ಚಿಕ್ಕಬಳ್ಳಾಪುರ | ಸಂವಿಧಾನದ ಪೀಠಿಕೆ ಅಡಿಯಲ್ಲಿ ಕೆಲಸ ಮಾಡಬೇಕು: ಎನ್ ವೆಂಕಟೇಶ್

Date:

ಸಮಾನತೆ, ಸಹೋದರತೆ ಭ್ರಾತೃತ್ವವನ್ನು ಸಾರುವ ಭಾರತದ ಸಂವಿಧಾನದ ಪೀಠಿಕೆ ಅಡಿಯಲ್ಲಿ ನಾವು ಕೆಲಸ ಮಾಡಬೇಕು. ಸಂವಿಧಾನದ ಆಶಯದಂತೆ ಎಲ್ಲರು ಸಮಾನತೆಯಿಂದ ಬದುಕಲು ನಾವೆಲ್ಲ ಕೆಲಸ ಮಾಡಬೇಕು ಎಂದು ದಲಿತ ಸಂಘರ್ಷ ಸಮಿತಿ (ದಸಂಸ) ಹಿರಿಯ ಮುಖಂಡ ಎನ್ ವೆಂಕಟೇಶ್ ಹೇಳಿದರು.

ಚಿಕ್ಕಬಳ್ಳಾಪುರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ದಸಂಸ ಆಯೋಜಿಸಿದ್ದ ’ಬಡವರ ಗ್ಯಾರಂಟಿಗಳು ದೇಶದ ವಾರಂಟಿಗಳು’ ಎಂಬ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. “ದೇಶವನ್ನು ಕಟ್ಟುವುದರಲ್ಲಿ ಭಾಗಿಯಾಗುತ್ತಿರುವ ಬಡವರ ದೃಷ್ಟಿಕೋನದಿಂದ ಯೋಚಿಸಿ ಸರ್ಕಾರಗಳು ಯೋಜನೆಗಳನ್ನು ರೂಪಿಸುವುದು ಅತ್ಯಾವಶ್ಯವಾಗಿದೆ” ಎಂದರು.

ಉಪನ್ಯಾಸಕ ಬಿ.ಸಿ ಬಸವರಾಜ್ ಮಾತನಾಡಿ, “ಮುಖ್ಯ ವಾಹಿನಿಯ ಮಾಧ್ಯಮಗಳು ‘ಗ್ಯಾರಂಟಿ ಯೋಜನೆಗಳಿಂದ ಆಗುವ ಪ್ರಯೋಜನ ಏನು? ಅನಾನುಕೂಲ ಏನು’ ಎಂಬ ಚರ್ಚೆ ಮಾಡಬೇಕಿತ್ತು. ಆದರೆ, ಅವರು ಅತ್ಯಂತ ಬೇಜಾವಾಬ್ದಾರಿಯಿಂದ ಗ್ಯಾರಂಟಿ ಯೋಜನೆಗಳ ವಿರುದ್ದ ಯುದ್ಧೋಪಾದಿಯಲ್ಲಿ ಸುದ್ದಿಗಳನ್ನು ಬಿತ್ತರಿಸುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳು ಮತ್ತು ಅವುಗಳ ಪ್ರಯೋಜನಗಳ ಬಗ್ಗೆ ಕಾಂಗ್ರೆಸ್‌ ಸಚಿವರಲ್ಲಿಯೇ ಮಾಹಿತಿ ಕೊರತೆ ಇದೆ. ಇಂತಹ ಚರ್ಚೆ ಹಾಗೂ ಕಾರ್ಯಾಗಾರಗಳನ್ನು ಮೊದಲು ಕಾಂಗ್ರೆಸ್‌ ಸಚಿವರಿಗೆ ಮಾಡಬೇಕಿದೆ. ಕಲ್ಯಾಣ ಯೋಜನೆಗಳು ಬಿಟ್ಟಿ ಭಾಗ್ಯಗಳಲ್ಲ. ಶ್ರೀಮಂತ ಕಂಪನಿಗಳಿಗೆ ಅನಾವಶ್ಯಕ ಸಾಲಗಲನ್ನು ಕೊಡಲಾಗಿದೆ. ಆ ಸಾಲಗಳು ನಿಜವಾದ ಬಿಟ್ಟಿ ಭಾಗ್ಯಗಳು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಈದಿನ.ಕಾಮ್‌ನ ಡಾ. ಎಚ್.ವಿ ವಾಸು, ದಸಂಸ ಮುಖಂಡ ರಾಜಕಾಂತ್, ಮುನಿರೆಡ್ಡಿ, ಸಿ.ಜಿ ಗಂಗಪ್ಪ, ಬಿ.ವಿ ಆನಂದ್, ಬಿ.ವಿ ವೆಂಕಟರವಣಪ್ಪ, ಚಲಪತಿ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...