಜ್ಞೆ ಇಲ್ಲ. ಸರಕಾರ ಇದನ್ನ ಗಂಭೀರವಾಗಿ ಪರಿಗಣಿಸಬೇಕು. ಇಷ್ಟೆಲ್ಲಾ ಆದರೂ ದಲಿತ ಸಂಘಟನೆಗಳು, ದಲಿತ ನಾಯಕರು ಸುಮ್ಮನಿರುವುದು ದೊಡ್ಡ ದುರಂತ. ಸಿದ್ದರಾಮಯ್ಯ ಅವರ ವಕ್ತಾರರಂತೆ ವರ್ತಿಸುತ್ತಿರುವುದು ಆತಂಕಕಾರಿ ಬೆಳವಣಿಗೆ. ಇದರ ಬಗ್ಗೆ ಯುವಜನರು ಧ್ವನಿ ಎತ್ತಬೇಕು” ಎಂದು ಹರಿರಾಂ ಆಗ್ರಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...