ಚಿಕ್ಕಬಳ್ಳಾಪುರ | ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ರೈತ ಸಂಘ ತೀರ್ಮಾನಿಸಿದೆ: ವೀರಸಂಗಯ್ಯ

Date:

ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ‘ಬಿಜೆಪಿ ಮತ್ತು ಮಿತ್ರ ಪಕ್ಷಗಳನ್ನು ಸೋಲಿಸಿ – ರೈತ ಸಮುದಾಯವನ್ನು ಉಳಿಸಿ’ ಅಭಿಯಾನ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘ ತೀರ್ಮಾನಿಸಿದೆ ಎಂದು ರೈತ ಸಂಘದ ಕಾರ್ಯಾಧ್ಯಕ್ಷ ಜೆ.ಎಂ ವೀರಸಂಗಯ್ಯ ಹೇಳಿದರು.

ಚಿಕ್ಕಬಳ್ಳಾಪುರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “10 ವರ್ಷದ ಮೋದಿ ನೇತೃತ್ವದ ಎನ್.ಡಿ.ಎ ಆಡಳಿತದಲ್ಲಿ ರೈತ ಸಮುದಾಯವನ್ನು ನಿರ್ಲಕ್ಷಿಸಿ ಕೃಷಿ ಕ್ಷೇತ್ರವನ್ನು ಕಾರ್ಪೊರೇಟ್ ವಲಯಕ್ಕೆ ಒಪ್ಪಿಸುವ ಕೆಟ್ಟ ನೀತಿಗಳು ರೂಪುಗೊಂಡಿವೆ. ಹಾಗಾಗಿ ಎನ್.ಡಿ.ಎ ಒಕ್ಕೂಟ ಮತ್ತೊಮ್ಮೆ ಅಧಿಕಾರಕ್ಕೆ ಬಂದಲ್ಲಿ ಇಡೀ ರೈತ ಕುಲ ನಾಶವಾಗಲಿದೆ” ಎಂದು ಕಿಡಿಕಾರಿದರು.

ಈ ನಿಟ್ಟಿನಲ್ಲಿ ದೆಹಲಿಯಲ್ಲಿ ನಡೆದ ಬೃಹತ್ ರೈತ ಕಾರ್ಮಿಕ ಮಹಾ ಪಂಚಾಯತ್ ನಲ್ಲಿ ಎನ್.ಡಿ.ಎ ಒಕ್ಕೂಟವನ್ನು ಅಧಿಕಾರದಿಂದ ಕಿತ್ತೊಗೆಯಲು ದೇಶದ ರೈತರು ಪ್ರತಿಜ್ಞೆ ಮಾಡಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿಯನ್ನು ಆಲಂಗಿಸಿದ ಜೆಡಿಎಸ್ ರೈತ ಪಕ್ಷವೂ ಅಲ್ಲ, ಜಾತ್ಯಾತೀತ ಪಕ್ಷವೂ ಅಲ್ಲ

ಎನ್.ಡಿ.ಎ ಒಕ್ಕೂಟದಲ್ಲಿರುವ ಜೆಡಿಎಸ್ ಕೂಡ ರೈತಪರ ಪಕ್ಷವಾಗಿ ಉಳಿದಿಲ್ಲ. ಬಿಜೆಪಿಯನ್ನು ಆಳಂಗಿಸಿದ ಜೆಡಿಎಸ್ ರೈತಪಕ್ಷವೂ ಅಲ್ಲ, ಜಾತ್ಯಾತೀತ ಪಕ್ಷವೂ ಅಲ್ಲ. ಜೆಡಿಎಸ್ ತಾನು ರೈತಪರ ಪಕ್ಷ ಎಂದು ಕರೆದುಕೊಳ್ಳುತ್ತಿರುವುದು ನಕಲಿ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ 1,00,474 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತ ಚಳುವಳಿಗಳಲ್ಲಿ ಸುಮಾರು 754 ಜನ ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಚುನಾವಣೆಗೂ ಮುನ್ನ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಸ್ವಾಮಿನಾಥನ್ ವರದಿ ಅನ್ವಯ ಕೃಷಿ ಉತ್ಪನ್ನಗಳಿಗೆ ಎಂ.ಎಸ್.ಪಿ ನೀಡುವುದಾಗಿ ಹೇಳಿತ್ತು. ಆದರೆ, ಓಟು ಪಡೆದು ಗೆದ್ದ ನಂತರ ಎಂ.ಎಸ್.ಪಿ ನೀಡಲು ಸಾಧ್ಯವಿಲ್ಲ ಎಂದು ಹೇಳಿ ರೈತರಿಗೆ ಮೋಸ ಮಾಡಿದೆ. ರೈತರ ಸಾಲವನ್ನು ಮನ್ನಾ ಮಾಡುವುದಾಗಿ ತಿಳಿಸಿ, ರೈತರನ್ನು ಮತ್ತಷ್ಟು ಸಾಲದ ಸುಳಿಗೆ ಸಿಲುಕಿಸಿದೆ. ರೈತರ ಆದಾಯ ದ್ವಿಗುಣಗೊಳಿಸುವ ಬದಲು ಕೃಷಿ ಸಬ್ಸಿಡಿ ಕಡಿತಗೊಳಿಸಿದೆ. ಕೃಷಿ ಪರಿಕರಗಳ ಬೆಲೆ ಹೆಚ್ಚಳ ಮಾಡಿ ಕೃಷಿ ಉತ್ಪನ್ನಗಳ ಬೆಲೆ ದ್ವಿಗಿನಗೊಳಿಸಿದೆ ಎಂದು ಆರೋಪ ಮಾಡಿದರು.

ಮನರೇಗಾ ಯೋಜನೆಯಡಿ 100 ದಿನ ಉದ್ಯೋಗ ನೀಡುವ ಬದಲು 44 ದಿನಕ್ಕೆ ಇಳಿಸಲಾಗಿದೆ. ಸೂಕ್ತ ರೀತಿಯಲ್ಲಿ ದಿನಗೂಲಿ ಪಾವತಿ ಮಾಡುತ್ತಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವ ಬದಲಾಗಿ ಉದ್ಯೋಗ ಕಿತ್ತುಕೊಳ್ಳುವ ಕೆಲಸಕ್ಕೆ ಎನ್.ಡಿ.ಎ ಒಕ್ಕೂಟ ಮುಂದಾಗಿದೆ ಎಂದು ದೂರಿದರು.

18 ಸಾವಿರ ಕೋಟಿ ಬರ ಪರಿಹಾರ ನೀಡದ ಕೇಂದ್ರ ಸರ್ಕಾರ

ರಾಜ್ಯದ 223 ತಾಲೂಕುಗಳಿಗೆ ಬರಬೇಕಿರುವ 18 ಸಾವಿರ ಬರ ಪರಿಹಾರದ ಪೈಕಿ ಒಂದು ಪೈಸೆ ಹಣವನ್ನು ಸಹ ಬಿಡುಗಡೆ ಮಾಡದೆ ರೈತರನ್ನು ವಂಚಿಸಿದೆ. ಇದಲ್ಲದೆ ಬೆಲೆ ಕುಸಿತದಿಂದ ಕೊಬ್ಬರಿ, ಕಾಫಿ ಬೆಳೆಗಾರರು ಕಂಗಾಲಾಗಿದ್ದಾರೆ. ಬೆಲೆ ಏರಿಕೆ, ಪೆಟ್ರೋಲ್, ಡೀಸೆಲ್ ಬೆಲೆ ದುಬಾರಿ ಮಾಡಿ ಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದರು.

ಪ್ರಜಾಪ್ರಭುತ್ವ, ಸಂವಿಧಾನ ನಾಶ ಮಾಡಲು ಬಿಜೆಪಿ ಮುಂದಾಗಿದೆ

ಪ್ರಜಾಪ್ರಭುತ್ವ, ಸಂವಿಧಾನವನ್ನು ನಾಶ ಮಾಡಲು ಕೇಂದ್ರ ಸರಕಾರ ಮುಂದಾಗಿದೆ ಎಂದು ರೈತ ಸಂಘದ ಕಾರ್ಯದರ್ಶಿ ಚಂದ್ರಶೇಖರ್ ಕಿಡಿಕಾರಿದರು.

ಬಿಜೆಪಿ ತಿರಸ್ಕರಿಸಲು ಮನೆಗೊಂದು ಕರಪತ್ರ ಅಭಿಯಾನ

ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರತಿ ಗ್ರಾಮಕ್ಕೆ ತೆರಳಿ ಮನೆಗೊಂದು ಕರಪತ್ರ ಹಂಚಿ ಬಿಜೆಪಿ ಹಾಗೂ ಮಿತ್ರ ಪಕ್ಷಗಳನ್ನು ತಿರಸ್ಕರಿಸುವಂತೆ ಸಂಘ ಮನವಿ ಮಾಡಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ ರೆಡ್ಡಿ, ಪದಾಧಿಕಾರಿಗಳಾದ ವೆಂಕಟಸ್ವಾಮಿ, ಅರುಣ್ ಕುಮಾರ್, ಕೋಟೆ ಚನ್ನೇಗೌಡ, ಮಾರುತಿ ಮುಂತಾದವರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...