ಚಿಕ್ಕಬಳ್ಳಾಪುರ | ನಾಳೆ ನಗರಸಭಾ ಚುನಾವಣೆ: ಜೆಡಿಎಸ್‌ ಸದಸ್ಯರು ನಾಪತ್ತೆ; ಆತಂಕದಲ್ಲಿ ಮುಖಂಡರು

Date:

ಕಳೆದ ನಾಲ್ಕೈದು ದಿನಗಳಿಂದ ಚಿಕ್ಕಬಳ್ಳಾಪುರ ನಗರಸಭಾ ಜೆಡಿಎಸ್‌ ಸದಸ್ಯರಾದ ವೀಣಾ ರಾಮು, ಮಟಮಪ್ಪ ಅವರು ಸಂಪರ್ಕಕ್ಕೆ ಸಿಗದೆ ಕಾಣೆಯಾಗಿದ್ದಾರೆ. ಇದು ಜೆಡಿಎಸ್‌ ನಾಯಕರಲ್ಲಿ ಆತಂಕ ಮೂಡಿಸಿದ್ದು, ಚಿಕ್ಕಬಳ್ಳಾಪುರ ನಗರಸಭೆಯ ಅಧಿಕಾರ ಕೈತಪ್ಪುವ ಆತಂಕದಲ್ಲಿದ್ದಾರೆ.

ಜೆಡಿಎಸ್‌ ಬೆಂಬಲಿತ ಸದಸ್ಯರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಬುಧವಾರ ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಸುದ್ದಿಗೋಷ್ಠಿ ನಡೆಸಿರುವ ಜೆಡಿಎಸ್‌ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ, ಜೆಡಿಎಸ್‌ ಸದಸ್ಯರು ಸಂಪರ್ಕಕ್ಕೆ ಲಭ್ಯರಾಗಿಲ್ಲ. ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿಯವರ ಆದೇಶದಂತೆ ವಿಪ್‌ ಜಾರಿಗೊಳಿಸಿ, ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

“ಮಟಮಪ್ಪ ಮತ್ತು ವೀಣಾ ರಾಮು ಅವರು ಇಷ್ಟು ದಿನಗಳಿಂದ ಪಕ್ಷದ ಎಲ್ಲ ಸಭೆಗಳಲ್ಲೂ ನಮ್ಮೊಂದಿಗಿದ್ದು, ಸಹಮತ ಸೂಚಿಸಿದ್ದರು. ಇದೀಗ ಇದ್ದಕ್ಕಿದ್ದಂತೆ ಸಂಪರ್ಕಕ್ಕೆ ಸಿಗದಂತಾಗಿದ್ದಾರೆ. ಇದಕ್ಕೆ ಕಾರಣ ತಿಳಿದಿಲ್ಲ. ಆದರೆ, ಅವರಿಬ್ಬರು ಎನ್‌ಡಿಎ ಒಕ್ಕೂಟ ಸೂಚಿಸುವ ಅಭ್ಯರ್ಥಿಗೆ ಮತ ನೀಡುತ್ತಾರೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ನಂಬಿಕೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಚಿಕ್ಕಬಳ್ಳಾಪುರ 10

ಜೆಡಿಎಸ್‌ ಪಕ್ಷದ ಸಹಕಾರದಿಂದ ಮಟಮಪ್ಪ, ವೀಣಾ ರಾಮು ಅವರು ಗೆದ್ದಿದ್ದಾರೆ. ಅದರಂತೆ ನಾಳೆ ನಡೆಯುವ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗೆ ಬೆಂಬಲ ಕೊಡಬೇಕು. ಒಂದು ವೇಳೆ ಅವರ ನಿರ್ಧಾರಗಳು ಬದಲಾದರೆ ಪಕ್ಷದ ಮುಖಂಡರೆಲ್ಲರೂ ಸಭೆ ಸೇರಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಶಿವಮೊಗ್ಗ | ರಾಗಿಗುಡ್ಡ ಬಡಾವಣೆಯಲ್ಲಿ ಹಿಂದೂ–ಮುಸ್ಲಿಮರ ಸೌಹಾರ್ದತೆಗೆ ಸಾಕ್ಷಿಯಾದ ಗಣೇಶೋತ್ಸವ

ಜಿಲ್ಲಾ ಕಾರ್ಯದರ್ಶಿ ಕೆ.ಆರ್.ರೆಡ್ಡಿ ಮಾತನಾಡಿ, ರಾಜ್ಯಾಧ್ಯಕ್ಷರು ಈಗಾಗಲೇ ವಿಪ್‌ ಜಾರಿಗೊಳಿಸಲು ಆದೇಶ ನೀಡಿದ್ದಾರೆ. ಅದರಂತೆ ವಿಪ್‌ ಜಾರಿಗೊಳಿಸುತ್ತೇವೆ. ಅವರ ತೀರ್ಮಾನ ಏನಿದೆ ಎಂಬುದನ್ನು ನಾಳೆಯವರೆಗೆ ಕಾದುನೋಡಬೇಕಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುನಿರಾಜು ಕೊಳವನಹಳ್ಳಿ, ಕಿಸಾನ್‌ ಕೃಷ್ಣಪ್ಪ, ಶಿಲ್ಪಾ ಗೌಡ ಹಾಗೂ ಇತರರಿದ್ದರು.

ಈ ಬಾರಿ ನಗರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಅಭ್ಯರ್ಥಿಗೆ ಮೀಸಲಿರಿಸಲಾಗಿದ್ದು, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟರಿಗೆ ಮೀಸಲಾಗಿದೆ. ನಾಳೆಯೇ(ಸೆ.12ರಂದು) ನಗರಸಭೆ ಚುನಾವಣೆ ನಡೆಯಲಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...